<p><strong>ಹುಬ್ಬಳ್ಳಿ</strong>: ಸೇವೆ ಕಾಯಂಗೊಳಿಸುವುದು, ನೇರ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪೌರಕಾರ್ಮಿಕರು, ಮಂಗಳವಾರ ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪೌರಕಾರ್ಮಿಕರ ಸಂಘದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಾರಾಯಣ ಅವರ ನೇತೃತ್ವದಲ್ಲಿ ಆಯುಕ್ತರ ಕಚೇರಿ ಎದುರು ಕುಳಿತ ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>ನಾರಾಯಣ ಮಾನತಾಡಿ, ‘ಮಹಾನಗರ ಪಾಲಿಕೆ ಆಯುಕ್ತ, ಮೇಯರ್ ಅವರು ಬೇಡಿಕೆಗಳ ಈಡೇರಿಕೆಗೆ ನಿರ್ಲಕ್ಷ ವಹಿಸುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು‘ ಎಂದರು.</p>.<p>ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ಎಂ. ಗುಂಟ್ರಾಳ ಮಾತನಾಡಿದರು.</p>.<p>ಗಂಗಮ್ಮ ಸಿದ್ರಾಮಪುರ, ಗಾಳೆಪ್ಪ ದ್ವಾಸಲಕೇರಿ, ಸೋಮು ಮೊರಬದ, ಶರಣಪ್ಪ ಅಮರಾವತಿ, ಕಿರಣಕುಮಾರ್ ಸೋಮರಡ್ಡಿ, ನಾಗರಾಜ ದೊಡ್ಡಮನಿ, ತಾಯಪ್ಪ ಬೆಳ್ಳಿಕೊಪ್ಪ ಕನಕಪ್ಪ ಕೋಟಬಾಗಿ, ಅನಿತಾ, ಲಕ್ಷಮಿ ಬೇತಾಪಲ್ಲಿ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಸುರೇಶ ಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಸೇವೆ ಕಾಯಂಗೊಳಿಸುವುದು, ನೇರ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪೌರಕಾರ್ಮಿಕರು, ಮಂಗಳವಾರ ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪೌರಕಾರ್ಮಿಕರ ಸಂಘದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಾರಾಯಣ ಅವರ ನೇತೃತ್ವದಲ್ಲಿ ಆಯುಕ್ತರ ಕಚೇರಿ ಎದುರು ಕುಳಿತ ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>ನಾರಾಯಣ ಮಾನತಾಡಿ, ‘ಮಹಾನಗರ ಪಾಲಿಕೆ ಆಯುಕ್ತ, ಮೇಯರ್ ಅವರು ಬೇಡಿಕೆಗಳ ಈಡೇರಿಕೆಗೆ ನಿರ್ಲಕ್ಷ ವಹಿಸುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು‘ ಎಂದರು.</p>.<p>ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ಎಂ. ಗುಂಟ್ರಾಳ ಮಾತನಾಡಿದರು.</p>.<p>ಗಂಗಮ್ಮ ಸಿದ್ರಾಮಪುರ, ಗಾಳೆಪ್ಪ ದ್ವಾಸಲಕೇರಿ, ಸೋಮು ಮೊರಬದ, ಶರಣಪ್ಪ ಅಮರಾವತಿ, ಕಿರಣಕುಮಾರ್ ಸೋಮರಡ್ಡಿ, ನಾಗರಾಜ ದೊಡ್ಡಮನಿ, ತಾಯಪ್ಪ ಬೆಳ್ಳಿಕೊಪ್ಪ ಕನಕಪ್ಪ ಕೋಟಬಾಗಿ, ಅನಿತಾ, ಲಕ್ಷಮಿ ಬೇತಾಪಲ್ಲಿ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಸುರೇಶ ಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>