<p><strong>ಮಲೇಬೆನ್ನೂರು: </strong>ಪಟ್ಟಣದ ಬಸವೇಶ್ವರ ಬಡಾವಣೆ, ಆಜಾದ್ ನಗರ ಭಾಗದಲ್ಲಿ ರಸ್ತೆಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ ನಾಯಿ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ ಘಟನೆ ಭಾನುವಾರ ನಡೆದಿದೆ.</p>.<p>ನಂದೀಶ್ವರ ಬಡಾವಣೆಯ ಬಾಲಕಿ ಅರ್ಚನಾ ಕಣ್ಣು ಹಾಗೂ ತಲೆ ಭಾಗಕ್ಕೆ ಕಚ್ಚಿದ್ದು, ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ದಾವಣಗೆರೆಗೆ ಕಳುಹಿಸಿಕೊಡಲಾಗಿದೆ.</p>.<p>ನಾಯಿ ದಾಳಿ ಮಾಡುತ್ತಿದ್ದಂತೆ ಪೋಷಕರು ನಾಯಿಯನ್ನು ಹೊಡೆದೋಡಿಸಿದ್ದಾರೆ. ನಂತರ ಸೈಯದ್ ಆಜಾದ್, ಮಲ್ಲಿಕ್ ರೆಹಾನ್, ಮಹ್ಮದ್ ಗೌಸ್, ಫೈಜಾನ್ ಖಾನ್, ಅಹ್ಮದ್ ರಜಾಕ್ ಅವರಿಗೂ ಕಚ್ಚಿದ್ದು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಸಂಜೆ ಯುವಕರ ಗುಂಪು ನಾಯಿಯನ್ನು ಹೊಡೆದು ಸಾಯಿಸಿದ್ದಾರೆ.</p>.<p>ಪಟ್ಟಣದ ಸಂತೆ ಮೈದಾನ ಹಾಗೂ ಹರಿಹರ ರಸ್ತೆ ಹಾಗೂ ನಿಟ್ಟೂರು ರಸ್ತೆಯ ಫಿಷ್ ಫ್ರೈ, ಮಾಂಸದ ಅಂಗಡಿ ಸುತ್ತಮುತ್ತ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದೆ ಎಂದು ನಾಗರಿಕರು ದೂರಿದರು.</p>.<p>‘ಬೀದಿ ನಾಯಿ ಸೆರೆ ಹಿಡಿದು ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲು ಟೆಂಡರ್ ಕರೆಯಲಾಗಿತ್ತು. ಆದರೆ, ಒಬ್ಬರೂ ಬಿಡ್ ಮಾಡಿಲ್ಲ’ ಎಂದು ಪುರಸಭೆ ಮುಖ್ಯಾಧಿಕಾರಿ ಸುರೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಪಟ್ಟಣದ ನಾಗರಿಕರು, ಮೀನು ಮಾಂಸದ ಅಂಗಡಿಯವರು ಮಾಂಸದ ಚೂರು, ತ್ಯಾಜ್ಯವನ್ನು ಮೋರಿಗಳಿಗೆ ಹಾಕಬಾರದು. ಪುರಸಭೆ ಕಸ ಸಂಗ್ರಹ ವಾಹನಕ್ಕೆ ಹಾಕಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು: </strong>ಪಟ್ಟಣದ ಬಸವೇಶ್ವರ ಬಡಾವಣೆ, ಆಜಾದ್ ನಗರ ಭಾಗದಲ್ಲಿ ರಸ್ತೆಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ ನಾಯಿ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ ಘಟನೆ ಭಾನುವಾರ ನಡೆದಿದೆ.</p>.<p>ನಂದೀಶ್ವರ ಬಡಾವಣೆಯ ಬಾಲಕಿ ಅರ್ಚನಾ ಕಣ್ಣು ಹಾಗೂ ತಲೆ ಭಾಗಕ್ಕೆ ಕಚ್ಚಿದ್ದು, ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ದಾವಣಗೆರೆಗೆ ಕಳುಹಿಸಿಕೊಡಲಾಗಿದೆ.</p>.<p>ನಾಯಿ ದಾಳಿ ಮಾಡುತ್ತಿದ್ದಂತೆ ಪೋಷಕರು ನಾಯಿಯನ್ನು ಹೊಡೆದೋಡಿಸಿದ್ದಾರೆ. ನಂತರ ಸೈಯದ್ ಆಜಾದ್, ಮಲ್ಲಿಕ್ ರೆಹಾನ್, ಮಹ್ಮದ್ ಗೌಸ್, ಫೈಜಾನ್ ಖಾನ್, ಅಹ್ಮದ್ ರಜಾಕ್ ಅವರಿಗೂ ಕಚ್ಚಿದ್ದು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಸಂಜೆ ಯುವಕರ ಗುಂಪು ನಾಯಿಯನ್ನು ಹೊಡೆದು ಸಾಯಿಸಿದ್ದಾರೆ.</p>.<p>ಪಟ್ಟಣದ ಸಂತೆ ಮೈದಾನ ಹಾಗೂ ಹರಿಹರ ರಸ್ತೆ ಹಾಗೂ ನಿಟ್ಟೂರು ರಸ್ತೆಯ ಫಿಷ್ ಫ್ರೈ, ಮಾಂಸದ ಅಂಗಡಿ ಸುತ್ತಮುತ್ತ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದೆ ಎಂದು ನಾಗರಿಕರು ದೂರಿದರು.</p>.<p>‘ಬೀದಿ ನಾಯಿ ಸೆರೆ ಹಿಡಿದು ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲು ಟೆಂಡರ್ ಕರೆಯಲಾಗಿತ್ತು. ಆದರೆ, ಒಬ್ಬರೂ ಬಿಡ್ ಮಾಡಿಲ್ಲ’ ಎಂದು ಪುರಸಭೆ ಮುಖ್ಯಾಧಿಕಾರಿ ಸುರೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಪಟ್ಟಣದ ನಾಗರಿಕರು, ಮೀನು ಮಾಂಸದ ಅಂಗಡಿಯವರು ಮಾಂಸದ ಚೂರು, ತ್ಯಾಜ್ಯವನ್ನು ಮೋರಿಗಳಿಗೆ ಹಾಕಬಾರದು. ಪುರಸಭೆ ಕಸ ಸಂಗ್ರಹ ವಾಹನಕ್ಕೆ ಹಾಕಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>