<p><strong>ಧಾರವಾಡ</strong>: ದಾಖಲೆ ಇಲ್ಲದೆ ಬಸ್ನಲ್ಲಿ ಸಾಗಿಸುತ್ತಿದ್ದ ಸುಮಾರು 2.5 ಕೆ.ಜಿ ಚಿನ್ನ, ಬೆಳ್ಳಿಯ ಆಭರಣಗಳನ್ನು (ಅಂದಾಜು ಮೌಲ್ಯ ₹73.35 ಲಕ್ಷ) ವಶಪಡಿಸಿಕೊಂಡಿರುವ ಪೊಲೀಸರು, ಆರೋಪಿ ಅಭಿಷೇಕ್ ಜೀತುಸಿಂಗ್ ದೇವಲ್ನನ್ನು ಬಂಧಿಸಿದ್ದಾರೆ.</p>.<p>ಆರೋಪಿ ಖಾಸಗಿ ಬಸ್ನಲ್ಲಿ ಮುಂಬೈನಿಂದ ಹುಬ್ಬಳ್ಳಿಗೆ ಆಭರಣಗಳನ್ನು ಸಾಗಿಸುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಮತ್ತು ವಿದ್ಯಾಗಿರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಆತನನ್ನು ಎಸ್ಡಿಎಂ ಕಾಲೇಜು ಸಮೀಪ ಆಭರಣ ಸಮೇತ ವಶಕ್ಕೆ ಪಡೆದಿದ್ದಾರೆ.</p>.<p>ಕೊರಿಯರ್ ಉದ್ಯೋಗಿಯಾಗಿರುವ ಅಭಿಷೇಕ್, ಹುಬ್ಬಳ್ಳಿಯ ಚಾವಲ್ ಜೋಳದ ಓಣಿಯ ನಿವಾಸಿ. ಆತನಿಂದ 1.1 ಕೆ.ಜಿ ಚಿನ್ನದ ಆಭರಣ ಹಾಗೂ 1 ಕೆ.ಜಿ 463 ಗ್ರಾಂ ಬೆಳ್ಳಿಯ ಆಭರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.</p>.<p>ಆರೋಪಿ ಅಭಿಷೇಕ್ ಆಭರಣಗಳನ್ನು ಮುಂಬೈನಿಂದ ಹುಬ್ಬಳ್ಳಿಗೆ ಅಕ್ರಮವಾಗಿ ತಂದು ಜಿಎಸ್ಟಿ ಮತ್ತು ಬಿಲ್ ಇಲ್ಲದೆ ಅಭರಣ ಅಂಗಡಿಯವರಿಗೆ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಕಾರ್ಯಾಚರಣೆಯಲ್ಲಿ ಸಿಸಿಬಿ ಎಸಿಪಿ ಎಸ್.ಟಿ.ಒಡೆಯರ, ಸಿಸಿಬಿ ಇನ್ಸ್ಪೆಕ್ಟರ್ ಪ್ರಭು ಗಂಗೇನಹಳ್ಳಿ, ವಿದ್ಯಾಗಿರಿ ಠಾಣೆ ಇನ್ಸ್ಪೆಕ್ಟರ್ ಸಂಗಮೇಶ ದಿಡಿಗನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ದಾಖಲೆ ಇಲ್ಲದೆ ಬಸ್ನಲ್ಲಿ ಸಾಗಿಸುತ್ತಿದ್ದ ಸುಮಾರು 2.5 ಕೆ.ಜಿ ಚಿನ್ನ, ಬೆಳ್ಳಿಯ ಆಭರಣಗಳನ್ನು (ಅಂದಾಜು ಮೌಲ್ಯ ₹73.35 ಲಕ್ಷ) ವಶಪಡಿಸಿಕೊಂಡಿರುವ ಪೊಲೀಸರು, ಆರೋಪಿ ಅಭಿಷೇಕ್ ಜೀತುಸಿಂಗ್ ದೇವಲ್ನನ್ನು ಬಂಧಿಸಿದ್ದಾರೆ.</p>.<p>ಆರೋಪಿ ಖಾಸಗಿ ಬಸ್ನಲ್ಲಿ ಮುಂಬೈನಿಂದ ಹುಬ್ಬಳ್ಳಿಗೆ ಆಭರಣಗಳನ್ನು ಸಾಗಿಸುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಮತ್ತು ವಿದ್ಯಾಗಿರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಆತನನ್ನು ಎಸ್ಡಿಎಂ ಕಾಲೇಜು ಸಮೀಪ ಆಭರಣ ಸಮೇತ ವಶಕ್ಕೆ ಪಡೆದಿದ್ದಾರೆ.</p>.<p>ಕೊರಿಯರ್ ಉದ್ಯೋಗಿಯಾಗಿರುವ ಅಭಿಷೇಕ್, ಹುಬ್ಬಳ್ಳಿಯ ಚಾವಲ್ ಜೋಳದ ಓಣಿಯ ನಿವಾಸಿ. ಆತನಿಂದ 1.1 ಕೆ.ಜಿ ಚಿನ್ನದ ಆಭರಣ ಹಾಗೂ 1 ಕೆ.ಜಿ 463 ಗ್ರಾಂ ಬೆಳ್ಳಿಯ ಆಭರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.</p>.<p>ಆರೋಪಿ ಅಭಿಷೇಕ್ ಆಭರಣಗಳನ್ನು ಮುಂಬೈನಿಂದ ಹುಬ್ಬಳ್ಳಿಗೆ ಅಕ್ರಮವಾಗಿ ತಂದು ಜಿಎಸ್ಟಿ ಮತ್ತು ಬಿಲ್ ಇಲ್ಲದೆ ಅಭರಣ ಅಂಗಡಿಯವರಿಗೆ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಕಾರ್ಯಾಚರಣೆಯಲ್ಲಿ ಸಿಸಿಬಿ ಎಸಿಪಿ ಎಸ್.ಟಿ.ಒಡೆಯರ, ಸಿಸಿಬಿ ಇನ್ಸ್ಪೆಕ್ಟರ್ ಪ್ರಭು ಗಂಗೇನಹಳ್ಳಿ, ವಿದ್ಯಾಗಿರಿ ಠಾಣೆ ಇನ್ಸ್ಪೆಕ್ಟರ್ ಸಂಗಮೇಶ ದಿಡಿಗನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>