ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭೂ ಕಬಳಿಕೆ ಪ್ರಕರಣ ಸಂಬಂಧ ಈಗಾಗಲೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ತಮ್ಮ ಪ್ರಕರಣದ ಬಗ್ಗೆ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಅವರ ತಪ್ಪಿಲ್ಲ ಎಂದು ನ್ಯಾಯಾಲಯದಲ್ಲೇ ಸಾಬೀತಾಗಿದೆ. ಈಗ ಮುಡಾ ಹಗರಣ ಕುರಿತು ತನಿಖೆಗೆ ಆದೇಶ ಸಿಕ್ಕಿದೆ. ಇದರ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲು ಅವಕಾಶ ನೀಡಲಿಲ್ಲ. ಚರ್ಚೆಯ ಪ್ರಸ್ತಾಪವನ್ನೇ ತಿರಸ್ಕಾರ ಮಾಡಿಸಿದರು’ ಎಂದು ಟೀಕಿಸಿದರು.