<p>ಸಂತೇಬೆನ್ನೂರು: ಮೊದಲ ದಿನವೇ ಕರ್ನಾಟಕ ಪಬ್ಲಿಕ್ ಸ್ಕೂಲ್ನ 1ನೇ ತರಗತಿ ವಿದ್ಯಾರ್ಥಿಗಳು ಗರಿಷ್ಠ ಸಂಖ್ಯೆಯಲ್ಲಿ ಹಾಜರಾಗಿರುವುದು ಸಂತೋಷ ತಂದಿದೆ ಎಂದು ಡಯಟ್ ಹಿರಿಯ ಉಪನ್ಯಾಸಕ ಎಂ.ಮಂಜುನಾಥ ಸ್ವಾಮಿ ಎಂದು ತಿಳಿಸಿದರು. </p>.<p>ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಶುಕ್ರವಾರ ನಡೆದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>‘ಮೊದಲ ದಿನವೇ ಪಠ್ಯಪುಸ್ತಕ, ಸಮವಸ್ತ್ರ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಏರಿಕೆ ಆಗಿದೆ. ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಶೈಕ್ಷಣಿಕ ವರ್ಷದಲ್ಲಿ ವಿನೂತನ ಕಾರ್ಯಕ್ರಮಗಳನ್ನು ಇಲಾಖೆ ರೂಪಿಸಿದೆ’ ಎಂದರು. </p>.<p>ಶಾಲಾ ಆವರಣವನ್ನು ಬಾಳೆ ಕಂದು, ಮಾವಿನ ತೋರಣದಿಂದ ಅಲಂಕರಿಸಲಾಗಿತ್ತು. ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಲಾಯಿತು. ಪಾಯಸದ ಸಿಹಿ ಊಟ ಬಡಿಸಲಾಯಿತು. ಹೋಬಳಿಯ 20 ಸರ್ಕಾರಿ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವ ಗಮನ ಸೆಳೆಯಿತು. </p>.<p>ಡಯಟ್ ಉಪನ್ಯಾಸಕರಾದ ಆರ್.ಜಯನಾಯಕ, ಎಂ.ಆರ್.ನಾಯಕ, ಉಪ ಪ್ರಾಚಾರ್ಯ ಜಯಪ್ಪ, ಸಿಆರ್ಪಿಗಳಾದ ಶಂಕರಗೌಡ, ಕುಸುಮಾ, ಮುಖ್ಯ ಶಿಕ್ಷಕ ಉಜ್ಜಿನಪ್ಪ, ಶಿಕ್ಷಕ ಎಂ.ಬಿ.ನಾಗರಾಜ ಕಾಕನೂರು, ಕೆ.ಬಿ.ಮಂಜಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂತೇಬೆನ್ನೂರು: ಮೊದಲ ದಿನವೇ ಕರ್ನಾಟಕ ಪಬ್ಲಿಕ್ ಸ್ಕೂಲ್ನ 1ನೇ ತರಗತಿ ವಿದ್ಯಾರ್ಥಿಗಳು ಗರಿಷ್ಠ ಸಂಖ್ಯೆಯಲ್ಲಿ ಹಾಜರಾಗಿರುವುದು ಸಂತೋಷ ತಂದಿದೆ ಎಂದು ಡಯಟ್ ಹಿರಿಯ ಉಪನ್ಯಾಸಕ ಎಂ.ಮಂಜುನಾಥ ಸ್ವಾಮಿ ಎಂದು ತಿಳಿಸಿದರು. </p>.<p>ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಶುಕ್ರವಾರ ನಡೆದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>‘ಮೊದಲ ದಿನವೇ ಪಠ್ಯಪುಸ್ತಕ, ಸಮವಸ್ತ್ರ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಏರಿಕೆ ಆಗಿದೆ. ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಶೈಕ್ಷಣಿಕ ವರ್ಷದಲ್ಲಿ ವಿನೂತನ ಕಾರ್ಯಕ್ರಮಗಳನ್ನು ಇಲಾಖೆ ರೂಪಿಸಿದೆ’ ಎಂದರು. </p>.<p>ಶಾಲಾ ಆವರಣವನ್ನು ಬಾಳೆ ಕಂದು, ಮಾವಿನ ತೋರಣದಿಂದ ಅಲಂಕರಿಸಲಾಗಿತ್ತು. ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಲಾಯಿತು. ಪಾಯಸದ ಸಿಹಿ ಊಟ ಬಡಿಸಲಾಯಿತು. ಹೋಬಳಿಯ 20 ಸರ್ಕಾರಿ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವ ಗಮನ ಸೆಳೆಯಿತು. </p>.<p>ಡಯಟ್ ಉಪನ್ಯಾಸಕರಾದ ಆರ್.ಜಯನಾಯಕ, ಎಂ.ಆರ್.ನಾಯಕ, ಉಪ ಪ್ರಾಚಾರ್ಯ ಜಯಪ್ಪ, ಸಿಆರ್ಪಿಗಳಾದ ಶಂಕರಗೌಡ, ಕುಸುಮಾ, ಮುಖ್ಯ ಶಿಕ್ಷಕ ಉಜ್ಜಿನಪ್ಪ, ಶಿಕ್ಷಕ ಎಂ.ಬಿ.ನಾಗರಾಜ ಕಾಕನೂರು, ಕೆ.ಬಿ.ಮಂಜಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>