<p><strong>ಹುಬ್ಬಳ್ಳಿ:</strong> ನವನಗರದ ಗಂಗಾಧರನಗರ ಬಡಾವಣೆಯ ಭಾವಸಾರ ಕ್ಷತ್ರೀಯ ಸಮಾಜದಿಂದ ತುಳಜಾ ಭವಾನಿ ದೇವಸ್ಥಾನದ 6ನೇ ವಾರ್ಷಿಕೋತ್ಸವ ಜೂನ್ 15 ಹಾಗೂ 16ರಂದು ನಡೆಯಲಿದೆ.</p>.<p>15ರಂದು ಬೆಳಿಗ್ಗೆ ದೇವಿ ಮೂರ್ತಿಗೆ ಜಲಾಭಿಷೇಕ, ಪಂಚಾಮೃತ ಅಭಿಷೇಕ, ಗಣ ಹೋಮ ಹಾಗೂ ನವಗ್ರಹ ಹೋಮ, ಪೂರ್ಣಾಹುತಿ, ಮಹಾ ಮಂಗಳಾರತಿ, ಉಡಿ ತುಂಬುವ ಕಾರ್ಯಕ್ರಮ ಹಾಗೂ ಪ್ರಸಾದ ವಿತರಣೆ ಜರುಗಲಿದೆ. ಸಂಜೆ 4 ಗಂಟೆಯಿಂದ ಆರಾಧನಾ ಮಹಿಳಾ ವೃಂದದಿಂದ ಭಕ್ತಿಗೀತೆ ಗಾಯನ, ಸಂಜೆ 5ರಿಂದ ಗಣೇಶ ಮತ್ತು ಸಂಗಡಿಗರಿಂದ ಗೊಂಧಳ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>16ರಂದು ಬೆಳಿಗ್ಗೆ ದೇವಸ್ಥಾನದಲ್ಲಿ ದುರ್ಗಾ ಹೋಮ, ದೇವಿಗೆ ಕ್ಷೀರಾಭಿಷೇಕ, ಅಲಂಕಾರ, ಪೂರ್ಣಹುತಿ ನೈವೇದ್ಯ ಇರಲಿದೆ. ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿಯಲ್ಲಿ ಪಾಸಾದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಮಧ್ಯಾಹ್ನ 12.30ಕ್ಕೆ ಜರುಗಲಿದೆ. ಸಂಜೆ 6 ಗಂಟೆಯಿಂದ ಭಾವಸಾರ ಕ್ಷತ್ರೀಯ ಮಹಿಳಾ ಮಂಡಳದಿಂದ ಭಕ್ತಿ ಗೀತೆ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಶಾಮ್ ಗುಜ್ಜರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ನವನಗರದ ಗಂಗಾಧರನಗರ ಬಡಾವಣೆಯ ಭಾವಸಾರ ಕ್ಷತ್ರೀಯ ಸಮಾಜದಿಂದ ತುಳಜಾ ಭವಾನಿ ದೇವಸ್ಥಾನದ 6ನೇ ವಾರ್ಷಿಕೋತ್ಸವ ಜೂನ್ 15 ಹಾಗೂ 16ರಂದು ನಡೆಯಲಿದೆ.</p>.<p>15ರಂದು ಬೆಳಿಗ್ಗೆ ದೇವಿ ಮೂರ್ತಿಗೆ ಜಲಾಭಿಷೇಕ, ಪಂಚಾಮೃತ ಅಭಿಷೇಕ, ಗಣ ಹೋಮ ಹಾಗೂ ನವಗ್ರಹ ಹೋಮ, ಪೂರ್ಣಾಹುತಿ, ಮಹಾ ಮಂಗಳಾರತಿ, ಉಡಿ ತುಂಬುವ ಕಾರ್ಯಕ್ರಮ ಹಾಗೂ ಪ್ರಸಾದ ವಿತರಣೆ ಜರುಗಲಿದೆ. ಸಂಜೆ 4 ಗಂಟೆಯಿಂದ ಆರಾಧನಾ ಮಹಿಳಾ ವೃಂದದಿಂದ ಭಕ್ತಿಗೀತೆ ಗಾಯನ, ಸಂಜೆ 5ರಿಂದ ಗಣೇಶ ಮತ್ತು ಸಂಗಡಿಗರಿಂದ ಗೊಂಧಳ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>16ರಂದು ಬೆಳಿಗ್ಗೆ ದೇವಸ್ಥಾನದಲ್ಲಿ ದುರ್ಗಾ ಹೋಮ, ದೇವಿಗೆ ಕ್ಷೀರಾಭಿಷೇಕ, ಅಲಂಕಾರ, ಪೂರ್ಣಹುತಿ ನೈವೇದ್ಯ ಇರಲಿದೆ. ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿಯಲ್ಲಿ ಪಾಸಾದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಮಧ್ಯಾಹ್ನ 12.30ಕ್ಕೆ ಜರುಗಲಿದೆ. ಸಂಜೆ 6 ಗಂಟೆಯಿಂದ ಭಾವಸಾರ ಕ್ಷತ್ರೀಯ ಮಹಿಳಾ ಮಂಡಳದಿಂದ ಭಕ್ತಿ ಗೀತೆ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಶಾಮ್ ಗುಜ್ಜರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>