<p><strong>ಬಸವಾಪಟ್ಟಣ:</strong> ಗ್ರಾಮದ ಸುತ್ತಮುತ್ತಲಿನ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆದಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಪಾಳು ಬಿದ್ದಿದ್ದು, ಈ ಸ್ಥಳವನ್ನು ಸಾರ್ವಜನಿಕರ ಅನುಕೂಲಕ್ಕೆ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಯೋಜನೆ ರೂಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.</p>.<p>1940ರಲ್ಲಿ ಈ ಕಟ್ಟಡದಲ್ಲಿ ಆರಂಭವಾಗಿದ್ದ ಶಾಲೆಯನ್ನು 10 ವರ್ಷಗಳ ಹಿಂದೆ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು. ಈ ಕಟ್ಟಡದಲ್ಲಿ 2014ರಿಂದ 2016ರವರೆಗೆ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಮರ್ಸ್ ತರಗತಿಗಳನ್ನು ತಾತ್ಕಾಲಿಕವಾಗಿ ನಡೆಸಲಾಗಿದ್ದು, ಸ್ವಂತ ಕಟ್ಟಡದ ನಿರ್ಮಾಣದ ನಂತರ ಸ್ಥಳಾಂತರಿಸಲಾಗಿದೆ.ಅಂದಿನಿಂದ ಇಂದಿನವರೆಗೂ ಹಳೆಯ ಕಟ್ಟಡದ ಬಾಗಿಲು ತೆರೆದಿಲ್ಲ.</p>.<p>ಶಾಲೆಯ ಪಕ್ಕದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಹೋಬಳಿ ಕೇಂದ್ರವಾದ ಬಸವಾಪಟ್ಟಣಕ್ಕೆ ಸಮುದಾಯ ಆಸ್ಪತ್ರೆ ತುಂಬಾ ಅಗತ್ಯವಾಗಿದೆ. ಇದಕ್ಕಾಗಿ ಕಟ್ಟಡ ನಿರ್ಮಾಣಕ್ಕೆ ಆರೋಗ್ಯ ಇಲಾಖೆ ಎರಡು ಎಕರೆ ನಿವೇಶನವನ್ನು ಕೇಳುತ್ತಿದೆ. ಪಾಳು ಬಿದ್ದಿರುವ ಕಿರಿಯ ಪ್ರಾಥಮಿಕ ಶಾಲೆಯ ನಿವೇಶನ ಒಂದು ಎಕರೆಯಷ್ಟಿದ್ದು, ಇದು ಸಾರ್ವಜನಿಕ ಶಿಕ್ಷಣ ಇಲಾಖೆಯ ಸುಪರ್ದಿಯಲ್ಲಿದೆ. ಶಿಕ್ಷಣ ಇಲಾಖೆಯು ಈ ನಿವೇಶನವನ್ನು ಆರೋಗ್ಯ ಇಲಾಖೆಗೆ ವಹಿಸಿದರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಜಾಗವನ್ನೂ ಸೇರಿಸಿ ಸುಸಜ್ಜಿತ ಕಟ್ಟಡ ನಿರ್ಮಿಸಿ ಆಸ್ಪತ್ರೆ ಆರಂಭಿಸಿದಲ್ಲಿ ಸುತ್ತಲಿನ ಜನರಿಗೆ ಅನುಕೂಲವಾಗುತ್ತದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಜಿ.ಸಚಿನ್ ಕೋರಿದರು.</p>.<p>ಬಸವಾಪಟ್ಟಣ ನೂರಾರು ವರ್ಷಗಳ ಹಿಂದೆ ಪಾಳೆಯಪಟ್ಟಾಗಿದ್ದು, ಸಾಂಸ್ಕೃತಿಕ ಮತ್ತು ಧಾರ್ಮಿಕ ಕೇಂದ್ರವಾಗಿದೆ. ಪ್ರಾಥಮಿಕ ಶಾಲಾ ಕಟ್ಟಡದ ಜಾಗವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸ್ವಾಧೀನಕ್ಕೆ ಪಡೆದು ಸಮುದಾಯ ಭವನ ನಿರ್ಮಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗುವ ಸಭೆ, ಸಮಾರಂಭ ಆಯೋಜಿಸಲು ಅನುಕೂಲವಾಗುತ್ತದೆ ಎಂದು ಗ್ರಾಮ ಪಂಚಾಯಿತಿ ಹಿರಿಯ ಸದಸ್ಯ ಡಿ.ಆರ್.ಹಾಲೇಶ್ ಅಭಿಪ್ರಾಯಪಟ್ಟರು.</p>.<p>ಬಸವಾಪಟ್ಟಣದಲ್ಲಿ ನಿವೇಶನದ ಕೊರತೆಯಿಂದ ಸರ್ಕಾರಿ ಕಚೇರಿ ಕಟ್ಟಡಗಳನ್ನು ನಿರ್ಮಿಸಲು ಸಾಧ್ಯವಾಗುತ್ತಿಲ್ಲ. ನಾಡ ಕಚೇರಿಯು ಪಾಳು ಬಿದ್ದಿರುವ ನೀರಾವರಿ ಇಲಾಖೆಯ ವಸತಿ ಗೃಹದಲ್ಲಿ ನಡೆಯುತ್ತಿದೆ. ಶಾಲೆಯ ಜಾಗದಲ್ಲಿ ಹೊಸ ನಾಡಕಚೇರಿ ಸೇರಿ ಅರಣ್ಯ ಇಲಾಖೆ, ರಾಜಸ್ವ ನಿರೀಕ್ಷಕರ ಕಚೇರಿ, ಗ್ರಾಮ ಲೆಕ್ಕಿಗರ ಕಚೇರಿ ಮುಂತಾದ ಸರ್ಕಾರಿ ಕಚೇರಿಗಳ ನಿರ್ಮಾಣಕ್ಕೆ ಬಳಸಬಹುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ನಾಗರಾಜ್ ಆಶಯ ವ್ಯಕ್ತಪಡಿಸಿದರು.</p>.<p>ಹತ್ತಾರು ವರ್ಷಗಳಿಂದ ಪಾಳು ಬಿದ್ದಿರುವ ಶಾಲಾ ಕಟ್ಟಡವನ್ನು ತೆರವುಗೊಳಿಸಿ, ಇಲ್ಲಿ ಸರ್ಕಾರಿ ಕಚೇರಿ ಕಟ್ಟಡಗಳ ಸಮುಚ್ಛಯವನ್ನು ನಿರ್ಮಿಸಿದರೆ ಹೋಬಳಿ ಕೇಂದ್ರವಾದ ಗ್ರಾಮದಲ್ಲಿ ಹಲವಾರು ಸರ್ಕಾರಿ ಇಲಾಖೆಗಳ ಕಚೇರಿಗಳು ಕಾರ್ಯಾರಂಭ ಮಾಡಲು ಸಾಧ್ಯವಿದೆ. ಶಾಸಕರು, ಸಂಸದರು ಮತ್ತು ಇತರ ಜನಪ್ರತಿನಿಧಿಗಳು ಈ ನಿವೇಶನವನ್ನು ಸಾರ್ವತ್ರೀಕರಿಸಿದರೆ ಶ್ಲಾಘನೀಯ ಕಾರ್ಯವಾಗುತ್ತದೆ ಎಂದು ಸಾಹಿತಿ ನಿಲೋಗಲ್ ರಂಗನಗೌಡ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಾಪಟ್ಟಣ:</strong> ಗ್ರಾಮದ ಸುತ್ತಮುತ್ತಲಿನ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆದಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಪಾಳು ಬಿದ್ದಿದ್ದು, ಈ ಸ್ಥಳವನ್ನು ಸಾರ್ವಜನಿಕರ ಅನುಕೂಲಕ್ಕೆ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಯೋಜನೆ ರೂಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.</p>.<p>1940ರಲ್ಲಿ ಈ ಕಟ್ಟಡದಲ್ಲಿ ಆರಂಭವಾಗಿದ್ದ ಶಾಲೆಯನ್ನು 10 ವರ್ಷಗಳ ಹಿಂದೆ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು. ಈ ಕಟ್ಟಡದಲ್ಲಿ 2014ರಿಂದ 2016ರವರೆಗೆ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಮರ್ಸ್ ತರಗತಿಗಳನ್ನು ತಾತ್ಕಾಲಿಕವಾಗಿ ನಡೆಸಲಾಗಿದ್ದು, ಸ್ವಂತ ಕಟ್ಟಡದ ನಿರ್ಮಾಣದ ನಂತರ ಸ್ಥಳಾಂತರಿಸಲಾಗಿದೆ.ಅಂದಿನಿಂದ ಇಂದಿನವರೆಗೂ ಹಳೆಯ ಕಟ್ಟಡದ ಬಾಗಿಲು ತೆರೆದಿಲ್ಲ.</p>.<p>ಶಾಲೆಯ ಪಕ್ಕದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಹೋಬಳಿ ಕೇಂದ್ರವಾದ ಬಸವಾಪಟ್ಟಣಕ್ಕೆ ಸಮುದಾಯ ಆಸ್ಪತ್ರೆ ತುಂಬಾ ಅಗತ್ಯವಾಗಿದೆ. ಇದಕ್ಕಾಗಿ ಕಟ್ಟಡ ನಿರ್ಮಾಣಕ್ಕೆ ಆರೋಗ್ಯ ಇಲಾಖೆ ಎರಡು ಎಕರೆ ನಿವೇಶನವನ್ನು ಕೇಳುತ್ತಿದೆ. ಪಾಳು ಬಿದ್ದಿರುವ ಕಿರಿಯ ಪ್ರಾಥಮಿಕ ಶಾಲೆಯ ನಿವೇಶನ ಒಂದು ಎಕರೆಯಷ್ಟಿದ್ದು, ಇದು ಸಾರ್ವಜನಿಕ ಶಿಕ್ಷಣ ಇಲಾಖೆಯ ಸುಪರ್ದಿಯಲ್ಲಿದೆ. ಶಿಕ್ಷಣ ಇಲಾಖೆಯು ಈ ನಿವೇಶನವನ್ನು ಆರೋಗ್ಯ ಇಲಾಖೆಗೆ ವಹಿಸಿದರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಜಾಗವನ್ನೂ ಸೇರಿಸಿ ಸುಸಜ್ಜಿತ ಕಟ್ಟಡ ನಿರ್ಮಿಸಿ ಆಸ್ಪತ್ರೆ ಆರಂಭಿಸಿದಲ್ಲಿ ಸುತ್ತಲಿನ ಜನರಿಗೆ ಅನುಕೂಲವಾಗುತ್ತದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಜಿ.ಸಚಿನ್ ಕೋರಿದರು.</p>.<p>ಬಸವಾಪಟ್ಟಣ ನೂರಾರು ವರ್ಷಗಳ ಹಿಂದೆ ಪಾಳೆಯಪಟ್ಟಾಗಿದ್ದು, ಸಾಂಸ್ಕೃತಿಕ ಮತ್ತು ಧಾರ್ಮಿಕ ಕೇಂದ್ರವಾಗಿದೆ. ಪ್ರಾಥಮಿಕ ಶಾಲಾ ಕಟ್ಟಡದ ಜಾಗವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸ್ವಾಧೀನಕ್ಕೆ ಪಡೆದು ಸಮುದಾಯ ಭವನ ನಿರ್ಮಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗುವ ಸಭೆ, ಸಮಾರಂಭ ಆಯೋಜಿಸಲು ಅನುಕೂಲವಾಗುತ್ತದೆ ಎಂದು ಗ್ರಾಮ ಪಂಚಾಯಿತಿ ಹಿರಿಯ ಸದಸ್ಯ ಡಿ.ಆರ್.ಹಾಲೇಶ್ ಅಭಿಪ್ರಾಯಪಟ್ಟರು.</p>.<p>ಬಸವಾಪಟ್ಟಣದಲ್ಲಿ ನಿವೇಶನದ ಕೊರತೆಯಿಂದ ಸರ್ಕಾರಿ ಕಚೇರಿ ಕಟ್ಟಡಗಳನ್ನು ನಿರ್ಮಿಸಲು ಸಾಧ್ಯವಾಗುತ್ತಿಲ್ಲ. ನಾಡ ಕಚೇರಿಯು ಪಾಳು ಬಿದ್ದಿರುವ ನೀರಾವರಿ ಇಲಾಖೆಯ ವಸತಿ ಗೃಹದಲ್ಲಿ ನಡೆಯುತ್ತಿದೆ. ಶಾಲೆಯ ಜಾಗದಲ್ಲಿ ಹೊಸ ನಾಡಕಚೇರಿ ಸೇರಿ ಅರಣ್ಯ ಇಲಾಖೆ, ರಾಜಸ್ವ ನಿರೀಕ್ಷಕರ ಕಚೇರಿ, ಗ್ರಾಮ ಲೆಕ್ಕಿಗರ ಕಚೇರಿ ಮುಂತಾದ ಸರ್ಕಾರಿ ಕಚೇರಿಗಳ ನಿರ್ಮಾಣಕ್ಕೆ ಬಳಸಬಹುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ನಾಗರಾಜ್ ಆಶಯ ವ್ಯಕ್ತಪಡಿಸಿದರು.</p>.<p>ಹತ್ತಾರು ವರ್ಷಗಳಿಂದ ಪಾಳು ಬಿದ್ದಿರುವ ಶಾಲಾ ಕಟ್ಟಡವನ್ನು ತೆರವುಗೊಳಿಸಿ, ಇಲ್ಲಿ ಸರ್ಕಾರಿ ಕಚೇರಿ ಕಟ್ಟಡಗಳ ಸಮುಚ್ಛಯವನ್ನು ನಿರ್ಮಿಸಿದರೆ ಹೋಬಳಿ ಕೇಂದ್ರವಾದ ಗ್ರಾಮದಲ್ಲಿ ಹಲವಾರು ಸರ್ಕಾರಿ ಇಲಾಖೆಗಳ ಕಚೇರಿಗಳು ಕಾರ್ಯಾರಂಭ ಮಾಡಲು ಸಾಧ್ಯವಿದೆ. ಶಾಸಕರು, ಸಂಸದರು ಮತ್ತು ಇತರ ಜನಪ್ರತಿನಿಧಿಗಳು ಈ ನಿವೇಶನವನ್ನು ಸಾರ್ವತ್ರೀಕರಿಸಿದರೆ ಶ್ಲಾಘನೀಯ ಕಾರ್ಯವಾಗುತ್ತದೆ ಎಂದು ಸಾಹಿತಿ ನಿಲೋಗಲ್ ರಂಗನಗೌಡ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>