<p><strong>ದಾವಣಗೆರೆ</strong>: ‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೂ ಸರಿಯೇ, ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲೇಬೇಕು’ ಎಂದು ಸ್ವಾಭಿಮಾನಿ ಬಳಗದ ಸಂಸ್ಥಾಪಕ ಅಧ್ಯಕ್ಷ ಜಿ.ಬಿ.ವಿನಯ್ಕುಮಾರ್ ಒತ್ತಾಯಿಸಿದರು.</p>.<p>‘ಜಾತಿಗಣತಿ ವರದಿ ಬಿಡುಗಡೆ ಮಾಡುವುದನ್ನು ತಡೆಯುವ ಬಗ್ಗೆ ಚರ್ಚಿಸಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅ.22ರಂದು ಬೆಂಗಳೂರಿನಲ್ಲಿ ಸಮುದಾಯದ ಮುಖಂಡರ ಸಭೆ ಕರೆದಿದೆ. ಸರ್ಕಾರ ಯಾವುದೇ ಸಮುದಾಯದ ಒತ್ತಡಕ್ಕೂ ಮಣಿಯದೇ ವರದಿ ಬಿಡುಗಡೆ ಮಾಡಬೇಕು’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಜಾತಿಗಣತಿ ವರದಿ ಬಿಡುಗಡೆ ಸಿದ್ದರಾಮಯ್ಯ ಅವರಿಂದ ಮಾತ್ರ ಸಾಧ್ಯ. ಅವರು ಮುಖ್ಯಮಂತ್ರಿ ಕುರ್ಚಿಯನ್ನು ಕಳೆದುಕೊಳ್ಳುವ ಸ್ಥಿತಿ ಎದುರಾದರೆ, ವರದಿಯನ್ನು ಬಿಡುಗಡೆ ಮಾಡಿಯೇ ಅಧಿಕಾರದಿಂದ ಕೆಳಗಿಳಿಯಬೇಕು’ ಎಂದರು.</p>.<p>‘ವರದಿ ಅವೈಜ್ಞಾನಿಕವಾಗಿದೆ ಎಂಬ ವಾದ ಸರಿಯಲ್ಲ. ತಜ್ಞರು ವೈಜ್ಞಾನಿಕವಾಗಿಯೇ ವರದಿ ಸಿದ್ಧಪಡಿಸಿದ್ದಾರೆ. ಕಚೇರಿಯಲ್ಲಿ ಕುಳಿತು ತಯಾರಿಸಿಲ್ಲ. 22,200 ಸಿಬ್ಬಂದಿ ರಾಜ್ಯಾದ್ಯಂತ ಓಡಾಡಿ ಮಾಹಿತಿ ಕಲೆ ಹಾಕಿದ್ದಾರೆ’ ಎಂದು ತಿಳಿಸಿದರು.</p>.<p>‘ಸಮಾಜದಲ್ಲಿ ಹಲವು ಜಾತಿಯವರಿಗೆ ರಾಜಕೀಯ ಪ್ರಾತಿನಿಧ್ಯ ಇಲ್ಲವಾಗಿದೆ. ನಿಜವಾದ ಅಂಕಿ ಅಂಶಗಳು ಹೊರ ಬಂದರೆ ಆ ವರ್ಗದವರು ರಾಜಕೀಯ, ಸಾಮಾಜಿಕ ಹಕ್ಕುಗಳಿಗೆ ಆಗ್ರಹಿಸುತ್ತಾರೆ ಎಂಬ ಆತಂಕ ಪ್ರಬಲ ಸಮುದಾಯದವರಿಗಿದೆ. ಇದೇ ಕಾರಣಕ್ಕೆ ಅವರು ವರದಿ ಬಿಡುಗಡೆಯನ್ನು ವಿರೋಧಿಸುತ್ತಿದ್ದಾರೆ’ ಎಂದರು.</p>.<p>‘ರಾಜ್ಯದಲ್ಲಿ ಶೇ 80 ರಷ್ಟಿರುವ ಶೋಷಿತ ವರ್ಗಗಳು ಈ ವರದಿಯನ್ನು ಸ್ವಾಗತಿಸಿವೆ. ಶೇ 15 ರಷ್ಟು ಜನ ವಿರೋಧಿಸುತ್ತಿದ್ದಾರೆ. ಶೇ 5ರಷ್ಟು ಮಂದಿ ತಟಸ್ಥವಾಗಿದ್ದಾರೆ. ಬಹುಜನರ ಮನವಿಯನ್ನು ಸರ್ಕಾರ ಪುರಸ್ಕರಿಸಬೇಕು’ ಎಂದು ಆಗ್ರಹಿಸಿದರು.</p>.<p>ಬಳಗದ ಮುಖಂಡರಾದ ಶಿವಕುಮಾರ ಡಿ. ಶೆಟ್ಟರ್, ಷಣ್ಮುಖಪ್ಪ ಇದ್ದರು.</p>.<div><blockquote>ರಾಜ್ಯದಲ್ಲಿ ಗಣನೀಯ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಜಾತಿಗಣತಿ ವರದಿ ಜಾರಿ ಅನಿವಾರ್ಯವಾಗಿದೆ. ವರದಿ ಆಧಾರದ ಮೇಲೆ ಕಾರ್ಯಕ್ರಮ ರೂಪಿಸಿ ಅನುಷ್ಠಾನಕ್ಕೆ ತರಲಿ</blockquote><span class="attribution"> ಜಿ.ಬಿ.ವಿನಯ್ಕುಮಾರ್ ಸ್ವಾಭಿಮಾನಿ ಬಳಗದ ಸಂಸ್ಥಾಪಕ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೂ ಸರಿಯೇ, ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲೇಬೇಕು’ ಎಂದು ಸ್ವಾಭಿಮಾನಿ ಬಳಗದ ಸಂಸ್ಥಾಪಕ ಅಧ್ಯಕ್ಷ ಜಿ.ಬಿ.ವಿನಯ್ಕುಮಾರ್ ಒತ್ತಾಯಿಸಿದರು.</p>.<p>‘ಜಾತಿಗಣತಿ ವರದಿ ಬಿಡುಗಡೆ ಮಾಡುವುದನ್ನು ತಡೆಯುವ ಬಗ್ಗೆ ಚರ್ಚಿಸಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅ.22ರಂದು ಬೆಂಗಳೂರಿನಲ್ಲಿ ಸಮುದಾಯದ ಮುಖಂಡರ ಸಭೆ ಕರೆದಿದೆ. ಸರ್ಕಾರ ಯಾವುದೇ ಸಮುದಾಯದ ಒತ್ತಡಕ್ಕೂ ಮಣಿಯದೇ ವರದಿ ಬಿಡುಗಡೆ ಮಾಡಬೇಕು’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಜಾತಿಗಣತಿ ವರದಿ ಬಿಡುಗಡೆ ಸಿದ್ದರಾಮಯ್ಯ ಅವರಿಂದ ಮಾತ್ರ ಸಾಧ್ಯ. ಅವರು ಮುಖ್ಯಮಂತ್ರಿ ಕುರ್ಚಿಯನ್ನು ಕಳೆದುಕೊಳ್ಳುವ ಸ್ಥಿತಿ ಎದುರಾದರೆ, ವರದಿಯನ್ನು ಬಿಡುಗಡೆ ಮಾಡಿಯೇ ಅಧಿಕಾರದಿಂದ ಕೆಳಗಿಳಿಯಬೇಕು’ ಎಂದರು.</p>.<p>‘ವರದಿ ಅವೈಜ್ಞಾನಿಕವಾಗಿದೆ ಎಂಬ ವಾದ ಸರಿಯಲ್ಲ. ತಜ್ಞರು ವೈಜ್ಞಾನಿಕವಾಗಿಯೇ ವರದಿ ಸಿದ್ಧಪಡಿಸಿದ್ದಾರೆ. ಕಚೇರಿಯಲ್ಲಿ ಕುಳಿತು ತಯಾರಿಸಿಲ್ಲ. 22,200 ಸಿಬ್ಬಂದಿ ರಾಜ್ಯಾದ್ಯಂತ ಓಡಾಡಿ ಮಾಹಿತಿ ಕಲೆ ಹಾಕಿದ್ದಾರೆ’ ಎಂದು ತಿಳಿಸಿದರು.</p>.<p>‘ಸಮಾಜದಲ್ಲಿ ಹಲವು ಜಾತಿಯವರಿಗೆ ರಾಜಕೀಯ ಪ್ರಾತಿನಿಧ್ಯ ಇಲ್ಲವಾಗಿದೆ. ನಿಜವಾದ ಅಂಕಿ ಅಂಶಗಳು ಹೊರ ಬಂದರೆ ಆ ವರ್ಗದವರು ರಾಜಕೀಯ, ಸಾಮಾಜಿಕ ಹಕ್ಕುಗಳಿಗೆ ಆಗ್ರಹಿಸುತ್ತಾರೆ ಎಂಬ ಆತಂಕ ಪ್ರಬಲ ಸಮುದಾಯದವರಿಗಿದೆ. ಇದೇ ಕಾರಣಕ್ಕೆ ಅವರು ವರದಿ ಬಿಡುಗಡೆಯನ್ನು ವಿರೋಧಿಸುತ್ತಿದ್ದಾರೆ’ ಎಂದರು.</p>.<p>‘ರಾಜ್ಯದಲ್ಲಿ ಶೇ 80 ರಷ್ಟಿರುವ ಶೋಷಿತ ವರ್ಗಗಳು ಈ ವರದಿಯನ್ನು ಸ್ವಾಗತಿಸಿವೆ. ಶೇ 15 ರಷ್ಟು ಜನ ವಿರೋಧಿಸುತ್ತಿದ್ದಾರೆ. ಶೇ 5ರಷ್ಟು ಮಂದಿ ತಟಸ್ಥವಾಗಿದ್ದಾರೆ. ಬಹುಜನರ ಮನವಿಯನ್ನು ಸರ್ಕಾರ ಪುರಸ್ಕರಿಸಬೇಕು’ ಎಂದು ಆಗ್ರಹಿಸಿದರು.</p>.<p>ಬಳಗದ ಮುಖಂಡರಾದ ಶಿವಕುಮಾರ ಡಿ. ಶೆಟ್ಟರ್, ಷಣ್ಮುಖಪ್ಪ ಇದ್ದರು.</p>.<div><blockquote>ರಾಜ್ಯದಲ್ಲಿ ಗಣನೀಯ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಜಾತಿಗಣತಿ ವರದಿ ಜಾರಿ ಅನಿವಾರ್ಯವಾಗಿದೆ. ವರದಿ ಆಧಾರದ ಮೇಲೆ ಕಾರ್ಯಕ್ರಮ ರೂಪಿಸಿ ಅನುಷ್ಠಾನಕ್ಕೆ ತರಲಿ</blockquote><span class="attribution"> ಜಿ.ಬಿ.ವಿನಯ್ಕುಮಾರ್ ಸ್ವಾಭಿಮಾನಿ ಬಳಗದ ಸಂಸ್ಥಾಪಕ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>