<p><strong>ದಾವಣಗೆರೆ:</strong> ಭದ್ರಾ ಬಲದಂಡೆ ನಾಲೆಗಳಿಗೆ 100 ದಿನ ನಿರಂತರವಾಗಿ ನೀರು ಹರಿಸುವಂತೆ ಒತ್ತಾಯಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ಗೆ ಸೋಮವಾರ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಬೆಳಿಗ್ಗೆಯಿಂದಲೇ ನಗರದ ಹಲವೆಡೆ ಅಂಗಡಿಗಳನ್ನು ಮುಚ್ಚಲಾಗಿದೆ. ಇನ್ನೂ ಕೆಲವೆಡೆ ಕೆಲವು ಮಳಿಗೆಗಳನ್ನು ತೆರೆಯಲಾಗಿದೆ. </p><p>ನಗರದ ಜಯದೇವ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.</p><p>ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾರಿಗೆ ಬಸ್ ಗಳ ಓಡಾಟ ಬಹುತೇಕ ಸ್ಥಗಿತಗೊಂಡಿದೆ. ಪಕ್ಕದಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಕೆಲವು ಬಸ್ ಗಳ ಸಂಚಾರ ಕಂಡುಬಂತು. </p><p>ವಾಣಿಜ್ಯ ಪ್ರದೇಶವಾದ ಮಂಡಿಪೇಟೆ, ಕಾಳಿಕಾದೇವಿ ರಸ್ತೆ, ಕೆ.ಆರ್.ಮಾರುಕಟ್ಟೆ, ಬಿನ್ನಿಕಂಪನಿ ರಸ್ತೆ, ಚಾಮರಾಜಪೇಟೆ, ಎಂ.ಜಿ.ರಸ್ತೆಯಲ್ಲಿ ರೈತರ ಹೋರಾಟಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂಗಾರದ ಅಂಗಡಿ, ಪ್ರಾವಿಜನ್ ಸ್ಟೋರ್, ಹೋಟೆಲ್, ಇನ್ನಿತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲಾಗಿದೆ. </p><p>ತರಕಾರಿ, ಹಣ್ಣು, ತಳ್ಳುಗಾಡಿಯ ಹೋಟೆಲ್ಗಳ ವ್ಯಾಪಾರ ಎಂದಿನಂತೆ ನಡೆಯುತ್ತಿದೆ. </p><p>ನಗರದ ಪ್ರಮುಖ ವೃತ್ತಗಳಲ್ಲಿ ಬಂದ್ ವಾತಾವರಣ ಇದೆ. ಇನ್ನುಳಿದ ಕಡೆಗಳಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರ ಸಾರಿಗೆಯಲ್ಲಿ ವ್ಯತ್ಯಯ ಉಂಟಾಗಿದ್ದು ಪ್ರಯಾಣಿಕರು ಆಟೊಗಳಲ್ಲಿ ಸಂಚರಿಸುತ್ತಿದ್ದಾರೆ. </p><p>ಬಂದ್ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಬಂದ್ ಗೆ ಕನ್ನಡಪರ ಸಂಘಟನೆಗಳು, ಆಮ್ ಆದ್ಮಿ ಪಕ್ಷ, ಬಿಜೆಪಿ, ದಲ್ಲಾಲರ ಸಂಘ ಸೇರಿದಂತೆ ಹಲವು ಸಂಘ ಸಂಸ್ಥೆಗಳೂ ಬೆಂಬಲ ವ್ಯಕ್ತಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಭದ್ರಾ ಬಲದಂಡೆ ನಾಲೆಗಳಿಗೆ 100 ದಿನ ನಿರಂತರವಾಗಿ ನೀರು ಹರಿಸುವಂತೆ ಒತ್ತಾಯಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ಗೆ ಸೋಮವಾರ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಬೆಳಿಗ್ಗೆಯಿಂದಲೇ ನಗರದ ಹಲವೆಡೆ ಅಂಗಡಿಗಳನ್ನು ಮುಚ್ಚಲಾಗಿದೆ. ಇನ್ನೂ ಕೆಲವೆಡೆ ಕೆಲವು ಮಳಿಗೆಗಳನ್ನು ತೆರೆಯಲಾಗಿದೆ. </p><p>ನಗರದ ಜಯದೇವ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.</p><p>ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾರಿಗೆ ಬಸ್ ಗಳ ಓಡಾಟ ಬಹುತೇಕ ಸ್ಥಗಿತಗೊಂಡಿದೆ. ಪಕ್ಕದಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಕೆಲವು ಬಸ್ ಗಳ ಸಂಚಾರ ಕಂಡುಬಂತು. </p><p>ವಾಣಿಜ್ಯ ಪ್ರದೇಶವಾದ ಮಂಡಿಪೇಟೆ, ಕಾಳಿಕಾದೇವಿ ರಸ್ತೆ, ಕೆ.ಆರ್.ಮಾರುಕಟ್ಟೆ, ಬಿನ್ನಿಕಂಪನಿ ರಸ್ತೆ, ಚಾಮರಾಜಪೇಟೆ, ಎಂ.ಜಿ.ರಸ್ತೆಯಲ್ಲಿ ರೈತರ ಹೋರಾಟಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂಗಾರದ ಅಂಗಡಿ, ಪ್ರಾವಿಜನ್ ಸ್ಟೋರ್, ಹೋಟೆಲ್, ಇನ್ನಿತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲಾಗಿದೆ. </p><p>ತರಕಾರಿ, ಹಣ್ಣು, ತಳ್ಳುಗಾಡಿಯ ಹೋಟೆಲ್ಗಳ ವ್ಯಾಪಾರ ಎಂದಿನಂತೆ ನಡೆಯುತ್ತಿದೆ. </p><p>ನಗರದ ಪ್ರಮುಖ ವೃತ್ತಗಳಲ್ಲಿ ಬಂದ್ ವಾತಾವರಣ ಇದೆ. ಇನ್ನುಳಿದ ಕಡೆಗಳಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರ ಸಾರಿಗೆಯಲ್ಲಿ ವ್ಯತ್ಯಯ ಉಂಟಾಗಿದ್ದು ಪ್ರಯಾಣಿಕರು ಆಟೊಗಳಲ್ಲಿ ಸಂಚರಿಸುತ್ತಿದ್ದಾರೆ. </p><p>ಬಂದ್ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಬಂದ್ ಗೆ ಕನ್ನಡಪರ ಸಂಘಟನೆಗಳು, ಆಮ್ ಆದ್ಮಿ ಪಕ್ಷ, ಬಿಜೆಪಿ, ದಲ್ಲಾಲರ ಸಂಘ ಸೇರಿದಂತೆ ಹಲವು ಸಂಘ ಸಂಸ್ಥೆಗಳೂ ಬೆಂಬಲ ವ್ಯಕ್ತಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>