<p>ಕಲಘಟಗಿ: ಮಕ್ಕಳ ಆಸಕ್ತಿಗೆ ಅನುಗುಣವಾಗಿ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ಶಿಕ್ಷಣ ನೀಡಿದರೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪೂರ ತಿಳಿಸಿದರು.</p>.<p>ಪಟ್ಟಣದ ಜನತಾ ಇಂಗ್ಲಿಷ್ ಶಾಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಹಮ್ಮಿಕೊಂಡಿದ್ದ ಕಮ್ಯುನಿಟಿ ಡೇ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಕುಮಾರ ಕೆ.ಎಫ್. ಮಾತನಾಡಿ, ‘ವಾಸ್ತವಕ್ಕೆ ಹತ್ತಿರವಾಗಿರುವ ಮತ್ತು ಮಕ್ಕಳಲ್ಲಿನ ಕಲ್ಪನೆಗಳಿಗೆ ಇಂತಹ ಲ್ಯಾಬ್ಗಳು ಅಗತ್ಯವಾಗಿದ್ದು, ಅನ್ವೇಷಣೆಗಳಿಗೆ ಪೇಟೆಂಟ್ ಪಡೆದು ದೇಶದ ಸಂಶೋಧನಾ ಕ್ಷೇತ್ರಕ್ಕೆ ಪರಿಚಯಿಸಲು ಮುಂದಾಗಬೇಕು’ ಎಂದರು.</p>.<p>ಸಂಸ್ಥೆ ಚೇರ್ಮನ್ ನಂದೀಶ ಪಾಟೀಲ, ‘ನಿಗದಿತ ಪಠ್ಯಕ್ರಮಕ್ಕಿಂತ ವಿದ್ಯಾರ್ಥಿಗಳ ಆಸಕ್ತಿಗೆ ಪೂರಕವಾಗಿ ಶಿಕ್ಷಣ ನೀಡುವುದು ಅಗತ್ಯವಾಗಿದೆ. ನಮ್ಮ ಶಾಲೆಯ ಅಟಲ್ ಟಿಂಕರಿಂಗ್ ಪ್ರಯೋಗಾಲಯ ಅದಕ್ಕೆ ಪೂರಕವಾಗಿ ಕೆಲಸ ಮಾಡುತ್ತಿವೆ’ ಎಂದರು.</p>.<p>ಮುಖ್ಯ ಶಿಕ್ಷಕ ಎಸ್.ಕೆ. ಪಾಟೀಲ ಕುಲಕರ್ಣಿ, ಕೆ.ಐ.ಕೊಂಗಿ, ವಿಜ್ಞಾನ ಶಿಕ್ಷಕಿ ರೂಪಾ ಕಾಗಿನೆಲಿ, ಸುಬ್ರಮಣ್ಯ ಸತ್ತಿಗೇರಿ, ಬಿ.ಎಸ್. ದೇವರಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಘಟಗಿ: ಮಕ್ಕಳ ಆಸಕ್ತಿಗೆ ಅನುಗುಣವಾಗಿ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ಶಿಕ್ಷಣ ನೀಡಿದರೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪೂರ ತಿಳಿಸಿದರು.</p>.<p>ಪಟ್ಟಣದ ಜನತಾ ಇಂಗ್ಲಿಷ್ ಶಾಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಹಮ್ಮಿಕೊಂಡಿದ್ದ ಕಮ್ಯುನಿಟಿ ಡೇ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಕುಮಾರ ಕೆ.ಎಫ್. ಮಾತನಾಡಿ, ‘ವಾಸ್ತವಕ್ಕೆ ಹತ್ತಿರವಾಗಿರುವ ಮತ್ತು ಮಕ್ಕಳಲ್ಲಿನ ಕಲ್ಪನೆಗಳಿಗೆ ಇಂತಹ ಲ್ಯಾಬ್ಗಳು ಅಗತ್ಯವಾಗಿದ್ದು, ಅನ್ವೇಷಣೆಗಳಿಗೆ ಪೇಟೆಂಟ್ ಪಡೆದು ದೇಶದ ಸಂಶೋಧನಾ ಕ್ಷೇತ್ರಕ್ಕೆ ಪರಿಚಯಿಸಲು ಮುಂದಾಗಬೇಕು’ ಎಂದರು.</p>.<p>ಸಂಸ್ಥೆ ಚೇರ್ಮನ್ ನಂದೀಶ ಪಾಟೀಲ, ‘ನಿಗದಿತ ಪಠ್ಯಕ್ರಮಕ್ಕಿಂತ ವಿದ್ಯಾರ್ಥಿಗಳ ಆಸಕ್ತಿಗೆ ಪೂರಕವಾಗಿ ಶಿಕ್ಷಣ ನೀಡುವುದು ಅಗತ್ಯವಾಗಿದೆ. ನಮ್ಮ ಶಾಲೆಯ ಅಟಲ್ ಟಿಂಕರಿಂಗ್ ಪ್ರಯೋಗಾಲಯ ಅದಕ್ಕೆ ಪೂರಕವಾಗಿ ಕೆಲಸ ಮಾಡುತ್ತಿವೆ’ ಎಂದರು.</p>.<p>ಮುಖ್ಯ ಶಿಕ್ಷಕ ಎಸ್.ಕೆ. ಪಾಟೀಲ ಕುಲಕರ್ಣಿ, ಕೆ.ಐ.ಕೊಂಗಿ, ವಿಜ್ಞಾನ ಶಿಕ್ಷಕಿ ರೂಪಾ ಕಾಗಿನೆಲಿ, ಸುಬ್ರಮಣ್ಯ ಸತ್ತಿಗೇರಿ, ಬಿ.ಎಸ್. ದೇವರಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>