<p><strong>ಹುಬ್ಬಳ್ಳಿ:</strong> ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್ಪಿ) ಇಲಾಖೆಯಿಂದ ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ (ಸಿಎಆರ್/ಡಿಎಆರ್) ನೇಮಕಾತಿ ಪರೀಕ್ಷೆಗಳು ಹುಬ್ಬಳ್ಳಿ–ಧಾರವಾಡ ಮಹಾನಗರದ 35 ಕೇಂದ್ರಗಳಲ್ಲಿಯೂ ಭಾನುವಾರ ಸುಗಮವಾಗಿ ನಡೆದವು.</p>.<p>ಮಹಾನಗರದಲ್ಲಿ ಒಟ್ಟು 12,300 ಅಭ್ಯರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು. ಬಾಗಲಕೋಟೆ, ವಿಜಯಪುರ, ರಾಯಚೂರು, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಪರೀಕ್ಷಾರ್ಥಿಗಳು ಹಾಜರಾಗಿದ್ದರು. ಧಾರವಾಡ ಜಿಲ್ಲೆಯಲ್ಲಿ 75 ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.</p>.<p>ಪರೀಕ್ಷೆಯ ಹಿಂದಿನ ದಿನವಾದ ಶನಿವಾರವೇ ಸಾವಿರಾರು ಅಭ್ಯರ್ಥಿಗಳು ಅವಳಿ ನಗರಕ್ಕೆ ಬಂದಿದ್ದರು. ಇದರಿಂದ ಸಾಮಾನ್ಯ ದರದ ಬಹುತೇಕ ವಸತಿಗೃಹಗಳು (ಲಾಡ್ಜ್) ಭರ್ತಿಯಾಗಿದ್ದವು. ವಸತಿಗೃಹ ದೊರೆಯದವರು ದೇವಸ್ಥಾನ, ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ಮಲಗಿ ರಾತ್ರಿ ಕಳೆದರು.</p>.<p>ಮಧ್ಯಾಹ್ನ ಪರೀಕ್ಷೆ ಮುಗಿಯುತ್ತಿದ್ದಂತೆ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣಗಳು ಭರ್ತಿಯಾಗಿದ್ದವು. ವಿಜಯಪುರ, ಬಾಗಲಕೋಟೆ, ಗದಗ ಮಾರ್ಗಗಳತ್ತ ಬಹುತೇಕ ಬಸ್ಗಳಲ್ಲಿ ನಿಂತುಕೊಳ್ಳಲೂ ಜಾಗವಿಲ್ಲದಂತೆ ಭರ್ತಿಯಾಗಿ ಸಂಚರಿಸುವುದು ಕಂಡುಬಂತು. ಮಹಿಳೆಯರು ಹಾಗೂ ವಯೋವೃದ್ಧರು ಬಸ್ಗಳಲ್ಲಿ ಸಂಚರಿಸುವುದಕ್ಕೆ ಪರದಾಡಿದರು.</p>.<div><blockquote>ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ಹುಬ್ಬಳ್ಳಿ–ಧಾರವಾಡದ ಎಲ್ಲ ಕೇಂದ್ರಗಳಲ್ಲಿ ಶಾಂತಿಯುತವಾಗಿ ಮುಗಿದಿದೆ. ಎಲ್ಲಿಯೂ ಅಕ್ರಮಗಳಾಗಿಲ್ಲ</blockquote><span class="attribution">ರೇಣುಕಾ ಸುಕುಮಾರ ಹು–ಧಾ ಮಹಾನಗರ ಪೊಲೀಸ್ ಆಯುಕ್ತೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್ಪಿ) ಇಲಾಖೆಯಿಂದ ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ (ಸಿಎಆರ್/ಡಿಎಆರ್) ನೇಮಕಾತಿ ಪರೀಕ್ಷೆಗಳು ಹುಬ್ಬಳ್ಳಿ–ಧಾರವಾಡ ಮಹಾನಗರದ 35 ಕೇಂದ್ರಗಳಲ್ಲಿಯೂ ಭಾನುವಾರ ಸುಗಮವಾಗಿ ನಡೆದವು.</p>.<p>ಮಹಾನಗರದಲ್ಲಿ ಒಟ್ಟು 12,300 ಅಭ್ಯರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು. ಬಾಗಲಕೋಟೆ, ವಿಜಯಪುರ, ರಾಯಚೂರು, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಪರೀಕ್ಷಾರ್ಥಿಗಳು ಹಾಜರಾಗಿದ್ದರು. ಧಾರವಾಡ ಜಿಲ್ಲೆಯಲ್ಲಿ 75 ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.</p>.<p>ಪರೀಕ್ಷೆಯ ಹಿಂದಿನ ದಿನವಾದ ಶನಿವಾರವೇ ಸಾವಿರಾರು ಅಭ್ಯರ್ಥಿಗಳು ಅವಳಿ ನಗರಕ್ಕೆ ಬಂದಿದ್ದರು. ಇದರಿಂದ ಸಾಮಾನ್ಯ ದರದ ಬಹುತೇಕ ವಸತಿಗೃಹಗಳು (ಲಾಡ್ಜ್) ಭರ್ತಿಯಾಗಿದ್ದವು. ವಸತಿಗೃಹ ದೊರೆಯದವರು ದೇವಸ್ಥಾನ, ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ಮಲಗಿ ರಾತ್ರಿ ಕಳೆದರು.</p>.<p>ಮಧ್ಯಾಹ್ನ ಪರೀಕ್ಷೆ ಮುಗಿಯುತ್ತಿದ್ದಂತೆ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣಗಳು ಭರ್ತಿಯಾಗಿದ್ದವು. ವಿಜಯಪುರ, ಬಾಗಲಕೋಟೆ, ಗದಗ ಮಾರ್ಗಗಳತ್ತ ಬಹುತೇಕ ಬಸ್ಗಳಲ್ಲಿ ನಿಂತುಕೊಳ್ಳಲೂ ಜಾಗವಿಲ್ಲದಂತೆ ಭರ್ತಿಯಾಗಿ ಸಂಚರಿಸುವುದು ಕಂಡುಬಂತು. ಮಹಿಳೆಯರು ಹಾಗೂ ವಯೋವೃದ್ಧರು ಬಸ್ಗಳಲ್ಲಿ ಸಂಚರಿಸುವುದಕ್ಕೆ ಪರದಾಡಿದರು.</p>.<div><blockquote>ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ಹುಬ್ಬಳ್ಳಿ–ಧಾರವಾಡದ ಎಲ್ಲ ಕೇಂದ್ರಗಳಲ್ಲಿ ಶಾಂತಿಯುತವಾಗಿ ಮುಗಿದಿದೆ. ಎಲ್ಲಿಯೂ ಅಕ್ರಮಗಳಾಗಿಲ್ಲ</blockquote><span class="attribution">ರೇಣುಕಾ ಸುಕುಮಾರ ಹು–ಧಾ ಮಹಾನಗರ ಪೊಲೀಸ್ ಆಯುಕ್ತೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>