<p><strong>ಧಾರವಾಡ:</strong> ಮಾದಕವಸ್ತು ವ್ಯಸನದ ವಿರುದ್ಧ ಎಲ್ಲರೂ ಹೋರಾಟ ಮಾಡುವುದು ಅನಿವಾರ್ಯ ಎಂದು ಡಿಸಿಪಿ ರಾಜು ಎಂ. ಹೇಳಿದರು.</p><p>ನಗರದ ಕೆಸಿಡಿ ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತಾಲಯ ಮತ್ತು ಆರೋಹಣ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತು ವ್ಯಸನ ವಿರುದ್ಧ ಜಾಗೃತಿ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಮಲಿಗಾಗಿ </p><p>ಗಾಂಜಾ, ಕೊಕೇನ್ ಮುಂತಾದ ಮಾದಕ ವಸ್ತುಗಳನ್ನು ಸೇವಿಸುತ್ತಾರೆ. ಇಂಥ ಗೀಳಿನಿಂದಾಗಿ ಎಷ್ಟೋ ಯುವಜನರು ಬದುಕು ಹಾಳು ಮಾಡಿಕೊಂಡಿದ್ದಾರೆ ಎಂದರು.</p><p>ಮಾದಕ ಪದಾರ್ಥಗಳ ಸೇವನೆಯು ಶರೀರ ಮತ್ತು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು.</p><p>ಮಾದಕ ವ್ಯಸನವು ಮೆದುಳಿನ ಮೇಲೆ ದುಷ್ಪರಿಣಾಮ ಬೀರುತ್ತದೆ. ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.</p><p>ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ. ಬಿ. ಎಸಿಪಿ ವಿಜಯ ಕುಮಾರ ಟಿ., ಇನ್ ಸ್ಪೆಕ್ಟರ್ ಶಂಕರಗೌಡ ಬಸವನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಮಾದಕವಸ್ತು ವ್ಯಸನದ ವಿರುದ್ಧ ಎಲ್ಲರೂ ಹೋರಾಟ ಮಾಡುವುದು ಅನಿವಾರ್ಯ ಎಂದು ಡಿಸಿಪಿ ರಾಜು ಎಂ. ಹೇಳಿದರು.</p><p>ನಗರದ ಕೆಸಿಡಿ ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತಾಲಯ ಮತ್ತು ಆರೋಹಣ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತು ವ್ಯಸನ ವಿರುದ್ಧ ಜಾಗೃತಿ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಮಲಿಗಾಗಿ </p><p>ಗಾಂಜಾ, ಕೊಕೇನ್ ಮುಂತಾದ ಮಾದಕ ವಸ್ತುಗಳನ್ನು ಸೇವಿಸುತ್ತಾರೆ. ಇಂಥ ಗೀಳಿನಿಂದಾಗಿ ಎಷ್ಟೋ ಯುವಜನರು ಬದುಕು ಹಾಳು ಮಾಡಿಕೊಂಡಿದ್ದಾರೆ ಎಂದರು.</p><p>ಮಾದಕ ಪದಾರ್ಥಗಳ ಸೇವನೆಯು ಶರೀರ ಮತ್ತು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು.</p><p>ಮಾದಕ ವ್ಯಸನವು ಮೆದುಳಿನ ಮೇಲೆ ದುಷ್ಪರಿಣಾಮ ಬೀರುತ್ತದೆ. ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.</p><p>ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ. ಬಿ. ಎಸಿಪಿ ವಿಜಯ ಕುಮಾರ ಟಿ., ಇನ್ ಸ್ಪೆಕ್ಟರ್ ಶಂಕರಗೌಡ ಬಸವನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>