<p><strong>ಹುಬ್ಬಳ್ಳಿ</strong>: ‘ಆನಂದ ಅಸೋಸಿಯೇಟ್ಸ್ ವತಿಯಿಂದ ಧಾರವಾಡದ ಹುರಕಡ್ಲಿ ಅಜ್ಜ ಕಾನೂನು ಕಾಲೇಜು ಎದುರಿನ ಸರಸ್ವತಿ ನಿಕೇತನದಲ್ಲಿ ಜುಲೈ 28ರಂದು ಬೆಳಿಗ್ಗೆ 10 ಗಂಟೆಗೆ ವಧು–ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಸಂಸ್ಥಾಪಕ ಸುರೇಶ ಕುಪ್ಪಸಗೌಡರ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಲ್ಲ ಜಾತಿ ಹಾಗೂ ಒಳಪಂಗಡ ವರ್ಗದವರು ವಧು-ವರರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಂತರ್ಜಾತಿ ವಿವಾಹ, ಮರುವಿವಾಹ ಬಯಸುವವರು, ವಿಚ್ಛೇದಿತರು, ವಿಧುರ–ವಿಧವೆಯರು ಸಹ ಪಾಲ್ಗೊಳ್ಳಬಹುದು. ₹500 ಪ್ರವೇಶ ಶುಲ್ಕವಿದೆ’ ಎಂದು ತಿಳಿಸಿದರು.</p>.<p>‘ಆಸಕ್ತರು, ಆನಂದ ಅಸೋಸಿಯೇಟ್ಸ್, ಕರ್ನಾಟಕ ಬ್ಯಾಂಕ್ ಹತ್ತಿರ, ಮರಾಠಾ ಕಾಲೊನಿ, ಧಾರವಾಡ, ಇಲ್ಲಿಗೆ ಭೇಟಿ ನೀಡಬಹುದು. ಮಾಹಿತಿಗೆ ಮೊ: 9343402308, 9611142568 ಸಂಪರ್ಕಿಸಬಹುದು’ ಎಂದು ಮಾಹಿತಿ ನೀಡಿದರು.</p>.<p><strong>ಭಾವಸಾರ ಸಮಾಜದಿಂದ ಸಮಾವೇಶ</strong></p><p>ಹುಬ್ಬಳ್ಳಿ: ಭಾವಸಾರ ವ್ಹಿಜನ್ ಇಂಡಿಯಾ ಸಂಸ್ಥೆಯಿಂದ ನಗರದ ದಾಜೀಬಾನ್ ಪೇಟೆಯ ಜನತಾ ಬಜಾರ್ ಬಳಿಯ ಪಂದಳ ಪ್ಯಾಲೇಸ್ನಲ್ಲಿ ಜುಲೈ 28ರಂದು ಭಾವಸಾರ ಕ್ಷತ್ರಿಯ ಸಮಾಜದ ವಧು– ವರರ ಹಾಗೂ ಪಾಲಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ.</p>.<p>ಅತಿಥಿಗಳಾಗಿ ಸಂಸ್ಥೆಯ ರಾಷ್ಟ್ರೀಯ ಕಾರ್ಯದರ್ಶಿ ಮನೀಶ್ ಸುತ್ರಾವೆ, ಮುಖಂಡರಾದ ಪ್ರಕಾಶ ತಿರುಮಲ್ಲೆ, ಮಹೇಶ ಲೋಖಂಡೆ ಆಗಮಿಸಲಿದ್ದಾರೆ. ಸಮಾವೇಶದಲ್ಲಿ ಭಾಗವಹಿಸಲು ಮೊ: 9449026097 ಸಂಪರ್ಕಿಸುವಂತೆ ಸಂಸ್ಥೆಯ ಕಾರ್ಯದರ್ಶಿ ಸ್ನೇಹಾ ಬೇದರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಆನಂದ ಅಸೋಸಿಯೇಟ್ಸ್ ವತಿಯಿಂದ ಧಾರವಾಡದ ಹುರಕಡ್ಲಿ ಅಜ್ಜ ಕಾನೂನು ಕಾಲೇಜು ಎದುರಿನ ಸರಸ್ವತಿ ನಿಕೇತನದಲ್ಲಿ ಜುಲೈ 28ರಂದು ಬೆಳಿಗ್ಗೆ 10 ಗಂಟೆಗೆ ವಧು–ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಸಂಸ್ಥಾಪಕ ಸುರೇಶ ಕುಪ್ಪಸಗೌಡರ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಲ್ಲ ಜಾತಿ ಹಾಗೂ ಒಳಪಂಗಡ ವರ್ಗದವರು ವಧು-ವರರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಂತರ್ಜಾತಿ ವಿವಾಹ, ಮರುವಿವಾಹ ಬಯಸುವವರು, ವಿಚ್ಛೇದಿತರು, ವಿಧುರ–ವಿಧವೆಯರು ಸಹ ಪಾಲ್ಗೊಳ್ಳಬಹುದು. ₹500 ಪ್ರವೇಶ ಶುಲ್ಕವಿದೆ’ ಎಂದು ತಿಳಿಸಿದರು.</p>.<p>‘ಆಸಕ್ತರು, ಆನಂದ ಅಸೋಸಿಯೇಟ್ಸ್, ಕರ್ನಾಟಕ ಬ್ಯಾಂಕ್ ಹತ್ತಿರ, ಮರಾಠಾ ಕಾಲೊನಿ, ಧಾರವಾಡ, ಇಲ್ಲಿಗೆ ಭೇಟಿ ನೀಡಬಹುದು. ಮಾಹಿತಿಗೆ ಮೊ: 9343402308, 9611142568 ಸಂಪರ್ಕಿಸಬಹುದು’ ಎಂದು ಮಾಹಿತಿ ನೀಡಿದರು.</p>.<p><strong>ಭಾವಸಾರ ಸಮಾಜದಿಂದ ಸಮಾವೇಶ</strong></p><p>ಹುಬ್ಬಳ್ಳಿ: ಭಾವಸಾರ ವ್ಹಿಜನ್ ಇಂಡಿಯಾ ಸಂಸ್ಥೆಯಿಂದ ನಗರದ ದಾಜೀಬಾನ್ ಪೇಟೆಯ ಜನತಾ ಬಜಾರ್ ಬಳಿಯ ಪಂದಳ ಪ್ಯಾಲೇಸ್ನಲ್ಲಿ ಜುಲೈ 28ರಂದು ಭಾವಸಾರ ಕ್ಷತ್ರಿಯ ಸಮಾಜದ ವಧು– ವರರ ಹಾಗೂ ಪಾಲಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ.</p>.<p>ಅತಿಥಿಗಳಾಗಿ ಸಂಸ್ಥೆಯ ರಾಷ್ಟ್ರೀಯ ಕಾರ್ಯದರ್ಶಿ ಮನೀಶ್ ಸುತ್ರಾವೆ, ಮುಖಂಡರಾದ ಪ್ರಕಾಶ ತಿರುಮಲ್ಲೆ, ಮಹೇಶ ಲೋಖಂಡೆ ಆಗಮಿಸಲಿದ್ದಾರೆ. ಸಮಾವೇಶದಲ್ಲಿ ಭಾಗವಹಿಸಲು ಮೊ: 9449026097 ಸಂಪರ್ಕಿಸುವಂತೆ ಸಂಸ್ಥೆಯ ಕಾರ್ಯದರ್ಶಿ ಸ್ನೇಹಾ ಬೇದರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>