<p><strong>ಧಾರವಾಡ</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲಿಬಾನ್ ರೀತಿಯ ಆಡಳಿತ ನಡೆಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ನೀಡಿರುವ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಪ್ರತಿಭಟನೆ ನಡೆಸಿದರು.</p><p>ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಜೋಶಿ ವಿರುದ್ಧ ಘೋಷಣೆ ಕೂಗಿದರು.</p><p>ಸಚಿವ ಸಂತೋಷ್ ಲಾಡ್ ಮಾತನಾಡಿ, ತಾಲಿಬಾನ್ ರೀತಿಯ ಸರ್ಕಾರ ಎಂಬ ಹೇಳಿಕೆಯನ್ನು ಜೋಶಿ ಅವರು ವಾಪಸ್ ಪಡೆಯಬೇಕು. ಪುಲ್ವಾಮಾ ಸಂದರ್ಭದಲ್ಲಿ 300 ಕೆ.ಜಿ ಆರ್ ಡಿಎಕ್ಸ್ ದೇಶದೊಳಕ್ಕೆ ಹೇಗೆ ಎಂಬ ಕುರಿತು ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದರು.</p><p>ಮುಖಂಡ ದೀಪಕ್ ಚಿಂಚೋರೆ ಮಾತನಾಡಿ, ಒಂದು ವಾರದೊಳಗೆ ಜೋಶಿ ಅವರು ಹೇಳಿಕೆ ವಾಪಸ್ ಪಡೆಯದಿದ್ದರೆ ಅವರ ಮನೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.</p><p>ಪ್ರಲ್ಹಾದ ಜೋಶಿ ಅವರು ಹಾವೇರಿ ಜಿಲ್ಲೆಯ ತಡಸ ಗ್ರಾಮದಲ್ಲಿ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲಿಬಾನ್ ರೀತಿಯ ಆಡಳಿತ ನಡೆಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ನೀಡಿರುವ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಪ್ರತಿಭಟನೆ ನಡೆಸಿದರು.</p><p>ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಜೋಶಿ ವಿರುದ್ಧ ಘೋಷಣೆ ಕೂಗಿದರು.</p><p>ಸಚಿವ ಸಂತೋಷ್ ಲಾಡ್ ಮಾತನಾಡಿ, ತಾಲಿಬಾನ್ ರೀತಿಯ ಸರ್ಕಾರ ಎಂಬ ಹೇಳಿಕೆಯನ್ನು ಜೋಶಿ ಅವರು ವಾಪಸ್ ಪಡೆಯಬೇಕು. ಪುಲ್ವಾಮಾ ಸಂದರ್ಭದಲ್ಲಿ 300 ಕೆ.ಜಿ ಆರ್ ಡಿಎಕ್ಸ್ ದೇಶದೊಳಕ್ಕೆ ಹೇಗೆ ಎಂಬ ಕುರಿತು ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದರು.</p><p>ಮುಖಂಡ ದೀಪಕ್ ಚಿಂಚೋರೆ ಮಾತನಾಡಿ, ಒಂದು ವಾರದೊಳಗೆ ಜೋಶಿ ಅವರು ಹೇಳಿಕೆ ವಾಪಸ್ ಪಡೆಯದಿದ್ದರೆ ಅವರ ಮನೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.</p><p>ಪ್ರಲ್ಹಾದ ಜೋಶಿ ಅವರು ಹಾವೇರಿ ಜಿಲ್ಲೆಯ ತಡಸ ಗ್ರಾಮದಲ್ಲಿ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>