<p><strong>ನವಲಗುಂದ:</strong> ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ಗ್ರಾಮದೇವತೆಯ ದೇವಸ್ಥಾನ ಉದ್ಘಾಟನೆ ಹಾಗೂ ದೇವತೆಗಳ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಭಕ್ತರ ಮಹಾಪೂರವೇ ಹರಿದು ಬಂದು ದೇವಿಯ ಮೂರ್ತಿ ಮೆರವಣಿಗೆಯಲ್ಲಿ ಭಂಡಾರದ ಹೊನ್ನಾಟ ಮಿಂದೆದ್ದ ಮೆರವಣಿಗೆಯನ್ನು ಭಕ್ತರು ಅದ್ದೂರಿಯಾಗಿ ಸಂಭ್ರಮಿಸಿದರು.</p>.<p>ಒಂಬತ್ತು ದಿನಗಳ ಕಾಲ ವಿನೂತನ ಹಾಗೂ ವಿಭಿನ್ನ ರೀತಿಯಲ್ಲಿ ದೇವಿಯ ಆಚರಣೆ ಮಾಡಲಾಗುತ್ತಿದೆ. ಗ್ರಾಮದಲ್ಲಿ ಭಂಡಾರದ ಹೊನ್ನಾಟದಲ್ಲಿ ಯಾವುದೇ ಭೇದಭಾವ ಇಲ್ಲದೇ ಪರಸ್ಪರ ಭಂಡಾರ ಎರಚುವ ಮೂಲಕ ಐದನೇ ದಿನವನ್ನು ವಿಶೇಷವಾಗಿ ಆಚರಣೆ ಮಾಡಿದರು.</p>.<p>ಮಹಿಳೆಯರು, ಮಕ್ಕಳು ಪರಸ್ಪರ ಸಂಪ್ರದಾಯಿಕ ಆಟಗಳನ್ನು ಆಡುವ ಮೂಲಕ ಮೆರವಣಿಗೆಗೆ ಹೊಸ ಮೆರುಗು ತಂದರು. ಇನ್ನೂ ಯುವಕರ ಬಗ್ಗೆ ಹೇಳಬೇಕಾಗಿಯೇ ಇಲ್ಲ. ಯುವಕರು ಇಂತಹ ಹಬ್ಬಗಳನ್ನು ಅದ್ದೂರಿಯಾಗಿ ಆಚರಣೆ ಮಾಡುವ ಮೂಲಕ ಸಂಭ್ರಮಿಸಿರುವುದು ನೋಡುಗರ ಕಣ್ಮನ ಸೆಳೆಯುವಂತಿತ್ತು.</p>.<p>ಇನ್ನು ಯಾವುದೇ ಜಾತಿ ಮತಗಳ ಭೇದ ಭಾವವಿಲ್ಲದೇ ಭಂಡಾರದ ಹೊನ್ನಾಟದ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗಿತು. ಜಾತ್ರಾ ಮಹೋತ್ಸವದಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ವಿಶೇಷ ಪೂಜೆ, ಪುನಸ್ಕಾರಗಳ ಮೂಲಕ ದೇವಿಗೆ ಪ್ರಾರ್ಥನೆ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ:</strong> ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ಗ್ರಾಮದೇವತೆಯ ದೇವಸ್ಥಾನ ಉದ್ಘಾಟನೆ ಹಾಗೂ ದೇವತೆಗಳ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಭಕ್ತರ ಮಹಾಪೂರವೇ ಹರಿದು ಬಂದು ದೇವಿಯ ಮೂರ್ತಿ ಮೆರವಣಿಗೆಯಲ್ಲಿ ಭಂಡಾರದ ಹೊನ್ನಾಟ ಮಿಂದೆದ್ದ ಮೆರವಣಿಗೆಯನ್ನು ಭಕ್ತರು ಅದ್ದೂರಿಯಾಗಿ ಸಂಭ್ರಮಿಸಿದರು.</p>.<p>ಒಂಬತ್ತು ದಿನಗಳ ಕಾಲ ವಿನೂತನ ಹಾಗೂ ವಿಭಿನ್ನ ರೀತಿಯಲ್ಲಿ ದೇವಿಯ ಆಚರಣೆ ಮಾಡಲಾಗುತ್ತಿದೆ. ಗ್ರಾಮದಲ್ಲಿ ಭಂಡಾರದ ಹೊನ್ನಾಟದಲ್ಲಿ ಯಾವುದೇ ಭೇದಭಾವ ಇಲ್ಲದೇ ಪರಸ್ಪರ ಭಂಡಾರ ಎರಚುವ ಮೂಲಕ ಐದನೇ ದಿನವನ್ನು ವಿಶೇಷವಾಗಿ ಆಚರಣೆ ಮಾಡಿದರು.</p>.<p>ಮಹಿಳೆಯರು, ಮಕ್ಕಳು ಪರಸ್ಪರ ಸಂಪ್ರದಾಯಿಕ ಆಟಗಳನ್ನು ಆಡುವ ಮೂಲಕ ಮೆರವಣಿಗೆಗೆ ಹೊಸ ಮೆರುಗು ತಂದರು. ಇನ್ನೂ ಯುವಕರ ಬಗ್ಗೆ ಹೇಳಬೇಕಾಗಿಯೇ ಇಲ್ಲ. ಯುವಕರು ಇಂತಹ ಹಬ್ಬಗಳನ್ನು ಅದ್ದೂರಿಯಾಗಿ ಆಚರಣೆ ಮಾಡುವ ಮೂಲಕ ಸಂಭ್ರಮಿಸಿರುವುದು ನೋಡುಗರ ಕಣ್ಮನ ಸೆಳೆಯುವಂತಿತ್ತು.</p>.<p>ಇನ್ನು ಯಾವುದೇ ಜಾತಿ ಮತಗಳ ಭೇದ ಭಾವವಿಲ್ಲದೇ ಭಂಡಾರದ ಹೊನ್ನಾಟದ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗಿತು. ಜಾತ್ರಾ ಮಹೋತ್ಸವದಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ವಿಶೇಷ ಪೂಜೆ, ಪುನಸ್ಕಾರಗಳ ಮೂಲಕ ದೇವಿಗೆ ಪ್ರಾರ್ಥನೆ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>