<p><strong>ಧಾರವಾಡ:</strong> ವೃತ್ತಿ ತರಬೇತಿ, ಕೌಶಲ ಆಧಾರಿತ ವಿಷಯಗಳಿಗೆ ಇಂದಿನ ಶಿಕ್ಷಣ ಸಂಸ್ಥೆಗಳು ಹೆಚ್ಚು ಒತ್ತು ನೀಡಬೇಕು ಎಂದು ಚೆನ್ನೈನ ಲಾಜಿಸ್ಟಿಕ್ಸ್ ಸೆಕ್ಟರ್ ಸ್ಕಿಲ್ ಕೌನ್ಸಿಲ್ ಸಂಸ್ಥೆಯ ಪ್ರಾಧ್ಯಾಪಕ ಎಸ್.ಗಣೇಶನ್ ಸಲಹೆ ನೀಡಿದರು.</p>.<p>ಕರ್ನಾಟಕ ಕಲಾ ಕಾಲೇಜಿನ ಬಿಬಿಎ ವಿಭಾಗ, ಐಕ್ಯೂಎಸಿ, ಮತ್ತು ಲಾಜಿಸ್ಟಿಕ್ ಸೆಕ್ಟರ್ ಸ್ಕಿಲ್ ಕೌನ್ಸಿಲ್ ವತಿಯಿಂದ ಬಿಬಿಎ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. </p>.<p>ವಿದ್ಯಾರ್ಥಿಗಳು ಸ್ವಯಂ ಕಲಿಕೆಗೆ ಹೆಚ್ಚು ಮಹತ್ವ ನೀಡಬೇಕು. ಕೇಂದ್ರ ಸರ್ಕಾರವು ಮಹತ್ವದ ವೃತ್ತಿ ತರಬೇತಿ ಆಧಾರಿತ ಕೋರ್ಸ್ಗಳನ್ನು ಪರಿಚಯಿಸುತ್ತಿದೆ. ವೃತ್ತಿ ಸಂಸ್ಕೃತಿಯನ್ನು ಮೂಡಿಸುವಲ್ಲಿ ಕೌಶಲ ಆಧಾರಿತ ಕೋರ್ಸ್ಗಳು ಅಗತ್ಯವಾಗಿವೆ ಎಂದರು. </p>.<p>ಚೆನೈನ ಲಾಜಿಸ್ಟಿಕ್ ಸೆಕ್ಟರ ಸ್ಕಿಲ್ ಕೌನ್ಸಿಲ್ ಸಂವಹನ ಕೌಶಲ್ಯ ವಿಭಾಗದ ಮುಖ್ಯಸ್ಥೆ ಗಾಯತ್ರಿ ಹರೀಶ್ ಮಾತನಾಡಿ, ಸಂವಹನ ಕೌಶಲ ಮತ್ತು ಇಂಗ್ಲಿಷ್ ಭಾಷಾ ಪ್ರಭುತ್ವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಉದ್ಯಮ ಆಧಾರಿತ ಪ್ರಾಯೋಗಿಕ ಕಲಿಕೆಗೆ ಒತ್ತು ನೀಡಬೇಕು ಎಂದು ಹೇಳಿದರು.</p>.<p>ಕರ್ನಾಟಕ ಕಲಾ ಕಾಲೇಜಿನ ಪ್ರಾಚಾರ್ಯ ಪ್ರೊ.ಡಿ.ಬಿ.ಕರಡೋಣಿ, ಪ್ರೊ.ಮುಕುಂದ ಲಮಾಣಿ, ಈರಣ್ಣ ಮುಳಗುಂದ, ಕಿರಣಕುಮಾರ, ಬಿ.ಬಿ.ಬಿರಾದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ವೃತ್ತಿ ತರಬೇತಿ, ಕೌಶಲ ಆಧಾರಿತ ವಿಷಯಗಳಿಗೆ ಇಂದಿನ ಶಿಕ್ಷಣ ಸಂಸ್ಥೆಗಳು ಹೆಚ್ಚು ಒತ್ತು ನೀಡಬೇಕು ಎಂದು ಚೆನ್ನೈನ ಲಾಜಿಸ್ಟಿಕ್ಸ್ ಸೆಕ್ಟರ್ ಸ್ಕಿಲ್ ಕೌನ್ಸಿಲ್ ಸಂಸ್ಥೆಯ ಪ್ರಾಧ್ಯಾಪಕ ಎಸ್.ಗಣೇಶನ್ ಸಲಹೆ ನೀಡಿದರು.</p>.<p>ಕರ್ನಾಟಕ ಕಲಾ ಕಾಲೇಜಿನ ಬಿಬಿಎ ವಿಭಾಗ, ಐಕ್ಯೂಎಸಿ, ಮತ್ತು ಲಾಜಿಸ್ಟಿಕ್ ಸೆಕ್ಟರ್ ಸ್ಕಿಲ್ ಕೌನ್ಸಿಲ್ ವತಿಯಿಂದ ಬಿಬಿಎ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. </p>.<p>ವಿದ್ಯಾರ್ಥಿಗಳು ಸ್ವಯಂ ಕಲಿಕೆಗೆ ಹೆಚ್ಚು ಮಹತ್ವ ನೀಡಬೇಕು. ಕೇಂದ್ರ ಸರ್ಕಾರವು ಮಹತ್ವದ ವೃತ್ತಿ ತರಬೇತಿ ಆಧಾರಿತ ಕೋರ್ಸ್ಗಳನ್ನು ಪರಿಚಯಿಸುತ್ತಿದೆ. ವೃತ್ತಿ ಸಂಸ್ಕೃತಿಯನ್ನು ಮೂಡಿಸುವಲ್ಲಿ ಕೌಶಲ ಆಧಾರಿತ ಕೋರ್ಸ್ಗಳು ಅಗತ್ಯವಾಗಿವೆ ಎಂದರು. </p>.<p>ಚೆನೈನ ಲಾಜಿಸ್ಟಿಕ್ ಸೆಕ್ಟರ ಸ್ಕಿಲ್ ಕೌನ್ಸಿಲ್ ಸಂವಹನ ಕೌಶಲ್ಯ ವಿಭಾಗದ ಮುಖ್ಯಸ್ಥೆ ಗಾಯತ್ರಿ ಹರೀಶ್ ಮಾತನಾಡಿ, ಸಂವಹನ ಕೌಶಲ ಮತ್ತು ಇಂಗ್ಲಿಷ್ ಭಾಷಾ ಪ್ರಭುತ್ವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಉದ್ಯಮ ಆಧಾರಿತ ಪ್ರಾಯೋಗಿಕ ಕಲಿಕೆಗೆ ಒತ್ತು ನೀಡಬೇಕು ಎಂದು ಹೇಳಿದರು.</p>.<p>ಕರ್ನಾಟಕ ಕಲಾ ಕಾಲೇಜಿನ ಪ್ರಾಚಾರ್ಯ ಪ್ರೊ.ಡಿ.ಬಿ.ಕರಡೋಣಿ, ಪ್ರೊ.ಮುಕುಂದ ಲಮಾಣಿ, ಈರಣ್ಣ ಮುಳಗುಂದ, ಕಿರಣಕುಮಾರ, ಬಿ.ಬಿ.ಬಿರಾದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>