<p>ಹುಬ್ಬಳ್ಳಿ: 'ನಗರದ ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಕುರಿತು ಪಾಲಿಕೆಯ ಸದನ ಸಮಿತಿ ನೀಡುವ ವರದಿಗೆ ಅನುಗುಣವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು' ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.</p>.<p>ಹುಧಾ ಪೊಲೀಸ್ ಕಮಿಷನರೇಟ್ ಘಟಕದ ಅಧಿಕಾರಿಗಳ ಜೊತೆ ಸೋಮವಾರ ಈದ್ಗಾ ಮೈದಾನಕ್ಕೆ ಭೇಟಿ ನೀಡಿ, ಅಲ್ಲಿ ಕೈಗೊಂಡಿರುವ ಭದ್ರತೆ ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.</p>.<p>'ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಬೇಕೋ, ಬೇಡವೋ ಎನ್ನುವುದು ಪಾಲಿಕೆಗೆ ಮತ್ತು ಸರ್ಕಾರಕ್ಕೆ ಸಂಬಂಧಪಟ್ಟ ವಿಷಯ. ಅವರ ಸೂಚನೆಯಂತೆ ಭದ್ರತೆಗೆ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡುವುದಿಲ್ಲ' ಎಂದು ಹೇಳಿದರು.</p>.<p>'ಗಣೇಶೋತ್ಸವ ಅಂಗವಾಗಿ ರಾಜ್ಯದಾದ್ಯಂತ ಪಥ ಸಂಚಲನ ನಡೆಸಲಾಗಿದೆ. ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ದೊಡ್ಡ ಮಟ್ಟದಲ್ಲಿ ಉತ್ಸವ ನಡೆಯುತ್ತವೆ. ಇಲ್ಲಿನ ಸೂಕ್ಷ್ಮ ಪ್ರದೇಶಗಳಲ್ಲಿ ಒಂದುವಾರದಿಂದ ಪಥಸಂಚಲನ ನಡೆಯುತ್ತಿವೆ. ಅಲ್ಲದೆ, ಡ್ರೋಣ್ ಕ್ಯಾಮೆರಾಗಳನ್ನು ಬಳಸಿ ಹದ್ದಿನ ಕಣ್ಣಿಡಲಾಗುತ್ತಿದೆ. ರೌಡಿಗಳಿಂದ ಮುಚ್ಚಳಿಕೆ ಪತ್ರವನ್ನು ಸಹ ಬರೆಸಿಕೊಳ್ಳಲಾಗುತ್ತಿದೆ' ಎಂದರು.</p>.<p>'ಹಬ್ಬದ ಸಂದರ್ಭದಲ್ಲಿ ಗ್ರಾಮೀಣ ಭಾಗಗಳಲ್ಲಿ ಮದ್ಯ, ಗಾಂಜಾ ಸೇವನೆ ಹೆಚ್ಚಾಗುತ್ತವೆ. ಅವುಗಳಿಂದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರುವ ಸಾಧ್ಯತೆಯಿದೆ. ಅಂಥವರ ಮೇಲೆ ಕಣ್ಣಿಟ್ಟು ಪ್ರಕರಣ ದಾಖಲಿಸಲು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಅಪರಾಧ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ' ಎಂದು ಹೇಳಿದರು.</p>.<p>'ಕೋರ್ಟ್ ಆದೇಶದ ಪ್ರಕಾರ ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಡಿಜೆ ಬಳಕೆ ಮಾಡುವಂತಿಲ್ಲ. ಬೆಳಿಗ್ಗೆ 6ರ ನಂತರ ನಿಯಮಾವಳಿ ಪ್ರಕಾರ ಬಳಸಬಹುದು. ಕಾನೂನು ಉಲ್ಲಂಘಿಸಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದು ಎಡಿಜಿಪಿ ತಿಳಿಸಿದರು.</p>.<p>ಪೊಲೀಸ್ ಕಮಿಷನರ್ ಲಾಭೂರಾಮ್, ಎಸ್ಪಿ ಲೋಕೇಶ ಜಗಲಾಸರ್, ಡಿಸಿಪಿಗಳಾದ ಸಾಹಿಲ್ ಬಾಗ್ಲಾ, ಗೋಪಾಲ ಬ್ಯಾಕೋಡ್, ಎಸಿಪಿ ವಿನೋದ ಮುಕ್ತೇದಾರ ಇತರ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: 'ನಗರದ ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಕುರಿತು ಪಾಲಿಕೆಯ ಸದನ ಸಮಿತಿ ನೀಡುವ ವರದಿಗೆ ಅನುಗುಣವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು' ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.</p>.<p>ಹುಧಾ ಪೊಲೀಸ್ ಕಮಿಷನರೇಟ್ ಘಟಕದ ಅಧಿಕಾರಿಗಳ ಜೊತೆ ಸೋಮವಾರ ಈದ್ಗಾ ಮೈದಾನಕ್ಕೆ ಭೇಟಿ ನೀಡಿ, ಅಲ್ಲಿ ಕೈಗೊಂಡಿರುವ ಭದ್ರತೆ ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.</p>.<p>'ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಬೇಕೋ, ಬೇಡವೋ ಎನ್ನುವುದು ಪಾಲಿಕೆಗೆ ಮತ್ತು ಸರ್ಕಾರಕ್ಕೆ ಸಂಬಂಧಪಟ್ಟ ವಿಷಯ. ಅವರ ಸೂಚನೆಯಂತೆ ಭದ್ರತೆಗೆ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡುವುದಿಲ್ಲ' ಎಂದು ಹೇಳಿದರು.</p>.<p>'ಗಣೇಶೋತ್ಸವ ಅಂಗವಾಗಿ ರಾಜ್ಯದಾದ್ಯಂತ ಪಥ ಸಂಚಲನ ನಡೆಸಲಾಗಿದೆ. ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ದೊಡ್ಡ ಮಟ್ಟದಲ್ಲಿ ಉತ್ಸವ ನಡೆಯುತ್ತವೆ. ಇಲ್ಲಿನ ಸೂಕ್ಷ್ಮ ಪ್ರದೇಶಗಳಲ್ಲಿ ಒಂದುವಾರದಿಂದ ಪಥಸಂಚಲನ ನಡೆಯುತ್ತಿವೆ. ಅಲ್ಲದೆ, ಡ್ರೋಣ್ ಕ್ಯಾಮೆರಾಗಳನ್ನು ಬಳಸಿ ಹದ್ದಿನ ಕಣ್ಣಿಡಲಾಗುತ್ತಿದೆ. ರೌಡಿಗಳಿಂದ ಮುಚ್ಚಳಿಕೆ ಪತ್ರವನ್ನು ಸಹ ಬರೆಸಿಕೊಳ್ಳಲಾಗುತ್ತಿದೆ' ಎಂದರು.</p>.<p>'ಹಬ್ಬದ ಸಂದರ್ಭದಲ್ಲಿ ಗ್ರಾಮೀಣ ಭಾಗಗಳಲ್ಲಿ ಮದ್ಯ, ಗಾಂಜಾ ಸೇವನೆ ಹೆಚ್ಚಾಗುತ್ತವೆ. ಅವುಗಳಿಂದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರುವ ಸಾಧ್ಯತೆಯಿದೆ. ಅಂಥವರ ಮೇಲೆ ಕಣ್ಣಿಟ್ಟು ಪ್ರಕರಣ ದಾಖಲಿಸಲು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಅಪರಾಧ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ' ಎಂದು ಹೇಳಿದರು.</p>.<p>'ಕೋರ್ಟ್ ಆದೇಶದ ಪ್ರಕಾರ ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಡಿಜೆ ಬಳಕೆ ಮಾಡುವಂತಿಲ್ಲ. ಬೆಳಿಗ್ಗೆ 6ರ ನಂತರ ನಿಯಮಾವಳಿ ಪ್ರಕಾರ ಬಳಸಬಹುದು. ಕಾನೂನು ಉಲ್ಲಂಘಿಸಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದು ಎಡಿಜಿಪಿ ತಿಳಿಸಿದರು.</p>.<p>ಪೊಲೀಸ್ ಕಮಿಷನರ್ ಲಾಭೂರಾಮ್, ಎಸ್ಪಿ ಲೋಕೇಶ ಜಗಲಾಸರ್, ಡಿಸಿಪಿಗಳಾದ ಸಾಹಿಲ್ ಬಾಗ್ಲಾ, ಗೋಪಾಲ ಬ್ಯಾಕೋಡ್, ಎಸಿಪಿ ವಿನೋದ ಮುಕ್ತೇದಾರ ಇತರ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>