ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ: ಇನ್ನೊಬ್ಬರ ಪ್ರಕರಣದೊಂದಿಗೆ ಹೋಲಿಕೆ ಬೇಡ

ಸಂಸದ ಜಗದೀಶ ಶೆಟ್ಟರ್ ಹೇಳಿಕೆ
Published : 6 ಅಕ್ಟೋಬರ್ 2024, 16:04 IST
Last Updated : 6 ಅಕ್ಟೋಬರ್ 2024, 16:04 IST
ಫಾಲೋ ಮಾಡಿ
Comments

ಧಾರವಾಡ: ‘ಸಿದ್ದರಾಮಯ್ಯ ಅವರು ತಮ್ಮ ಕೇಸ್ ಜೊತೆ ಇನ್ನೊಬ್ಬರ ಕೇಸ್ ಹೋಲಿಕೆ ಮಾಡಬಾರದು’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭೂ ಕಬಳಿಕೆ ಪ್ರಕರಣ ಸಂಬಂಧ ಈಗಾಗಲೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ತಮ್ಮ ಪ್ರಕರಣದ ಬಗ್ಗೆ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಅವರ ತಪ್ಪಿಲ್ಲ ಎಂದು ನ್ಯಾಯಾಲಯದಲ್ಲೇ ಸಾಬೀತಾಗಿದೆ. ಈಗ ಮುಡಾ ಹಗರಣ ಕುರಿತು ತನಿಖೆಗೆ ಆದೇಶ ಸಿಕ್ಕಿದೆ. ಇದರ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲು ಅವಕಾಶ ನೀಡಲಿಲ್ಲ. ಚರ್ಚೆಯ ಪ್ರಸ್ತಾಪವನ್ನೇ ತಿರಸ್ಕಾರ ಮಾಡಿಸಿದರು’ ಎಂದು ಟೀಕಿಸಿದರು.

‘ಮುಖ್ಯಮಂತ್ರಿ ಅವರು ಈ ಪ್ರಕರಣದಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ತಮ್ಮ ಧರ್ಮಪತ್ನಿಯ ಹೆಸರನ್ನು ಬೀದಿಗೆ ತರುವ ಕೆಲಸವನ್ನು ವಿರೋಧ ಪಕ್ಷದವರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಅವರ ಪತ್ನಿಯ ಹೆಸರನ್ನು ಬೀದಿಗೆ ತಂದವರು ಅವರೇ’ ಎಂದರು.

‘ನಿಯಮ ಮೀರಿ 14 ಸೈಟ್ ತೆಗೆದುಕೊಂಡಿದ್ದಾರೆ. ಆ ಸೈಟ್‍ಗಳ ಬಗ್ಗೆ ವಿವರಣೆ ಕೊಟ್ಟಿಲ್ಲ. ಅವರ ಮೇಲಿನ ಆರೋಪ ರದ್ದಾಗಲು ಸಾಧ್ಯವಿಲ್ಲ. ತಪ್ಪು ಮಾಡಿಲ್ಲ ಎಂದರೆ ನಿವೇಶನ ಏಕೆ ವಾಪಸ್ ಕೊಟ್ಟರು’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT