<p><strong>ದಾವಣಗೆರೆ</strong>: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಶಿಥಿಲಗೊಂಡಿದ್ದ ಸರ್ಕಾರಿ ಕಿರಿಯ ಪ್ರಾಥಮಿಕ ಉರ್ದು ಶಾಲೆಯ ಕೊಠಡಿಯೊಂದರ ಚಾವಣಿ ಕುಸಿದು ಬಿದ್ದ ಘಟನೆ ನಗರದ 45ನೇ ವಾರ್ಡ್ ವ್ಯಾಪ್ತಿಯ ಕರೂರಿನಲ್ಲಿ ಗುರುವಾರ ನಡೆದಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಮಕ್ಕಳನ್ನು ಬೇರೆಡೆ ಸ್ಥಳಾಂತರಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.</p><p>1934ರಲ್ಲಿ ನಿರ್ಮಾಣಗೊಂಡಿರುವ ಶಾಲಾ ಕಟ್ಟಡದ ಕೊಠಡಿಯೊಂದು ಸಂಪೂರ್ಣ ಶಿಥಿಲಾವಸ್ಥೆ ತಲುಪಿತ್ತು. ಇದನ್ನು ಮೊದಲೇ ಗಮನಿಸಿದ ಶಿಕ್ಷಕರು ಈ ಕೊಠಡಿಯನ್ನು ಬಳಸುತ್ತಿರಲಿಲ್ಲ. ಉರ್ದು ಶಾಲೆಯ 1ರಿಂದ 5ನೇ ತರಗತಿಯವರೆಗಿನ ಎಲ್ಲ 11 ಮಕ್ಕಳನ್ನು ಪಕ್ಕದ ಕೊಠಡಿಗೆ ಸ್ಥಳಾಂತರಿಸಲಾಗಿತ್ತು. ಗುರುವಾರ ಮಧ್ಯಾಹ್ನ ಊಟದ ವಿರಾಮದ ಸಂದರ್ಭದಲ್ಲಿ ಶಿಥಿಲಗೊಂಡ ಕೊಠಡಿಯ ಚಾವಣಿಯ ಹೆಂಚುಗಳು ಕುಸಿದು ಬಿದ್ದಿವೆ.</p><p>‘ಉರ್ದು ಮತ್ತು ಕನ್ನಡ ಮಾಧ್ಯಮ ಸರ್ಕಾರಿ ಶಾಲೆ ಒಂದೇ ಕಟ್ಟಡದಲ್ಲಿದೆ. ತೀರಾ ಹಳೆಯದಾದ ಕಟ್ಟಡ ಕುಸಿಯುವ ಹಂತ ತಲುಪಿದೆ. ಚಾವಣಿ ಹಾಳಾಗಿದ್ದು ಮಳೆ ಬಂದಾಗ ಸೋರುತ್ತಿದೆ. ಈ ಕುರಿತು ಇಲಾಖೆಗೆ ಹಲವು ಬಾರಿ ಪತ್ರ ಬರೆಯಲಾಗಿತ್ತು’ ಎಂದು ಶಿಕ್ಷಕರೊಬ್ಬರು ಬೇಸರ ವ್ಯಕ್ತಪಡಿಸಿದರು.</p><p>ಘಟನೆ ತಿಳಿಯುತ್ತಿದ್ದಂತೆ ಶಾಲೆಗೆ ಧಾವಿಸಿದ ಪೋಷಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಮಕ್ಕಳಿಗೆ ತೊಂದರೆ ಆಗಿದ್ದರೆ ಹೊಣೆ ಯಾರು ಎಂದು ಪ್ರಶ್ನಿಸಿದರು. ಶಿಕ್ಷಕರ ಜೊತೆಗೆ ವಾಗ್ವಾದ ನಡೆಸಿದರು.</p><p>‘ಕಟ್ಟಡ ಶಿಥಿಲಗೊಂಡಿರುವ ಬಗ್ಗೆ ಪೋಷಕರು ಶಾಲೆ ಆರಂಭವಾಗುವ ಮುನ್ನವೇ ಕಳವಳ ವ್ಯಕ್ತಪಡಿಸಿದ್ದರು. ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಲು ವರ್ಗಾವಣೆ ಪ್ರಮಾಣ ಪತ್ರ ಕೇಳಿದ್ದರು. ಹೊಸ ಕಟ್ಟಡ ನಿರ್ಮಿಸುವ ಆಶ್ವಾಸನೆ ನೀಡಿ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ಉಳಿಸಿಕೊಂಡದ್ದೆವು. ಈ ಅವಘಡದಿಂದ ಪೋಷಕರು ಇನ್ನಷ್ಟು ಗಾಬರಿಯಾಗಿದ್ದಾರೆ’ ಎಂದು ಶಿಕ್ಷಕರೊಬ್ಬರು ತಿಳಿಸಿದರು.</p><p>ಉತ್ತರ ವಲಯ ವ್ಯಾಪ್ತಿಯ ಕರೂರು ಸರ್ಕಾರಿ ಶಾಲೆಯ ಅಭಿವೃದ್ಧಿಯು ಸ್ಥಳ ವಿವಾದದ ಕಾರಣಕ್ಕೆ ಬಹುದಿನಗಳಿಂದ ನನೆಗುದಿಗೆ ಬಿದ್ದಿದೆ. ಶಾಲೆಗೆ ದಾನ ನೀಡಿದವರು ನ್ಯಾಯಾಲಯದ ಮೊರೆಹೋದ ಪರಿಣಾಮ ಹೊಸ ಕಟ್ಟಡ ನಿರ್ಮಾಣ ಅಸಾಧ್ಯವಾಗಿದೆ. ಶಾಲಾ ಕಟ್ಟಡಕ್ಕೆ ಶಾಸಕರ ನಿಧಿಯಿಂದ ಬಿಡುಗಡೆಯಾಗಿದ್ದ ₹ 27 ಲಕ್ಷ ಅನುದಾನ ಬಳಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದರು.</p><p><strong>ಸಮುದಾಯ ಭವನದಲ್ಲಿ ಶಾಲೆ</strong></p><p>ಹೊಸ ಕಟ್ಟಡ ನಿರ್ಮಾಣವಾಗುವವರೆಗೂ ಕರೂರಿನ ಸಮುದಾಯ ಭವನದಲ್ಲಿ ಶಾಲೆ ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕೆ ಮಕ್ಕಳ ಪೋಷಕರು ಸಮ್ಮತಿ ಸೂಚಿಸಿದ್ದಾರೆ.</p><p>ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಜಿ.ಕೊಟ್ರೇಶ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಆತಂಕಗೊಂಡಿದ್ದ ಪೋಷಕರನ್ನು ಸಮಾಧಾನಪಡಿಸಿ ಚರ್ಚಿಸಲಾಯಿತು. ಸಮುದಾಯ ಭವನದಲ್ಲಿ ಶಾಲೆ ನಡೆಸಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಶಿಥಿಲಗೊಂಡಿದ್ದ ಸರ್ಕಾರಿ ಕಿರಿಯ ಪ್ರಾಥಮಿಕ ಉರ್ದು ಶಾಲೆಯ ಕೊಠಡಿಯೊಂದರ ಚಾವಣಿ ಕುಸಿದು ಬಿದ್ದ ಘಟನೆ ನಗರದ 45ನೇ ವಾರ್ಡ್ ವ್ಯಾಪ್ತಿಯ ಕರೂರಿನಲ್ಲಿ ಗುರುವಾರ ನಡೆದಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಮಕ್ಕಳನ್ನು ಬೇರೆಡೆ ಸ್ಥಳಾಂತರಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.</p><p>1934ರಲ್ಲಿ ನಿರ್ಮಾಣಗೊಂಡಿರುವ ಶಾಲಾ ಕಟ್ಟಡದ ಕೊಠಡಿಯೊಂದು ಸಂಪೂರ್ಣ ಶಿಥಿಲಾವಸ್ಥೆ ತಲುಪಿತ್ತು. ಇದನ್ನು ಮೊದಲೇ ಗಮನಿಸಿದ ಶಿಕ್ಷಕರು ಈ ಕೊಠಡಿಯನ್ನು ಬಳಸುತ್ತಿರಲಿಲ್ಲ. ಉರ್ದು ಶಾಲೆಯ 1ರಿಂದ 5ನೇ ತರಗತಿಯವರೆಗಿನ ಎಲ್ಲ 11 ಮಕ್ಕಳನ್ನು ಪಕ್ಕದ ಕೊಠಡಿಗೆ ಸ್ಥಳಾಂತರಿಸಲಾಗಿತ್ತು. ಗುರುವಾರ ಮಧ್ಯಾಹ್ನ ಊಟದ ವಿರಾಮದ ಸಂದರ್ಭದಲ್ಲಿ ಶಿಥಿಲಗೊಂಡ ಕೊಠಡಿಯ ಚಾವಣಿಯ ಹೆಂಚುಗಳು ಕುಸಿದು ಬಿದ್ದಿವೆ.</p><p>‘ಉರ್ದು ಮತ್ತು ಕನ್ನಡ ಮಾಧ್ಯಮ ಸರ್ಕಾರಿ ಶಾಲೆ ಒಂದೇ ಕಟ್ಟಡದಲ್ಲಿದೆ. ತೀರಾ ಹಳೆಯದಾದ ಕಟ್ಟಡ ಕುಸಿಯುವ ಹಂತ ತಲುಪಿದೆ. ಚಾವಣಿ ಹಾಳಾಗಿದ್ದು ಮಳೆ ಬಂದಾಗ ಸೋರುತ್ತಿದೆ. ಈ ಕುರಿತು ಇಲಾಖೆಗೆ ಹಲವು ಬಾರಿ ಪತ್ರ ಬರೆಯಲಾಗಿತ್ತು’ ಎಂದು ಶಿಕ್ಷಕರೊಬ್ಬರು ಬೇಸರ ವ್ಯಕ್ತಪಡಿಸಿದರು.</p><p>ಘಟನೆ ತಿಳಿಯುತ್ತಿದ್ದಂತೆ ಶಾಲೆಗೆ ಧಾವಿಸಿದ ಪೋಷಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಮಕ್ಕಳಿಗೆ ತೊಂದರೆ ಆಗಿದ್ದರೆ ಹೊಣೆ ಯಾರು ಎಂದು ಪ್ರಶ್ನಿಸಿದರು. ಶಿಕ್ಷಕರ ಜೊತೆಗೆ ವಾಗ್ವಾದ ನಡೆಸಿದರು.</p><p>‘ಕಟ್ಟಡ ಶಿಥಿಲಗೊಂಡಿರುವ ಬಗ್ಗೆ ಪೋಷಕರು ಶಾಲೆ ಆರಂಭವಾಗುವ ಮುನ್ನವೇ ಕಳವಳ ವ್ಯಕ್ತಪಡಿಸಿದ್ದರು. ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಲು ವರ್ಗಾವಣೆ ಪ್ರಮಾಣ ಪತ್ರ ಕೇಳಿದ್ದರು. ಹೊಸ ಕಟ್ಟಡ ನಿರ್ಮಿಸುವ ಆಶ್ವಾಸನೆ ನೀಡಿ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ಉಳಿಸಿಕೊಂಡದ್ದೆವು. ಈ ಅವಘಡದಿಂದ ಪೋಷಕರು ಇನ್ನಷ್ಟು ಗಾಬರಿಯಾಗಿದ್ದಾರೆ’ ಎಂದು ಶಿಕ್ಷಕರೊಬ್ಬರು ತಿಳಿಸಿದರು.</p><p>ಉತ್ತರ ವಲಯ ವ್ಯಾಪ್ತಿಯ ಕರೂರು ಸರ್ಕಾರಿ ಶಾಲೆಯ ಅಭಿವೃದ್ಧಿಯು ಸ್ಥಳ ವಿವಾದದ ಕಾರಣಕ್ಕೆ ಬಹುದಿನಗಳಿಂದ ನನೆಗುದಿಗೆ ಬಿದ್ದಿದೆ. ಶಾಲೆಗೆ ದಾನ ನೀಡಿದವರು ನ್ಯಾಯಾಲಯದ ಮೊರೆಹೋದ ಪರಿಣಾಮ ಹೊಸ ಕಟ್ಟಡ ನಿರ್ಮಾಣ ಅಸಾಧ್ಯವಾಗಿದೆ. ಶಾಲಾ ಕಟ್ಟಡಕ್ಕೆ ಶಾಸಕರ ನಿಧಿಯಿಂದ ಬಿಡುಗಡೆಯಾಗಿದ್ದ ₹ 27 ಲಕ್ಷ ಅನುದಾನ ಬಳಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದರು.</p><p><strong>ಸಮುದಾಯ ಭವನದಲ್ಲಿ ಶಾಲೆ</strong></p><p>ಹೊಸ ಕಟ್ಟಡ ನಿರ್ಮಾಣವಾಗುವವರೆಗೂ ಕರೂರಿನ ಸಮುದಾಯ ಭವನದಲ್ಲಿ ಶಾಲೆ ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕೆ ಮಕ್ಕಳ ಪೋಷಕರು ಸಮ್ಮತಿ ಸೂಚಿಸಿದ್ದಾರೆ.</p><p>ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಜಿ.ಕೊಟ್ರೇಶ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಆತಂಕಗೊಂಡಿದ್ದ ಪೋಷಕರನ್ನು ಸಮಾಧಾನಪಡಿಸಿ ಚರ್ಚಿಸಲಾಯಿತು. ಸಮುದಾಯ ಭವನದಲ್ಲಿ ಶಾಲೆ ನಡೆಸಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>