<p><strong>ಧಾರವಾಡ</strong>: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆಯಲು ಸರ್ಕಾರವು ನಿರ್ಧರಿಸುವುದು ಸರಿ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದರು. </p><p>ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸರ್ಕಾರದ ನಿರ್ಧಾರ ವಿರೋಧಿಸಿ ಬಿಜೆಪಿಯವರು ಪ್ರತಿಭಟನೆ ನಡೆಸಲಿ, ಕೋರ್ಟ್ ಮೆಟ್ಟಿಲು ಏರಲಿ. ಕೋರ್ಟ್ ವಿಚಾರಣೆ ನಡೆಸುತ್ತದೆ’ಎಂದು ಉತ್ತರಿಸಿದರು. </p><p>‘ನಿವೇಶನಗಳನ್ನು ವಾಪಸ್ ನೀಡಿರುವುದು ಮಲ್ಲಿಕಾರ್ಜುನ ಖರ್ಗೆ ಅವರ ದೊಡ್ಡತನ. ಖರ್ಗೆ ಅವರು ರಾಜೀನಾಮೆ ಯಾಕೆ ನೀಡಬೇಕು’ ಎಂದು ಪ್ರಶ್ನಿಸಿದರು. </p><p>‘ಮುಡಾ ಪ್ರಕರಣದಲ್ಲಿ ಪಾದಯಾತ್ರೆ ಮಾಡಿದವರ ವಿರುದ್ಧವೇ ಎಫ್ಐಆರ್ಗಳಿವೆ. ಕೇಂದ್ರದಲ್ಲಿನ ಬಿಜೆಪಿ ಸರ್ಕಾರದ ಶೇ 39 ರಷ್ಟು ಸಚಿವರ ವಿರುದ್ಧ ಪ್ರಕರಣಗಳು ಇವೆ. ಅವರೆಲ್ಲ ರಾಜೀನಾಮೆ ಕೊಟ್ಟಿದ್ಧಾರಾ?’ ಎಂದರು. </p><p>‘ಪ್ರೇರಣಾ ಟ್ರಸ್ಟ್ಗೆ ಎಷ್ಟು ದುಡ್ಡು ಬಂದಿತ್ತು? ಟ್ರಸ್ಟ್ನ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿಯವರು ಮುಖ್ಯಮಂತ್ರಿ ಮಾಡಿರಲಿಲ್ಲವೇ? ಬಿಜೆಪಿಯವರು ಹೊಸದಾಗಿ ವಾಷಿಂಗ್ ಮೆಷಿನ್ವೊಂದನ್ನು ಕಂಡುಹಿಡಿದಿದ್ದಾರೆ. ಆ ಮೆಷಿನ್ಗೆ ಹಾಕಿದ ತಕ್ಷಣ ಎಲ್ಲರು ಬೆಳ್ಳಗಾಗಿ ಬಿಡುತ್ತಾರೆ’ ಎಂದು ವ್ಯಂಗ್ಯವಾಡಿದರು. </p><p>‘ಅತಿಥಿ ಶಿಕ್ಷಕರು ಮತ್ತು ಬಿಸಿಯೂಟ ಅಡುಗೆ ಸಹಾಯಕರ ಸಂಬಳ ಹೆಚ್ಚಿಸುವ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ಧಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆಯಲು ಸರ್ಕಾರವು ನಿರ್ಧರಿಸುವುದು ಸರಿ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದರು. </p><p>ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸರ್ಕಾರದ ನಿರ್ಧಾರ ವಿರೋಧಿಸಿ ಬಿಜೆಪಿಯವರು ಪ್ರತಿಭಟನೆ ನಡೆಸಲಿ, ಕೋರ್ಟ್ ಮೆಟ್ಟಿಲು ಏರಲಿ. ಕೋರ್ಟ್ ವಿಚಾರಣೆ ನಡೆಸುತ್ತದೆ’ಎಂದು ಉತ್ತರಿಸಿದರು. </p><p>‘ನಿವೇಶನಗಳನ್ನು ವಾಪಸ್ ನೀಡಿರುವುದು ಮಲ್ಲಿಕಾರ್ಜುನ ಖರ್ಗೆ ಅವರ ದೊಡ್ಡತನ. ಖರ್ಗೆ ಅವರು ರಾಜೀನಾಮೆ ಯಾಕೆ ನೀಡಬೇಕು’ ಎಂದು ಪ್ರಶ್ನಿಸಿದರು. </p><p>‘ಮುಡಾ ಪ್ರಕರಣದಲ್ಲಿ ಪಾದಯಾತ್ರೆ ಮಾಡಿದವರ ವಿರುದ್ಧವೇ ಎಫ್ಐಆರ್ಗಳಿವೆ. ಕೇಂದ್ರದಲ್ಲಿನ ಬಿಜೆಪಿ ಸರ್ಕಾರದ ಶೇ 39 ರಷ್ಟು ಸಚಿವರ ವಿರುದ್ಧ ಪ್ರಕರಣಗಳು ಇವೆ. ಅವರೆಲ್ಲ ರಾಜೀನಾಮೆ ಕೊಟ್ಟಿದ್ಧಾರಾ?’ ಎಂದರು. </p><p>‘ಪ್ರೇರಣಾ ಟ್ರಸ್ಟ್ಗೆ ಎಷ್ಟು ದುಡ್ಡು ಬಂದಿತ್ತು? ಟ್ರಸ್ಟ್ನ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿಯವರು ಮುಖ್ಯಮಂತ್ರಿ ಮಾಡಿರಲಿಲ್ಲವೇ? ಬಿಜೆಪಿಯವರು ಹೊಸದಾಗಿ ವಾಷಿಂಗ್ ಮೆಷಿನ್ವೊಂದನ್ನು ಕಂಡುಹಿಡಿದಿದ್ದಾರೆ. ಆ ಮೆಷಿನ್ಗೆ ಹಾಕಿದ ತಕ್ಷಣ ಎಲ್ಲರು ಬೆಳ್ಳಗಾಗಿ ಬಿಡುತ್ತಾರೆ’ ಎಂದು ವ್ಯಂಗ್ಯವಾಡಿದರು. </p><p>‘ಅತಿಥಿ ಶಿಕ್ಷಕರು ಮತ್ತು ಬಿಸಿಯೂಟ ಅಡುಗೆ ಸಹಾಯಕರ ಸಂಬಳ ಹೆಚ್ಚಿಸುವ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ಧಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>