<p><strong>ನವಲಗುಂದ</strong>: ಬಡವರ ಆಶ್ರಯ ಮನೆ ಯೋಜನೆಗೆ 36.19 ಎಕರೆ ಜಮೀನು ಖರೀದಿಸಲು ಸರ್ಕಾರ ₹ 5.50 ಕೋಟಿ ಹಣ ಬಿಡುಗಡೆ ಮಾಡಿದೆ ಎಂದು ಶಾಸಕ ಹಾಗೂ ನಗರ ಆಶ್ರಯ ಸಮಿತಿ ಅಧ್ಯಕ್ಷ ಎನ್.ಎಚ್.ಕೋನರಡ್ಡಿ ಹೇಳಿದರು.</p>.<p>ಅವರು ಶುಕ್ರವಾರ ಲೋಕೋಪಯೋಗಿ ಇಲಾಖೆಯ ಜಾಗೆಯಲ್ಲಿ ನೂತನವಾಗಿ ‘ಇಂದಿರಾ ಕ್ಯಾಂಟೀನ್’ ಕಟ್ಟಡದ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಮೂರು ತಿಂಗಳಲ್ಲಿ ಕಟ್ಟಡ ನಿರ್ಮಿಸಿ ಉಪಹಾರ ವಿತರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದರು.</p>.<p>‘ಹಿಂದೆ ನಾನು ಶಾಸಕನಿದ್ದ ಅವಧಿಯಲ್ಲಿ 41 ಎಕರೆ 9 ಗುಂಟೆ ಜಮೀನು ಖರೀದಿಸಿ 1335 ನಿವೇಶನ ರಚಿಸಿ 1250 ಫಲಾನುಭವಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಹಕ್ಕುಪತ್ರ ಹಂಚಿಕೆ ಮಾಡಿದ್ದು ಇತಿಹಾಸವಾಗಿದೆ. ಈ ಆಶ್ರಯ ಬಡಾವಣೆಗೆ ರಸ್ತೆ, ವಿದ್ಯುತ್ ಹಾಗೂ ನೀರು ಪೂರೈಕೆ ಮಾಡಿದ್ದು ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗಿದೆ. ಹಣ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಹಾಗೂ ವಸತಿ ಸಚಿವ ಜಮೀರ್ ಅಹ್ಮಮದ್ ಅವರನ್ನು ಅಭಿನಂದಿಸಿದರು.</p>.<p>ಪುರಸಭೆ ಸದಸ್ಯರಾದ ಜೀವನ್ ಪವಾರ, ಪ್ರಕಾಶ ಶಿಗ್ಲಿ, ಮಂಜು ಜಾಧವ, ಮೋದಿನ ಶಿರೂರ, ಸುರೇಶ ಮೇಟಿ, ಹನಮಂತ ವಾಲೀಕಾರ, ಪದ್ಮಾವತಿ ಪೂಜಾರ, ಹುಸೇನಬಿ ಧಾರವಾಡ, ಮುಖ್ಯಾಧಿಕಾರಿ ವೆಂಕಟೇಶ ನಾಗನೂರ, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಾಡ, ಗುತ್ತಿಗೆದಾರ ಸಂಸ್ಥೆಯಾದ ಎಕ್ಸ್ಎಲ್ ಪ್ರಿಕಾಸ್ಟ ಪರವಾಗಿ ಮಹಮ್ಮದ ಜೊಹಾರ ಹಾಗೂ ಆಶ್ರಯ ಸಮಿತಿ ಸದಸ್ಯರು, ಕೆ.ಡಿ.ಪಿ ಸಮಿತಿ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ</strong>: ಬಡವರ ಆಶ್ರಯ ಮನೆ ಯೋಜನೆಗೆ 36.19 ಎಕರೆ ಜಮೀನು ಖರೀದಿಸಲು ಸರ್ಕಾರ ₹ 5.50 ಕೋಟಿ ಹಣ ಬಿಡುಗಡೆ ಮಾಡಿದೆ ಎಂದು ಶಾಸಕ ಹಾಗೂ ನಗರ ಆಶ್ರಯ ಸಮಿತಿ ಅಧ್ಯಕ್ಷ ಎನ್.ಎಚ್.ಕೋನರಡ್ಡಿ ಹೇಳಿದರು.</p>.<p>ಅವರು ಶುಕ್ರವಾರ ಲೋಕೋಪಯೋಗಿ ಇಲಾಖೆಯ ಜಾಗೆಯಲ್ಲಿ ನೂತನವಾಗಿ ‘ಇಂದಿರಾ ಕ್ಯಾಂಟೀನ್’ ಕಟ್ಟಡದ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಮೂರು ತಿಂಗಳಲ್ಲಿ ಕಟ್ಟಡ ನಿರ್ಮಿಸಿ ಉಪಹಾರ ವಿತರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದರು.</p>.<p>‘ಹಿಂದೆ ನಾನು ಶಾಸಕನಿದ್ದ ಅವಧಿಯಲ್ಲಿ 41 ಎಕರೆ 9 ಗುಂಟೆ ಜಮೀನು ಖರೀದಿಸಿ 1335 ನಿವೇಶನ ರಚಿಸಿ 1250 ಫಲಾನುಭವಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಹಕ್ಕುಪತ್ರ ಹಂಚಿಕೆ ಮಾಡಿದ್ದು ಇತಿಹಾಸವಾಗಿದೆ. ಈ ಆಶ್ರಯ ಬಡಾವಣೆಗೆ ರಸ್ತೆ, ವಿದ್ಯುತ್ ಹಾಗೂ ನೀರು ಪೂರೈಕೆ ಮಾಡಿದ್ದು ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗಿದೆ. ಹಣ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಹಾಗೂ ವಸತಿ ಸಚಿವ ಜಮೀರ್ ಅಹ್ಮಮದ್ ಅವರನ್ನು ಅಭಿನಂದಿಸಿದರು.</p>.<p>ಪುರಸಭೆ ಸದಸ್ಯರಾದ ಜೀವನ್ ಪವಾರ, ಪ್ರಕಾಶ ಶಿಗ್ಲಿ, ಮಂಜು ಜಾಧವ, ಮೋದಿನ ಶಿರೂರ, ಸುರೇಶ ಮೇಟಿ, ಹನಮಂತ ವಾಲೀಕಾರ, ಪದ್ಮಾವತಿ ಪೂಜಾರ, ಹುಸೇನಬಿ ಧಾರವಾಡ, ಮುಖ್ಯಾಧಿಕಾರಿ ವೆಂಕಟೇಶ ನಾಗನೂರ, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಾಡ, ಗುತ್ತಿಗೆದಾರ ಸಂಸ್ಥೆಯಾದ ಎಕ್ಸ್ಎಲ್ ಪ್ರಿಕಾಸ್ಟ ಪರವಾಗಿ ಮಹಮ್ಮದ ಜೊಹಾರ ಹಾಗೂ ಆಶ್ರಯ ಸಮಿತಿ ಸದಸ್ಯರು, ಕೆ.ಡಿ.ಪಿ ಸಮಿತಿ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>