<p><strong>ನ್ಯಾಮತಿ</strong>: ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಅವರಿಗೆ ಲೋಕಾಯುಕ್ತ ಕಚೇರಿ ಹೆಸರಿನಲ್ಲಿ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.</p>.<p>ಗೋವಿಂದಪ್ಪ ಅವರ ಮೊಬೈಲ್ಗೆ ಕರೆ ಮಾಡಿ ಅಪರಿಚಿತ ವ್ಯಕ್ತಿ ಲೋಕಾಯುಕ್ತ ಕಚೇರಿಯ ಡಿವೈಎಸ್ಪಿ ಎಂದು ಪರಿಚಯಿಸಿಕೊಂಡಿದ್ದಾನೆ. ಬಳಿಕ ಅವರ ವಿವರಗಳನ್ನು ಪಡೆದುಕೊಂಡು, ‘ನಿಮ್ಮ ಮೇಲೆ ಬೆಂಗಳೂರಿನ ಎಂ.ಎಸ್.ಬಿಲ್ಡಿಂಗ್ನಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಲೋಕಾಯುಕ್ತ ಎಸ್ಪಿ ಮತ್ತು ಅವರ ಸಿಬ್ಬಂದಿ ನೀವು ಕೆಲಸ ಮಾಡುತ್ತಿರುವ ಸ್ಥಳ ಮತ್ತು ವಾಸವಿರುವ ಮನೆಯ ಮೇಲೆ ದಾಳಿ ಮಾಡಲು ತಯಾರಿ ಮಾಡಿಕೊಂಡಿದ್ದಾರೆ’ ಎಂದು ಹೇಳಿದ್ದಾನೆ.</p>.<p>‘ನಿಮ್ಮ ಬಗ್ಗೆ ವಿಚಾರ ಮಾಡಿದಾಗ ನೀವು ಒಳ್ಳೆಯವರು ಎಂದು ತಿಳಿದು ಬಂದಿದೆ. ಮೇಲಧಿಕಾರಿಗಳಿಗೆ ದಾಳಿ ಮಾಡದಂತೆ ತಿಳಿಸಿದ್ದೇನೆ. ಆದ್ದರಿಂದ ನಾನು ಹೇಳಿದ ಎರಡು ನಂಬರ್ಗಳಿಗೆ ತಕ್ಷಣ ₹ 2 ಲಕ್ಷ ಕಳುಹಿಸಿ’ ಎಂದಿದ್ದಾನೆ.</p>.<p>‘ಪದೇ ಪದೇ ಕರೆ ಮಾಡಿ ಹಣ ಹಾಕಲು ಒತ್ತಾಯ ಮಾಡಿದ. ಹಣ ಹಾಕಲು ಒಪ್ಪದಿದ್ದಾಗ ‘ನಿನಗೆ ಮುಂದೆ ಏನು ಮಾಡಬೇಕು ಎಂದು ಗೊತ್ತಿದೆ’ ಎಂದು ಪ್ರಾಣ ಬೆದರಿಕೆ ಹಾಕಿದ’ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p>‘ನನಗೆ ಪ್ರಾಣ ಬೆದರಿಕೆ ಮತ್ತು ಮಾನಸಿಕ ಕಿರುಕುಳ ನೀಡಿರುವ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ತಹಶೀಲ್ದಾರ್ ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ</strong>: ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಅವರಿಗೆ ಲೋಕಾಯುಕ್ತ ಕಚೇರಿ ಹೆಸರಿನಲ್ಲಿ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.</p>.<p>ಗೋವಿಂದಪ್ಪ ಅವರ ಮೊಬೈಲ್ಗೆ ಕರೆ ಮಾಡಿ ಅಪರಿಚಿತ ವ್ಯಕ್ತಿ ಲೋಕಾಯುಕ್ತ ಕಚೇರಿಯ ಡಿವೈಎಸ್ಪಿ ಎಂದು ಪರಿಚಯಿಸಿಕೊಂಡಿದ್ದಾನೆ. ಬಳಿಕ ಅವರ ವಿವರಗಳನ್ನು ಪಡೆದುಕೊಂಡು, ‘ನಿಮ್ಮ ಮೇಲೆ ಬೆಂಗಳೂರಿನ ಎಂ.ಎಸ್.ಬಿಲ್ಡಿಂಗ್ನಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಲೋಕಾಯುಕ್ತ ಎಸ್ಪಿ ಮತ್ತು ಅವರ ಸಿಬ್ಬಂದಿ ನೀವು ಕೆಲಸ ಮಾಡುತ್ತಿರುವ ಸ್ಥಳ ಮತ್ತು ವಾಸವಿರುವ ಮನೆಯ ಮೇಲೆ ದಾಳಿ ಮಾಡಲು ತಯಾರಿ ಮಾಡಿಕೊಂಡಿದ್ದಾರೆ’ ಎಂದು ಹೇಳಿದ್ದಾನೆ.</p>.<p>‘ನಿಮ್ಮ ಬಗ್ಗೆ ವಿಚಾರ ಮಾಡಿದಾಗ ನೀವು ಒಳ್ಳೆಯವರು ಎಂದು ತಿಳಿದು ಬಂದಿದೆ. ಮೇಲಧಿಕಾರಿಗಳಿಗೆ ದಾಳಿ ಮಾಡದಂತೆ ತಿಳಿಸಿದ್ದೇನೆ. ಆದ್ದರಿಂದ ನಾನು ಹೇಳಿದ ಎರಡು ನಂಬರ್ಗಳಿಗೆ ತಕ್ಷಣ ₹ 2 ಲಕ್ಷ ಕಳುಹಿಸಿ’ ಎಂದಿದ್ದಾನೆ.</p>.<p>‘ಪದೇ ಪದೇ ಕರೆ ಮಾಡಿ ಹಣ ಹಾಕಲು ಒತ್ತಾಯ ಮಾಡಿದ. ಹಣ ಹಾಕಲು ಒಪ್ಪದಿದ್ದಾಗ ‘ನಿನಗೆ ಮುಂದೆ ಏನು ಮಾಡಬೇಕು ಎಂದು ಗೊತ್ತಿದೆ’ ಎಂದು ಪ್ರಾಣ ಬೆದರಿಕೆ ಹಾಕಿದ’ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p>‘ನನಗೆ ಪ್ರಾಣ ಬೆದರಿಕೆ ಮತ್ತು ಮಾನಸಿಕ ಕಿರುಕುಳ ನೀಡಿರುವ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ತಹಶೀಲ್ದಾರ್ ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>