ಕುಡಿಯುವ ನೀರು ಬರ ಸಮಸ್ಯೆ ನಿಭಾಯಿಸಲು ಈಗಾಗಲೇ ನಮಲ್ಲಿ ₹5 ಕೋಟಿ ಅನುದಾನವಿದೆ. ರಾಜ್ಯ ಸರ್ಕಾರ ಕೂಡ ಹೆಚ್ಚುವರಿ ₹15 ಕೋಟಿ ಅನುದಾನ ಬಿಡುಗಡೆ ಮಾಡಿದೆ. ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಲಾಗುವುದು.
ದಿವ್ಯಪ್ರಭು ಜಿ.ಆರ್.ಜೆ., ಜಿಲ್ಲಾಧಿಕಾರಿ
ಬರ ಪೀಡಿತ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ತುರ್ತು ಕ್ರಮಕೈಗೊಳ್ಳಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅನುದಾನ ನೀಡಿದೆ.ತಾಲ್ಲೂಕುವಾರು ಹಂಚಿಕೆ ಮಾಡಲಾಗುವುದು.
ರೇಣುಕಾರಾಧ್ಯ ಸೊಪ್ಪಿನ ಮಠ, ಇಇ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗ ಜಿ.ಪಂ.
ಹುಬ್ಬಳ್ಳಿ ನಗರ ತಾಲ್ಲೂಕಿನಲ್ಲಿ 21 ಗ್ರಾಮಗಳಿದ್ದು ಇವುಗಳಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿಲ್ಲ. ನಗರ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡು ಬಂದಿಲ್ಲ. ನಮ್ಮಲ್ಲಿ ಪ್ರಸ್ತುತ 6 ತಿಂಗಳಿಗೆ ಆಗುವಷ್ಟು ನೀರಿನ ಸಂಗ್ರಹವಿದೆ