ಭಾನುವಾರ, 22 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹುಬ್ಬಳ್ಳಿ, ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸಿ: ವೀರೇಶ ಧೂಪದಮಠ

Published : 22 ಸೆಪ್ಟೆಂಬರ್ 2024, 14:22 IST
Last Updated : 22 ಸೆಪ್ಟೆಂಬರ್ 2024, 14:22 IST
ಫಾಲೋ ಮಾಡಿ
Comments

ಹುಬ್ಬಳ್ಳಿ: ಸಾರ್ವಜನಿಕರ ಅನುಕೂಲ ಹಾಗೂ ಸುಗಮ ಆಡಳಿತದ ಹಿತದೃಷ್ಟಿಯಿಂದ ಹುಬ್ಬಳ್ಳಿ– ಧಾರವಾಡ ನಗರಗಳಿಗೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ವೀರೇಶ ಧೂಪದಮಠ ಮನವಿ ಮಾಡಿದ್ದಾರೆ.

ಸದ್ಯ ಎರಡೂ ನಗರಗಳನ್ನು ಒಳಗೊಂಡಂತೆ ಒಂದೇ ಮಹಾನಗರ ಪಾಲಿಕೆ ಇದೆ. ಆದರೆ ಹುಬ್ಬಳ್ಳಿ ಹಾಗೂ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಮಾಡಿದರೆ ಸಾರ್ವಜನಿಕರು ತಮ್ಮ ಪ್ರದೇಶದ ವ್ಯಾಪ್ತಿಯಲ್ಲಿ ಕಚೇರಿಗೆ ತೆರಳಿ ಕೆಲಸ, ಕಾರ್ಯಗಳನ್ನು ಬೇಗ ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದಿದ್ದಾರೆ.

ಸರ್ಕಾರದ ನಿಯಮಾನುಸಾರ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸಬಹುದು. ಪ್ರತ್ಯೇಕ ಪಾಲಿಕೆ ಮಾಡದಿದ್ದರೆ ಸದ್ಯದ ಮಟ್ಟಿಗೆ ಧಾರವಾಡವನ್ನು ನಗರಸಭೆಯನ್ನಾದರೂ ಮಾಡಬೇಕು. ಕೆಲ ವರ್ಷಗಳ ಬಳಿಕ ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT