<p>ಧಾರವಾಡ: ‘ಚುನಾವಣೆ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಕಾನೂನುಬಾಹಿರ ಮತ್ತು ಸುಳ್ಳು ಸುದ್ದಿಗಳು ಹರಡುವುದನ್ನು ನಿಯಂತ್ರಿಸಲು ಜಿಲ್ಲಾ ಚುನಾವಣಾ ನಿಯಂತ್ರಣ ಕೇಂದ್ರದಲ್ಲಿ ಸಾಮಾಜಿಕ ಜಾಲತಾಣಗಳ ಉಸ್ತುವಾರಿ ಕೋಶ ತೆರೆಯಲಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದ್ದಾರೆ.</p>.<p>ವಿಷಯ ಪರಿಣಿತ ಅಧಿಕಾರಿಗಳ ನೇತೃತ್ವದಲಿ ಜಿಲ್ಲಾ ಸಾಮಾಜಿಕ ಮಾಧ್ಯಮ ಘಟಕವನ್ನು ರಚಿಸಲಾಗಿದೆ. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ, ಪತ್ರಿಕೋದ್ಯಮ ವಿಭಾಗದ ಸಹಪ್ರಾಧ್ಯಾಪಕರು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ತಾಂತ್ರಿಕ ಸಮಾಲೋಚಕರು, ಶಿಕ್ಷಕರು ಸಹಿತ 20 ಮಂದಿ ತಂಡ ಕಾರ್ಯನಿರ್ವಹಿಸಲಿದೆ.</p>.<p>ಈ ಕೋಶವು ದಿನದ 24 ಗಂಟೆ ಕಾರ್ಯ ನಿರ್ವಹಿಸುತ್ತದೆ. ಅಂತರ್ಜಾಲದಲ್ಲಿ ಪ್ರಕಟವಾಗುವ ಸುದ್ದಿಗಳು, ವಿದ್ಯಮಾನಗಳು ಮತ್ತು ಒಟಿಟಿ ಪ್ಲಾಟ್ಫಾರಂ (ಉತ್ಪ್ರೇಕ್ಷಿತ) ಸುದ್ದಿಗಳನ್ನು ಪರಿಶೀಲಿಸಲಿದೆ. ನೀತಿ ಸಂಹಿತೆ ಉಲಂಘಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವವರ ಮೇಲೆ ಈ ಕೋಶವು ನಿಗಾ ಇಡಲಿದೆ.</p>.<p>ಫೇಸ್ಬುಕ್, ವಾಟ್ಸ್ ಆ್ಯಪ್, ಟ್ವಿಟ್ಟರ್(ಎಕ್ಸ್), ಟೆಲಿಗ್ರಾಂ, ಯೂಟ್ಯೂಬ್, ವೆಬ್ ಚಾನೆಲ್ ಸಹಿತ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುವ ಎಲ್ಲ ಬಗೆಯ ಸುದ್ಧಿ, ಆಡಿಯೊ ಮತ್ತು ವಿಡಿಯೊ ಸಂದೇಶಗಳ ಮೇಲೆ ಈ ಕೋಶವು ಕಣ್ಗಾವಲು ಇಡಲಿದೆ.</p>.<p>‘ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವುದು ಮತ್ತು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ, ಸಂಬಂಧಪಟ್ಟ ಸುದ್ದಿ ಅಥವಾ ವಿಡಿಯೊ ಪ್ರಸಾರದ ಮೂಲ ಪತ್ತೆ ಹಚ್ಚಿ, ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಚುನಾವಣೆ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಕಾನೂನುಬಾಹಿರ ಮತ್ತು ಸುಳ್ಳು ಸುದ್ದಿಗಳು ಹರಡುವುದನ್ನು ನಿಯಂತ್ರಿಸಲು ಜಿಲ್ಲಾ ಚುನಾವಣಾ ನಿಯಂತ್ರಣ ಕೇಂದ್ರದಲ್ಲಿ ಸಾಮಾಜಿಕ ಜಾಲತಾಣಗಳ ಉಸ್ತುವಾರಿ ಕೋಶ ತೆರೆಯಲಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದ್ದಾರೆ.</p>.<p>ವಿಷಯ ಪರಿಣಿತ ಅಧಿಕಾರಿಗಳ ನೇತೃತ್ವದಲಿ ಜಿಲ್ಲಾ ಸಾಮಾಜಿಕ ಮಾಧ್ಯಮ ಘಟಕವನ್ನು ರಚಿಸಲಾಗಿದೆ. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ, ಪತ್ರಿಕೋದ್ಯಮ ವಿಭಾಗದ ಸಹಪ್ರಾಧ್ಯಾಪಕರು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ತಾಂತ್ರಿಕ ಸಮಾಲೋಚಕರು, ಶಿಕ್ಷಕರು ಸಹಿತ 20 ಮಂದಿ ತಂಡ ಕಾರ್ಯನಿರ್ವಹಿಸಲಿದೆ.</p>.<p>ಈ ಕೋಶವು ದಿನದ 24 ಗಂಟೆ ಕಾರ್ಯ ನಿರ್ವಹಿಸುತ್ತದೆ. ಅಂತರ್ಜಾಲದಲ್ಲಿ ಪ್ರಕಟವಾಗುವ ಸುದ್ದಿಗಳು, ವಿದ್ಯಮಾನಗಳು ಮತ್ತು ಒಟಿಟಿ ಪ್ಲಾಟ್ಫಾರಂ (ಉತ್ಪ್ರೇಕ್ಷಿತ) ಸುದ್ದಿಗಳನ್ನು ಪರಿಶೀಲಿಸಲಿದೆ. ನೀತಿ ಸಂಹಿತೆ ಉಲಂಘಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವವರ ಮೇಲೆ ಈ ಕೋಶವು ನಿಗಾ ಇಡಲಿದೆ.</p>.<p>ಫೇಸ್ಬುಕ್, ವಾಟ್ಸ್ ಆ್ಯಪ್, ಟ್ವಿಟ್ಟರ್(ಎಕ್ಸ್), ಟೆಲಿಗ್ರಾಂ, ಯೂಟ್ಯೂಬ್, ವೆಬ್ ಚಾನೆಲ್ ಸಹಿತ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುವ ಎಲ್ಲ ಬಗೆಯ ಸುದ್ಧಿ, ಆಡಿಯೊ ಮತ್ತು ವಿಡಿಯೊ ಸಂದೇಶಗಳ ಮೇಲೆ ಈ ಕೋಶವು ಕಣ್ಗಾವಲು ಇಡಲಿದೆ.</p>.<p>‘ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವುದು ಮತ್ತು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ, ಸಂಬಂಧಪಟ್ಟ ಸುದ್ದಿ ಅಥವಾ ವಿಡಿಯೊ ಪ್ರಸಾರದ ಮೂಲ ಪತ್ತೆ ಹಚ್ಚಿ, ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>