<p><strong>ಹುಬ್ಬಳ್ಳಿ: '</strong>ಮಗಳ ಕೊಲೆ ಪ್ರಕರಣದ ಉಳಿದ ಆರೋಪಿಗಳನ್ನು ಬಂಧಿಸದೆ, ರಾಜಾರೋಷವಾಗಿ ಓಡಾಡಲು ಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಪೊಲೀಸ್ ಕಮಿಷನರ್ ಅವರನ್ನು ಅಮಾನತು ಮಾಡಬೇಕು' ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಗ್ರಹಿಸಿದರು.</p> <p>ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಪೊಲೀಸ್ ಕಮಿಷನರ್ ಅವರಿಂದ ನ್ಯಾಯ ಸಿಗುವಂಥ ಯಾವುದೇ ಭರವಸೆ ಇರಲಿಲ್ಲ. ಮಗಳನ್ನು ಚಾಕು ಇರಿದು ಕೊಲೆ ಮಾಡಿರುವ ಸಿಸಿಟಿವಿ ದೃಶ್ಯಾವಳಿಗಳು ಇದ್ದವು. ಅದನ್ನು ಆಧರಿಸಿ ಎನ್ಕೌಂಟರ್ ಮಾಡಬೇಕಿತ್ತು. ಅದನ್ನು ಬಿಟ್ಟು ತನಿಖೆ ಮಾಡುತ್ತಿದ್ದೇವೆ ಎಂದು ಹೇಳುತ್ತಾ , ಉಳಿದ ಆರೋಪಿಗಳನ್ನು ರಾಜಾರೋಷವಾಗಿ ಅಡ್ಡಾಡಲು ಬಿಟ್ಟಿದ್ದಾರೆ. ಇಂಥ ಪೊಲೀಸ್ ಕಮಿಷನರ್ ನಮ್ಮ ನಗರಕ್ಕೆ ಬೇಡ. ಅವರನ್ನು ಅಮಾನತು ಮಾಡಬೇಕು, ಇಲ್ಲವೇ ವರ್ಗಾವಣೆ ಮಾಡಬೇಕು. ಆ ಸ್ಥಾನಕ್ಕೆ ದಕ್ಷ ಅಧಿಕಾರಿಯನ್ನು ನೇಮಕ ಮಾಡಬೇಕು' ಎಂದು ಒತ್ತಾಯಿಸಿದರು.</p> <p>'ಕೆಲವು ರಾಜ್ಯಗಳಲ್ಲಿ ಇಂಥ ಆರೋಪಿಗಳನ್ನು ಮುಖ್ಯಮಂತ್ರಿಗಳ ಆದೇಶವಿಲ್ಲದೆ, ಎನ್ಕೌಂಟರ್ ಮಾಡುತ್ತಾರೆ, ಗುಂಡಿಕ್ಕಿ ಕೊಲ್ಲುತ್ತಾರೆ. ಇಲ್ಲಿಯೂ ಹಾಗೆ ಮಾಡಬೇಕಿತ್ತು. ಅಂತಹ ಮಾದರಿ ಕಾನೂನು ನಮ್ಮ ರಾಜ್ಯದಲ್ಲೂ ಜಾರಿಗೆ ಬರಬೇಕು' ಎಂದರು.</p> <p>'ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿಯವರು ಸಿಐಡಿಗೆ ಒಪ್ಪಿಸುವುದಾಗಿ ಹೇಳಿಕೆ ನೀಡಿದ್ದು ಸ್ವಾಗತಾರ್ಹ. ಸಿಐಡಿ ಅಧಿಕಾರಿಗಳು ಪ್ರಾಥಮಿಕ ವರದಿ ಪಡೆದು, ಹೆಚ್ಚಿನ ಮಾಹಿತಿ ಸಂಗ್ರಹಿಸಲು ನನ್ನಲ್ಲಿಗೆ ಬರುತ್ತಾರೆ. ಅವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಆರೋಪಿಗೆ ಗಲ್ಲುಶಿಕ್ಷೆ ವಿಧಿಸುವಂತಾಗಬೇಕು' ಎಂದು ಹೇಳಿದರು.</p> <p>'ಇಂದು ಮಗಳ ಐದನೇ ದಿನದ ಆರಾಧನೆ. ವೀರಶೈವ ಲಿಂಗಾಯತ ಪರಂಪರೆ ಪ್ರಕಾರ ಸಮಾಧಿಗೆ ಹಾಲು-ತುಪ್ಪ ಹಾಕಿ, ಮನೆಯಲ್ಲಿ ಅವಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ್ದೇವೆ. ಸಂಬಂಧಿಕರು, ಪರಿಚಯಸ್ಥರು, ಸ್ನೇಹಿತರು ಬಂದು ಅವಳ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ' ಎಂದರು.</p>.ಮೈಸೂರು: ನೇಹಾ ಹತ್ಯೆ ಖಂಡಿಸಿ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: '</strong>ಮಗಳ ಕೊಲೆ ಪ್ರಕರಣದ ಉಳಿದ ಆರೋಪಿಗಳನ್ನು ಬಂಧಿಸದೆ, ರಾಜಾರೋಷವಾಗಿ ಓಡಾಡಲು ಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಪೊಲೀಸ್ ಕಮಿಷನರ್ ಅವರನ್ನು ಅಮಾನತು ಮಾಡಬೇಕು' ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಗ್ರಹಿಸಿದರು.</p> <p>ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಪೊಲೀಸ್ ಕಮಿಷನರ್ ಅವರಿಂದ ನ್ಯಾಯ ಸಿಗುವಂಥ ಯಾವುದೇ ಭರವಸೆ ಇರಲಿಲ್ಲ. ಮಗಳನ್ನು ಚಾಕು ಇರಿದು ಕೊಲೆ ಮಾಡಿರುವ ಸಿಸಿಟಿವಿ ದೃಶ್ಯಾವಳಿಗಳು ಇದ್ದವು. ಅದನ್ನು ಆಧರಿಸಿ ಎನ್ಕೌಂಟರ್ ಮಾಡಬೇಕಿತ್ತು. ಅದನ್ನು ಬಿಟ್ಟು ತನಿಖೆ ಮಾಡುತ್ತಿದ್ದೇವೆ ಎಂದು ಹೇಳುತ್ತಾ , ಉಳಿದ ಆರೋಪಿಗಳನ್ನು ರಾಜಾರೋಷವಾಗಿ ಅಡ್ಡಾಡಲು ಬಿಟ್ಟಿದ್ದಾರೆ. ಇಂಥ ಪೊಲೀಸ್ ಕಮಿಷನರ್ ನಮ್ಮ ನಗರಕ್ಕೆ ಬೇಡ. ಅವರನ್ನು ಅಮಾನತು ಮಾಡಬೇಕು, ಇಲ್ಲವೇ ವರ್ಗಾವಣೆ ಮಾಡಬೇಕು. ಆ ಸ್ಥಾನಕ್ಕೆ ದಕ್ಷ ಅಧಿಕಾರಿಯನ್ನು ನೇಮಕ ಮಾಡಬೇಕು' ಎಂದು ಒತ್ತಾಯಿಸಿದರು.</p> <p>'ಕೆಲವು ರಾಜ್ಯಗಳಲ್ಲಿ ಇಂಥ ಆರೋಪಿಗಳನ್ನು ಮುಖ್ಯಮಂತ್ರಿಗಳ ಆದೇಶವಿಲ್ಲದೆ, ಎನ್ಕೌಂಟರ್ ಮಾಡುತ್ತಾರೆ, ಗುಂಡಿಕ್ಕಿ ಕೊಲ್ಲುತ್ತಾರೆ. ಇಲ್ಲಿಯೂ ಹಾಗೆ ಮಾಡಬೇಕಿತ್ತು. ಅಂತಹ ಮಾದರಿ ಕಾನೂನು ನಮ್ಮ ರಾಜ್ಯದಲ್ಲೂ ಜಾರಿಗೆ ಬರಬೇಕು' ಎಂದರು.</p> <p>'ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿಯವರು ಸಿಐಡಿಗೆ ಒಪ್ಪಿಸುವುದಾಗಿ ಹೇಳಿಕೆ ನೀಡಿದ್ದು ಸ್ವಾಗತಾರ್ಹ. ಸಿಐಡಿ ಅಧಿಕಾರಿಗಳು ಪ್ರಾಥಮಿಕ ವರದಿ ಪಡೆದು, ಹೆಚ್ಚಿನ ಮಾಹಿತಿ ಸಂಗ್ರಹಿಸಲು ನನ್ನಲ್ಲಿಗೆ ಬರುತ್ತಾರೆ. ಅವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಆರೋಪಿಗೆ ಗಲ್ಲುಶಿಕ್ಷೆ ವಿಧಿಸುವಂತಾಗಬೇಕು' ಎಂದು ಹೇಳಿದರು.</p> <p>'ಇಂದು ಮಗಳ ಐದನೇ ದಿನದ ಆರಾಧನೆ. ವೀರಶೈವ ಲಿಂಗಾಯತ ಪರಂಪರೆ ಪ್ರಕಾರ ಸಮಾಧಿಗೆ ಹಾಲು-ತುಪ್ಪ ಹಾಕಿ, ಮನೆಯಲ್ಲಿ ಅವಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ್ದೇವೆ. ಸಂಬಂಧಿಕರು, ಪರಿಚಯಸ್ಥರು, ಸ್ನೇಹಿತರು ಬಂದು ಅವಳ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ' ಎಂದರು.</p>.ಮೈಸೂರು: ನೇಹಾ ಹತ್ಯೆ ಖಂಡಿಸಿ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>