<p><strong>ಹುಬ್ಬಳ್ಳಿ:</strong> ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಮತ್ತು ಎಲ್ಲ ಲಿಂಗಾಯತ ಉಪಪಂಗಡಗಳಿಗೆ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗಾಗಿ ಕಾನೂನಾತ್ಮಕ ಹೋರಾಟ ನಡೆಸಲು ಬೆಂಗಳೂರಿನಲ್ಲಿ ಜುಲೈ 23ರಂದು ಸಮಾಜದ ವಕೀಲರ ರಾಜ್ಯಮಟ್ಟದ ಸಭೆ ಕರೆಯಲಾಗಿದೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿಗಾಗಿ ಈಗ ಏಳನೇ ಹಂತದ ಪತ್ರ ಚಳವಳಿ ನಡೆಸಲಾಗುತ್ತಿದೆ. ಮುಂದಿನ ಹಂತದಲ್ಲಿ ಕಾನೂನು ಹೋರಾಟಕ್ಕೆ ಸಮಾಜದ ಹಿರಿಯ ವಕೀಲರ ತಂಡ ರಚನೆ ಮಾಡಲಾಗುವುದು ಎಂದರು.</p>.<p>ಸಭೆಯ ಬಳಿಕ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ, ಮುಖ್ಯಮಂತ್ರಿ, ಕಾನೂನು ಸಚಿವರಿಗೆ ಮನವಿ ಸಲ್ಲಿಸಲಾಗುವುದು. ಅಲ್ಲದೆ, ಜಿಲ್ಲಾ, ತಾಲ್ಲೂಕು ಮಟ್ಟದದಲ್ಲಿ ವಕೀಲರ ಸಂಘದ ಮೂಲಕ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.</p>.<p>ವಿವಿಧ ಪಕ್ಷಗಳಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ 20 ಶಾಸಕರಿದ್ದಾರೆ. ಎಲ್ಲರೂ ಈ ಅಧಿವೇಶನದಲ್ಲಿ ಮೀಸಲಾತಿಗಾಗಿ ಧ್ವನಿ ಎತ್ತಬೇಕು. ಆ ಮೂಲಕ ಸಮಾಜದ ಋಣ ತೀರಿಸಬೇಕು. ಸಮಾಜದ ಶಾಸಕರು ಗೆಲ್ಲಲು ಮೀಸಲಾತಿ ಹೋರಾಟವೂ ಕಾರಣ. ಹೋರಾಟಕ್ಕೆ ಸಮಾಜದ ಶಾಸಕರು ಬೆಂಬಲ ನೀಡದೆ, ಅಸಹಕಾರ ತೋರಿದರೆ ಸಮಾಜದ ನಂಬಿಕೆ ಕಳೆದುಕೊಳ್ಳಬೇಕಾಗುತ್ತದೆ ಎಂದರು ಎಂದು ಹೇಳಿದರು.</p>.<p>ಲೋಕಸಭೆ ಚುನಾವಣೆ ಬಳಿಕ ಕಾನೂನು ತಜ್ಞರ ಸಭೆ ಕರೆದು ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ.ಪಾಟೀಲ ಭರವಸೆ ನೀಡಿದ್ದರು. ಚುನಾವಣೆ ಮುಗಿದು ಒಂದು ತಿಂಗಳು ಕಳೆದರೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು.</p>.<p>ಈ ಹಿಂದೆ ಹೋರಾಟ ನಡೆಸಿದಾಗ ಸಮಾಜದ ವಕೀಲರು ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದರು. ಈಗ ವಕೀಲರ ಸಭೆ ಕರೆದು ಅವರ ಬೆಂಬಲ ಕೋರಲಾಗಿದ್ದು, ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದು ಹೇಳಿದರು.</p>.<p>ಗುರುವಾರ ನಡೆದ ವಕೀಲರ ಸಭೆಯಲ್ಲಿ ಮೀಸಲಾತಿ ಹೋರಾಟಕ್ಕಾಗಿ ಬೆಂಗಳೂರಿನಲ್ಲಿ ಸಭೆ ನಡೆಸುವುದು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ವಕೀಲರ ಸಂಘಟನೆ ಮಾಡುವುದು, ಕಾನೂನಾತ್ಮಕ ಹೋರಾಟಕ್ಕೆ ವಕೀಲರ ತಂಡ ರಚನೆ ಮಾಡಬೇಕು ಎಂಬ ನಿರ್ಣಯ ಕೈಗೊಳ್ಳಲಾಗಿದೆ ಎಂದರು.</p>.<p>ಜುಲೈ 21ರಂದು ಬೆಂಗಳೂರಿನಲ್ಲಿ ಸಮಾಜದ ಪಂಚಸೇನೆಯ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ನಡೆಯುವ ಸ್ಥಳವನ್ನು ಶೀಘ್ರದಲ್ಲಿಯೇ ನಿಗದಿ ಮಾಡಲಾಗುವುದು ಎಂದು ತಿಳಿಸಿದರು.</p>.<p>ಲಿಂಗಾಯತ ಸಮಾಜದ ಉಳಿದ ಒಳಪಂಗಡಗಳಿಗೆ ಮೀಸಲಾತಿ ನೀಡಿದರೂ ನಮ್ಮ ಬೆಂಬಲ ಇದೆ. ಮಹರಾಷ್ಟ್ರದಲ್ಲಿ ಮರಾಠ ಮೀಸಲಾತಿಗಾಗಿ ಆ ಸಮಾಜದವರು 10 ವರ್ಷ ಹೋರಾಟ ನಡೆಸಿದರು. ನಮಗೂ ನ್ಯಾಯ ಸಿಗುವ ವಿಶ್ವಾಸ ಇದೆ ಎಂದರು.</p>.<h2>ಪಂಚಮಸಾಲಿ ಸಮಾಜದ ವಕೀಲರ ಸಭೆ</h2>.<p>ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕಾನೂನು ಹೋರಾಟ ನಡೆಸಲು ಪೂರ್ವಭಾವಿಯಾಗಿ ಉತ್ತರ ಕರ್ನಾಟಕ ಭಾಗದ ಪಂಚಮಸಾಲಿ ವಕೀಲರ ಸಭೆಯನ್ನು ನಗರದಲ್ಲಿ ಗುರುವಾರ ನಡೆಸಲಾಯಿತು.</p>.<p>ಸಭೆಯಲ್ಲಿ ಕೂಡಲ ಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, 2ಎ ಮೀಸಲಾತಿಗಾಗಿ ಸಮಾಜದ ವಕೀಲರು ಒಗ್ಗಟ್ಟಾಗಬೇಕು ಎಂದು ಮನವಿ ಮಾಡಿದರು.</p>.<p>ಹುಬ್ಬಳ್ಳಿ ವಕೀಲರ ಸಂಘದ ಮಾಜಿ ಅಧ್ಯಕ್ಷ ಡಿ.ಎಂ.ನರಗುಂದ ಮಾತನಾಡಿ, ನ್ಯಾಯಯುತ ಬೇಡಿಕೆಗಾಗಿ ಸಮಾಜದ ಸ್ವಾಮೀಜಿ ಅವಿರತವಾಗಿ ಹೋರಾಟ ನಡೆಸುತ್ತಿದ್ದಾರೆ. ಅದಕ್ಕೆ ವಕೀಲರು ಬೆಂಬಲ ನೀಡಲಿದ್ದಾರೆ ಎಂದರು.</p>.<p>ಆರ್.ಜಿ. ಕೊಡ್ಲಿ, ಎ.ವಿ.ಬಳಿಗಾರ್, ಹನುಮಂತ ಶಿಗ್ಗಾವಿ, ಎಸ್.ಎಸ್.ನಾಗನಗೌಡ್ರ, ಬಾಪುಗೌಡ ಶಾಬಾಳದ, ವೈ.ಬಿ.ಮುದಿಗೌಡ್ರ, ಸಾವಿತ್ರಿ ಪೊಲೀಸಗೌಡ್ರ, ವಿದ್ಯಾ ಪಾಟೀಲ, ಪೂಜಾ ಸವದತ್ತಿ, ಸಾವಿತ್ರಿ ಅನಾಮಿ, ಸಿ.ವಿ.ಹೊಂಬಾಳ, ಸುಜಾತಾ ಗೋವನಕೊಪ್ಪ, ವಿ.ಟಿ.ಕುಲಕರ್ಣಿ. ಜಿ.ಆರ್.ಪಾಟೀಲ, ಎಸ್.ಎಸ್.ಕೋಟಗಿ, ಜಿ.ಎಫ್.ಸಂಕಣ್ಣವರ, ವಿಜಯಲಕ್ಷ್ಮಿ ವಾಲಿ, ಪಿ.ಎಸ್. ನರೇಗಲ್ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಪಂಚಮಸಾಲಿ ಸಮಾಜದ 250ಕ್ಕೂ ಹೆಚ್ಚು ವಕೀಲರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಮತ್ತು ಎಲ್ಲ ಲಿಂಗಾಯತ ಉಪಪಂಗಡಗಳಿಗೆ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗಾಗಿ ಕಾನೂನಾತ್ಮಕ ಹೋರಾಟ ನಡೆಸಲು ಬೆಂಗಳೂರಿನಲ್ಲಿ ಜುಲೈ 23ರಂದು ಸಮಾಜದ ವಕೀಲರ ರಾಜ್ಯಮಟ್ಟದ ಸಭೆ ಕರೆಯಲಾಗಿದೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿಗಾಗಿ ಈಗ ಏಳನೇ ಹಂತದ ಪತ್ರ ಚಳವಳಿ ನಡೆಸಲಾಗುತ್ತಿದೆ. ಮುಂದಿನ ಹಂತದಲ್ಲಿ ಕಾನೂನು ಹೋರಾಟಕ್ಕೆ ಸಮಾಜದ ಹಿರಿಯ ವಕೀಲರ ತಂಡ ರಚನೆ ಮಾಡಲಾಗುವುದು ಎಂದರು.</p>.<p>ಸಭೆಯ ಬಳಿಕ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ, ಮುಖ್ಯಮಂತ್ರಿ, ಕಾನೂನು ಸಚಿವರಿಗೆ ಮನವಿ ಸಲ್ಲಿಸಲಾಗುವುದು. ಅಲ್ಲದೆ, ಜಿಲ್ಲಾ, ತಾಲ್ಲೂಕು ಮಟ್ಟದದಲ್ಲಿ ವಕೀಲರ ಸಂಘದ ಮೂಲಕ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.</p>.<p>ವಿವಿಧ ಪಕ್ಷಗಳಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ 20 ಶಾಸಕರಿದ್ದಾರೆ. ಎಲ್ಲರೂ ಈ ಅಧಿವೇಶನದಲ್ಲಿ ಮೀಸಲಾತಿಗಾಗಿ ಧ್ವನಿ ಎತ್ತಬೇಕು. ಆ ಮೂಲಕ ಸಮಾಜದ ಋಣ ತೀರಿಸಬೇಕು. ಸಮಾಜದ ಶಾಸಕರು ಗೆಲ್ಲಲು ಮೀಸಲಾತಿ ಹೋರಾಟವೂ ಕಾರಣ. ಹೋರಾಟಕ್ಕೆ ಸಮಾಜದ ಶಾಸಕರು ಬೆಂಬಲ ನೀಡದೆ, ಅಸಹಕಾರ ತೋರಿದರೆ ಸಮಾಜದ ನಂಬಿಕೆ ಕಳೆದುಕೊಳ್ಳಬೇಕಾಗುತ್ತದೆ ಎಂದರು ಎಂದು ಹೇಳಿದರು.</p>.<p>ಲೋಕಸಭೆ ಚುನಾವಣೆ ಬಳಿಕ ಕಾನೂನು ತಜ್ಞರ ಸಭೆ ಕರೆದು ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ.ಪಾಟೀಲ ಭರವಸೆ ನೀಡಿದ್ದರು. ಚುನಾವಣೆ ಮುಗಿದು ಒಂದು ತಿಂಗಳು ಕಳೆದರೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು.</p>.<p>ಈ ಹಿಂದೆ ಹೋರಾಟ ನಡೆಸಿದಾಗ ಸಮಾಜದ ವಕೀಲರು ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದರು. ಈಗ ವಕೀಲರ ಸಭೆ ಕರೆದು ಅವರ ಬೆಂಬಲ ಕೋರಲಾಗಿದ್ದು, ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದು ಹೇಳಿದರು.</p>.<p>ಗುರುವಾರ ನಡೆದ ವಕೀಲರ ಸಭೆಯಲ್ಲಿ ಮೀಸಲಾತಿ ಹೋರಾಟಕ್ಕಾಗಿ ಬೆಂಗಳೂರಿನಲ್ಲಿ ಸಭೆ ನಡೆಸುವುದು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ವಕೀಲರ ಸಂಘಟನೆ ಮಾಡುವುದು, ಕಾನೂನಾತ್ಮಕ ಹೋರಾಟಕ್ಕೆ ವಕೀಲರ ತಂಡ ರಚನೆ ಮಾಡಬೇಕು ಎಂಬ ನಿರ್ಣಯ ಕೈಗೊಳ್ಳಲಾಗಿದೆ ಎಂದರು.</p>.<p>ಜುಲೈ 21ರಂದು ಬೆಂಗಳೂರಿನಲ್ಲಿ ಸಮಾಜದ ಪಂಚಸೇನೆಯ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ನಡೆಯುವ ಸ್ಥಳವನ್ನು ಶೀಘ್ರದಲ್ಲಿಯೇ ನಿಗದಿ ಮಾಡಲಾಗುವುದು ಎಂದು ತಿಳಿಸಿದರು.</p>.<p>ಲಿಂಗಾಯತ ಸಮಾಜದ ಉಳಿದ ಒಳಪಂಗಡಗಳಿಗೆ ಮೀಸಲಾತಿ ನೀಡಿದರೂ ನಮ್ಮ ಬೆಂಬಲ ಇದೆ. ಮಹರಾಷ್ಟ್ರದಲ್ಲಿ ಮರಾಠ ಮೀಸಲಾತಿಗಾಗಿ ಆ ಸಮಾಜದವರು 10 ವರ್ಷ ಹೋರಾಟ ನಡೆಸಿದರು. ನಮಗೂ ನ್ಯಾಯ ಸಿಗುವ ವಿಶ್ವಾಸ ಇದೆ ಎಂದರು.</p>.<h2>ಪಂಚಮಸಾಲಿ ಸಮಾಜದ ವಕೀಲರ ಸಭೆ</h2>.<p>ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕಾನೂನು ಹೋರಾಟ ನಡೆಸಲು ಪೂರ್ವಭಾವಿಯಾಗಿ ಉತ್ತರ ಕರ್ನಾಟಕ ಭಾಗದ ಪಂಚಮಸಾಲಿ ವಕೀಲರ ಸಭೆಯನ್ನು ನಗರದಲ್ಲಿ ಗುರುವಾರ ನಡೆಸಲಾಯಿತು.</p>.<p>ಸಭೆಯಲ್ಲಿ ಕೂಡಲ ಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, 2ಎ ಮೀಸಲಾತಿಗಾಗಿ ಸಮಾಜದ ವಕೀಲರು ಒಗ್ಗಟ್ಟಾಗಬೇಕು ಎಂದು ಮನವಿ ಮಾಡಿದರು.</p>.<p>ಹುಬ್ಬಳ್ಳಿ ವಕೀಲರ ಸಂಘದ ಮಾಜಿ ಅಧ್ಯಕ್ಷ ಡಿ.ಎಂ.ನರಗುಂದ ಮಾತನಾಡಿ, ನ್ಯಾಯಯುತ ಬೇಡಿಕೆಗಾಗಿ ಸಮಾಜದ ಸ್ವಾಮೀಜಿ ಅವಿರತವಾಗಿ ಹೋರಾಟ ನಡೆಸುತ್ತಿದ್ದಾರೆ. ಅದಕ್ಕೆ ವಕೀಲರು ಬೆಂಬಲ ನೀಡಲಿದ್ದಾರೆ ಎಂದರು.</p>.<p>ಆರ್.ಜಿ. ಕೊಡ್ಲಿ, ಎ.ವಿ.ಬಳಿಗಾರ್, ಹನುಮಂತ ಶಿಗ್ಗಾವಿ, ಎಸ್.ಎಸ್.ನಾಗನಗೌಡ್ರ, ಬಾಪುಗೌಡ ಶಾಬಾಳದ, ವೈ.ಬಿ.ಮುದಿಗೌಡ್ರ, ಸಾವಿತ್ರಿ ಪೊಲೀಸಗೌಡ್ರ, ವಿದ್ಯಾ ಪಾಟೀಲ, ಪೂಜಾ ಸವದತ್ತಿ, ಸಾವಿತ್ರಿ ಅನಾಮಿ, ಸಿ.ವಿ.ಹೊಂಬಾಳ, ಸುಜಾತಾ ಗೋವನಕೊಪ್ಪ, ವಿ.ಟಿ.ಕುಲಕರ್ಣಿ. ಜಿ.ಆರ್.ಪಾಟೀಲ, ಎಸ್.ಎಸ್.ಕೋಟಗಿ, ಜಿ.ಎಫ್.ಸಂಕಣ್ಣವರ, ವಿಜಯಲಕ್ಷ್ಮಿ ವಾಲಿ, ಪಿ.ಎಸ್. ನರೇಗಲ್ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಪಂಚಮಸಾಲಿ ಸಮಾಜದ 250ಕ್ಕೂ ಹೆಚ್ಚು ವಕೀಲರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>