ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡಬಾರದು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿ ಮಾತ್ರ ಮೌನ ವಹಿಸಿದ್ದಾರೆ. ಈ ಎಲ್ಲದರ ಹಿಂದೆ ಸಿದ್ದರಾಮಯ್ಯ ಅವರ ಪಾತ್ರ ಇದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಬದಲಾವಣೆ ವಿಯಷದಲ್ಲಿ ಬಿಜೆಪಿಯವರ ಕೈವಾಡ ಇದೆ ಎಂಬ ಕಾಂಗ್ರೆಸ್ ಶಾಸಕರ ಆರೋಪ ಬಾಲಿಷತನದಿಂದ ಕೂಡಿದೆ. ಕಾಂಗ್ರೆಸ್ ತನ್ನ ಎಡೆಯಲ್ಲಿ ಕತ್ತೆ ಸತ್ತು ಬಿದ್ದರೆ ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಕಿಡಿಕಾರಿದರು.
ಜನರು ಅವರಿಗೆ ಆಧಿಕಾರ ಕೊಟ್ಟಿದ್ದಾರೆ. ಆದರೆ ರಾಜ್ಯ ಸರ್ಕಾರ ಎಲ್ಲ ವಿಷಯಗಳಲ್ಲಿ ವಿಫಲವಾಗಿದೆ. ವಾಲ್ಮೀಕಿ ನಿಗಮದ ಹಗರಣ, ಬಾಂಬ್ ಸ್ಫೋಟ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಇದಕ್ಕೆ ಸಾಕ್ಷಿ ಎಂದರು.
ಕಾಂಗ್ರೆಸ್ಗೆ ಕಮಾಂಡೇ ಇಲ್ಲ: ಕಾಂಗ್ರೆಸ್ ಗೆ ಹೈಕಮಾಂಡ್ ಅಲ್ಲಾ... ಕಮಾಂಡೇ ಇಲ್ಲ. ಪಕ್ಷದಲ್ಲಿ ಅಶಿಸ್ತು ತುಂಬಿದೆ. ಸಚಿವರು, ಶಾಸಕರನ್ನು ನಿಯಂತ್ರಿಸಲು ವರಿಷ್ಠರಿಗೆ ಹಿಡಿತವೇ ಇಲ್ಲ ಎಂದು ಪ್ರಲ್ಹಾದ ಜೋಶಿ ವ್ಯಂಗ್ಯವಾಡಿದರು.