<p><strong>ಹುಬ್ಬಳ್ಳಿ:</strong> ‘ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ಜ.22ರಂದು ನಡೆಯಲಿದ್ದು, ಈ ಪ್ರಯುಕ್ತ ಕರ್ನಾಟಕ ರಾಜ್ಯ ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜದ ವತಿಯಿಂದ ಪಂಚ ಟ್ರಸ್ಟ್ ಕಮಿಟಿಗಳ ವ್ಯಾಪ್ತಿಯ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಅಶೋಕ ಕಾಟವೆ ಹೇಳಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಎಲ್ಲ ದೇವಸ್ಥಾನಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಜಿಲ್ಲೆಯಲ್ಲಿ ಸಮಾಜದ 22 ಪಂಚಟ್ರಸ್ಟ್ಗಳ ಅಡಿ 100 ದೇವಸ್ಥಾನಗಳಿದ್ದು, ಅಲ್ಲಿ ವಿಶೇಷ ಪೂಜೆ, ದೀಪೋತ್ಸವ ಹಾಗೂ ಪ್ರಸಾದ ವಿತರಣೆ ಕಾರ್ಯಕ್ರಮಗಳು ಜರುಗಲಿವೆ’ ಎಂದರು.</p>.<p>‘ನಗರದ ದುರ್ಗಾದೇವಿ, ತುಳಜಾಭವಾನಿ, ಆಂಜನೇಯ, ವಿಠ್ಠಲ ಮಂದಿರಗಳಲ್ಲಿಯೂ ಪೂಜೆ, ಭಜನಾ ಕಾರ್ಯಕ್ರಮಗಳು ನಡೆಯಲಿವೆ. ವಿಎಕೆ ಫೌಂಡೇಷನ್ ವತಿಯಿಂದ ಜ.19ರಂದು ಗೋಪನಕೊಪ್ಪದ ವೃತ್ತದಲ್ಲಿ ಕರಸೇವಕರನ್ನು ಸನ್ಮಾನಿಸಲಾಗುವುದು’ ಎಂದು ತಿಳಿಸಿದರು.</p>.<p>ಮುಖಂಡ ಭಾಸ್ಕರ ಜಿತೂರಿ ಮಾತನಾಡಿ, ಜ.22ರಂದು ರಂದು ಬೆಳಿಗ್ಗೆ 7 ಗಂಟೆಗೆ ಕಮರಿಪೇಟೆಯ ರಾಮಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ, ಅಭಿಷೇಕ ಜರುಗಲಿದೆ ಎಂದು ಹೇಳಿದರು.</p>.<p>ಮುಖಂಡ ವಿಠ್ಠಲಸಾ ಲದವಾ ಮಾತನಾಡಿ, ದಾಜಿಬಾನಪೇಟೆಯ ವೃತ್ತದಲ್ಲಿ ಜ.22ರಂದು ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು ಎಂದರು.</p>.<p>ರಾಜು ಜರತಾರಘರ್ ಮಾತನಾಡಿ, ಶಿವಶಕ್ತಿ ಯುವ ಸಂಘದಿಂದ ದಿವಟೆ ಓಣಿಯಲ್ಲಿ ರಂಗೋಲಿ ಸ್ಪರ್ಧೆ, ರಾಮನ ವೇಷಭೂಷಣ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.</p>.<p>ನೀಲಕಂಠಸಾ ಜಡಿ, ಡಿ.ಕೆ.ಚವ್ಹಾಣ, ವೆಂಕಟೇಶ ಕಾಟವೆ, ಗೋಪಾಲ ಬದ್ದಿ, ದೀಪಕ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ಜ.22ರಂದು ನಡೆಯಲಿದ್ದು, ಈ ಪ್ರಯುಕ್ತ ಕರ್ನಾಟಕ ರಾಜ್ಯ ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜದ ವತಿಯಿಂದ ಪಂಚ ಟ್ರಸ್ಟ್ ಕಮಿಟಿಗಳ ವ್ಯಾಪ್ತಿಯ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಅಶೋಕ ಕಾಟವೆ ಹೇಳಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಎಲ್ಲ ದೇವಸ್ಥಾನಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಜಿಲ್ಲೆಯಲ್ಲಿ ಸಮಾಜದ 22 ಪಂಚಟ್ರಸ್ಟ್ಗಳ ಅಡಿ 100 ದೇವಸ್ಥಾನಗಳಿದ್ದು, ಅಲ್ಲಿ ವಿಶೇಷ ಪೂಜೆ, ದೀಪೋತ್ಸವ ಹಾಗೂ ಪ್ರಸಾದ ವಿತರಣೆ ಕಾರ್ಯಕ್ರಮಗಳು ಜರುಗಲಿವೆ’ ಎಂದರು.</p>.<p>‘ನಗರದ ದುರ್ಗಾದೇವಿ, ತುಳಜಾಭವಾನಿ, ಆಂಜನೇಯ, ವಿಠ್ಠಲ ಮಂದಿರಗಳಲ್ಲಿಯೂ ಪೂಜೆ, ಭಜನಾ ಕಾರ್ಯಕ್ರಮಗಳು ನಡೆಯಲಿವೆ. ವಿಎಕೆ ಫೌಂಡೇಷನ್ ವತಿಯಿಂದ ಜ.19ರಂದು ಗೋಪನಕೊಪ್ಪದ ವೃತ್ತದಲ್ಲಿ ಕರಸೇವಕರನ್ನು ಸನ್ಮಾನಿಸಲಾಗುವುದು’ ಎಂದು ತಿಳಿಸಿದರು.</p>.<p>ಮುಖಂಡ ಭಾಸ್ಕರ ಜಿತೂರಿ ಮಾತನಾಡಿ, ಜ.22ರಂದು ರಂದು ಬೆಳಿಗ್ಗೆ 7 ಗಂಟೆಗೆ ಕಮರಿಪೇಟೆಯ ರಾಮಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ, ಅಭಿಷೇಕ ಜರುಗಲಿದೆ ಎಂದು ಹೇಳಿದರು.</p>.<p>ಮುಖಂಡ ವಿಠ್ಠಲಸಾ ಲದವಾ ಮಾತನಾಡಿ, ದಾಜಿಬಾನಪೇಟೆಯ ವೃತ್ತದಲ್ಲಿ ಜ.22ರಂದು ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು ಎಂದರು.</p>.<p>ರಾಜು ಜರತಾರಘರ್ ಮಾತನಾಡಿ, ಶಿವಶಕ್ತಿ ಯುವ ಸಂಘದಿಂದ ದಿವಟೆ ಓಣಿಯಲ್ಲಿ ರಂಗೋಲಿ ಸ್ಪರ್ಧೆ, ರಾಮನ ವೇಷಭೂಷಣ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.</p>.<p>ನೀಲಕಂಠಸಾ ಜಡಿ, ಡಿ.ಕೆ.ಚವ್ಹಾಣ, ವೆಂಕಟೇಶ ಕಾಟವೆ, ಗೋಪಾಲ ಬದ್ದಿ, ದೀಪಕ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>