ಗೃಹ ಸಚಿವ ಜಿ.ಪರಮೇಶ್ವರ್ ಅವರು ಮೇ 20ರಂದು ಹುಬ್ಬಳ್ಳಿಗೆ ಆಗಮಿಸುವರು. ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಮಧ್ಯಾಹ್ನ 3.30ಕ್ಕೆ ಹುಬ್ಬಳ್ಳಿಗೆ ತಲುಪುವರು. ಸಂಜೆ 7ರವರೆಗೂ ವಿವಿಧ ಸಭೆಗಳಲ್ಲಿ ಪಾಲ್ಗೊಂಡು ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ತಿಳಿಸಲಾಗಿದೆ.
ಅಮಾನತು ಆದೇಶ ಹಿಂಪಡೆಯಲು ಆಗ್ರಹ
‘ದಕ್ಷ ಅಧಿಕಾರಿ ಡಿಸಿಪಿ ರಾಜೀವ್ ಅವರನ್ನು ಅಮಾನತು ಮಾಡಿರುವ ಆದೇಶವನ್ನು ಹಿಂಪಡೆಯಬೇಕು‘ ಎಂದು ಸಮತಾ ಸೇನಾ ಕನ್ನಡ ರಕ್ಷಣಾ ಸೇನೆ ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕೈಗಾರಿಕೋದ್ಯಮಿಗಳ ಸಂಘ ಒತ್ತಾಯಿಸಿವೆ. ‘ವೈಯಕ್ತಿಕ ನೆಲೆಗಟ್ಟಿನಲ್ಲಿ ನಡೆದ ನೇಹಾ ಮತ್ತು ಅಂಜಲಿ ಕೊಲೆ ಪ್ರಕರಣಗಳನ್ನು ಗುರಿಯಾಗಿಸಿಕೊಂಡು ದಕ್ಷ ಅಧಿಕಾರಿಯನ್ನು ಅಮಾನತು ಮಾಡಿರುವುದು ಸರಿಯಲ್ಲ’ ಎಂದು ಪದಾಧಿಕಾರಿಗಳಾದ ಗುರುನಾಥ ಉಳ್ಳಿಕಾಶಿ ಕವಿತಾ ನಾಯ್ಕರ ರೇವಣಸಿದ್ದಪ್ಪ ಹೊಸಮನಿ ಮಂಜಣ್ಣ ಉಳ್ಳಿಕಾಶಿ ರವಿ ಕದಂ ಸಂಜು ಹಂಜಗಿ ದೇವಣ್ಣ ಇಟಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರು ಹುಬ್ಬಳ್ಳಿಯಲ್ಲಿ ಕೊಲೆಯಾದ ಅಂಜಲಿ ಅಂಬಿಗೇರ ಮನೆಗೆ ಭಾನುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು