ವೀರಾಪೂರ ಓಣಿಯಲ್ಲಿರುವ ಮನೆಯಲ್ಲಿ ಅಂಜಲಿಯನ್ನು ಹತ್ಯೆ ಮಾಡಲಾಗಿತ್ತು. ಆರೋಪಿಯನ್ನು ಅಲ್ಲಿಗೆ ಕರೆದುಕೊಂಡು ಬಂದ ಸಿಐಡಿ ಅಧಿಕಾರಿಗಳು, ಘಟನಾ ಸ್ಥಳ ಹಾಗೂ ಸುತ್ತಲಿನ ಪ್ರದೇಶ ಪರಿಶೀಲಿಸಿದರು. ಕೊಲೆ ನಡೆದ ಸಂದರ್ಭದ ಬಗ್ಗೆ ಆರೋಪಿಯಿಂದ ಮಾಹಿತಿ ಪಡೆದರು. ಆರೋಪಿ ಕೃತ್ಯಕ್ಕೆ ಬಳಸಿದ್ದ ಚಾಕು ಪತ್ತೆಗಾಗಿ ಓಣಿಯ ಚರಂಡಿಗಳಲ್ಲಿ ತ್ಯಾಜ್ಯ ಹೊರತೆಗೆಸಿ, ಲೋಹ ಪತ್ತೆ ಯಂತ್ರದ ಮೂಲಕ ತೀವ್ರ ಶೋಧ ನಡೆಸಿದರು.