<p><strong>ನವಲಗುಂದ</strong>: ಮಹದಾಯಿ, ಕಳಸಾ –ಬಂಡೂರಿ ಕಾಮಗಾರಿಗೆ ಶೀಘ್ರ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು ಎಂದು ರೈತ ಮುಖಂಡ ಸುಭಾಷಗೌಡ ಪಾಟೀಲ ಆಗ್ರಹಿಸಿದರು.</p>.<p>ಪಟ್ಟಣದ ಮಹದಾಯಿ ಕಳಸಾ-ಬಂಡೂರಿ ರೈತ ಹೋರಾಟ ವೇದಿಕೆಯಲ್ಲಿ ಶಿರಸ್ತೇದಾರರಾದ ಶೋಭಾ ಹುಲ್ಲಣ್ಣವರ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಯೋಜನೆಗೆ ಅಡ್ಡಿಯಾಗಿರುವ ಎಲ್ಲ ಕಾನೂನಾತ್ಮಕವಾಗಿ ತೊಡಕುಗಳನ್ನು ನಿವಾರಿಸಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು’ ಎಂದರು.</p>.<p>'ಎರಡು ತಿಂಗಳಲ್ಲಿ ಕಾಮಗಾರಿ ಆರಂಭಿಸದಿದ್ದರೆ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.</p>.<p>ಈ ವೇಳೆ ಸಿದ್ದಪ್ಪ ಮುಪ್ಪ್ಯನವರ, ಶಿವಪ್ಪ ಸಂಗಳದ, ಬಸನಗೌಡ ಪಕ್ಕೀರಗೌಡ್ರ, ಸಂಗಪ್ಪ ನಿಡವಣಿ, ಮುರಿಗೆಪ್ಪ ಪಲ್ಲೇದ, ಗಿರಿಯಪ್ಪ ಚಿಕ್ಕಣ್ಣವರ, ಯಲ್ಲಪ್ಪ ದಾಡಿಭಾವಿ, ಗೋವಿಂದರಡ್ಡಿ ಮೊರಬದ, ರವಿ ತೋಟದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ</strong>: ಮಹದಾಯಿ, ಕಳಸಾ –ಬಂಡೂರಿ ಕಾಮಗಾರಿಗೆ ಶೀಘ್ರ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು ಎಂದು ರೈತ ಮುಖಂಡ ಸುಭಾಷಗೌಡ ಪಾಟೀಲ ಆಗ್ರಹಿಸಿದರು.</p>.<p>ಪಟ್ಟಣದ ಮಹದಾಯಿ ಕಳಸಾ-ಬಂಡೂರಿ ರೈತ ಹೋರಾಟ ವೇದಿಕೆಯಲ್ಲಿ ಶಿರಸ್ತೇದಾರರಾದ ಶೋಭಾ ಹುಲ್ಲಣ್ಣವರ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಯೋಜನೆಗೆ ಅಡ್ಡಿಯಾಗಿರುವ ಎಲ್ಲ ಕಾನೂನಾತ್ಮಕವಾಗಿ ತೊಡಕುಗಳನ್ನು ನಿವಾರಿಸಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು’ ಎಂದರು.</p>.<p>'ಎರಡು ತಿಂಗಳಲ್ಲಿ ಕಾಮಗಾರಿ ಆರಂಭಿಸದಿದ್ದರೆ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.</p>.<p>ಈ ವೇಳೆ ಸಿದ್ದಪ್ಪ ಮುಪ್ಪ್ಯನವರ, ಶಿವಪ್ಪ ಸಂಗಳದ, ಬಸನಗೌಡ ಪಕ್ಕೀರಗೌಡ್ರ, ಸಂಗಪ್ಪ ನಿಡವಣಿ, ಮುರಿಗೆಪ್ಪ ಪಲ್ಲೇದ, ಗಿರಿಯಪ್ಪ ಚಿಕ್ಕಣ್ಣವರ, ಯಲ್ಲಪ್ಪ ದಾಡಿಭಾವಿ, ಗೋವಿಂದರಡ್ಡಿ ಮೊರಬದ, ರವಿ ತೋಟದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>