<p><strong>ಧಾರವಾಡ:</strong> ನಗರದ ಕರ್ನಾಟಕ ಸೆಂಟ್ರಲ್ ಕೋಆಪರೇಟಿವ್ (ಕೆಸಿಸಿ) ಬ್ಯಾಂಕ್ ಅಧ್ಯಕ್ಷರಾಗಿ ಶಿವಕುಮಾರಗೌಡ ಸಿದ್ದಲಿಂಗನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ನಿಂಗನಗೌಡ ಮುದಿಗೌಡ ಮರಿಗೌಡ್ರ ಅವರು ಅವಿರೋಧವಾಗಿ ಗುರುವಾರ ಆಯ್ಕೆಯಾದರು.</p><p>ನಗರದ ಸುಭಾಸ ರಸ್ತೆಯಲ್ಲಿರುವ ಬ್ಯಾಂಕ್ನ ಪ್ರಧಾನ ಕಚೇರಿಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಚುನಾಣಾಧಿಕಾರಿ ಷಾ ಅಲಂ ಹುಸೇನ್ ಅವರು ಅವಿರೋಧ ಆಯ್ಕೆ ಘೋಷಿಸಿದರು. </p><p>ಶಿವಕುಮಾರಗೌಡ ಅವರು ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕಲಕೇರಿಯ ಪ್ರಾಥಮಿಕ ಕೃಷಿ ಪತ್ತಿನ ಬ್ಯಾಂಕ್ ಸದಸ್ಯ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. </p><p>ನಿಂಗನಗೌಡ ಅವರು ಮೊದಲ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ಧಾರೆ. ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಪತ್ತಿನ ಸಹಕಾರ ಸಂಘದ ಸದಸ್ಯ. ಅವರು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. </p><p>ನೂತನ ಅಧ್ಯಕ್ಷ ಶಿವಕುಮಾರಗೌಡ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಈ ಹಿಂದೆ ಮೂರು ಬಾರಿ ಅಧ್ಯಕ್ಷ ಸ್ಥಾನ ನಿರ್ವಹಿಸಿದ ಅನುಭವ ಇದೆ. ಸಹಕಾರ ಸಂಘಗಳ ಮೂಲಕ ಕೃಷಿಯನ್ನು ಲಾಭದಾಯಕವಾಗಿಸಲು ಒತ್ತು ನೀಡುತ್ತೇನೆ. ರೈತರು ಮತ್ತು ಬ್ಯಾಂಕ್ ಏಳಿಗೆಗೆ ಶ್ರಮಿಸುತ್ತೇವೆ’ ಎಂದು ತಿಳಿಸಿದರು.</p><p>ಉಪಾಧ್ಯಕ್ಷ ನಿಂಗನಗೌಡ ಮಾತನಾಡಿ, ‘ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ಒದಗಿಸಲು ಗಮನ ಹರಿಸುತ್ತೇವೆ. ಠೇವಣಿ ಸಂಗ್ರಹ ಮತ್ತು ಬ್ಯಾಂಕ್ ಅಭಿವೃದ್ಧಿಗೆ ಆದ್ಯತೆ ನೀಡುತ್ತೇವೆ’ ಎಂದು ತಿಳಿಸಿದರು. </p><p>ಈ ಬ್ಯಾಂಕ್ ಅವಿಭಜಿತ ಧಾರವಾಡ ಜಿಲ್ಲೆ(ಗದಗ, ಹಾವೇರಿ) ವ್ಯಾಪ್ತಿ ಹೊಂದಿದೆ. ಬ್ಯಾಂಕ್ ಆಡಳಿತ ಮಂಡಳಿಯಲ್ಲಿ ಸಹಕಾರ ಸಂಘಗಳ ಉಪನಿಬಂಧಕ ಸಹಿತ 21 ಸದಸ್ಯರು ಇದ್ಧಾರೆ. </p><p>ಬ್ಯಾಂಕ್ ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರು ಸಹಾಯಕ ಚುನಾವಣಾಧಿಕಾರಿ ತಹಶೀಲ್ದಾರ್ ದೊಡ್ಡಪ್ಪ ಹೂಗಾರ, ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಮುನಿಯಪ್ಪ, ಪ್ರಧಾನ ವ್ಯವಸ್ಥಾಪಕ ಶಿವಾನಂದ ಹೂಗಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ನಗರದ ಕರ್ನಾಟಕ ಸೆಂಟ್ರಲ್ ಕೋಆಪರೇಟಿವ್ (ಕೆಸಿಸಿ) ಬ್ಯಾಂಕ್ ಅಧ್ಯಕ್ಷರಾಗಿ ಶಿವಕುಮಾರಗೌಡ ಸಿದ್ದಲಿಂಗನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ನಿಂಗನಗೌಡ ಮುದಿಗೌಡ ಮರಿಗೌಡ್ರ ಅವರು ಅವಿರೋಧವಾಗಿ ಗುರುವಾರ ಆಯ್ಕೆಯಾದರು.</p><p>ನಗರದ ಸುಭಾಸ ರಸ್ತೆಯಲ್ಲಿರುವ ಬ್ಯಾಂಕ್ನ ಪ್ರಧಾನ ಕಚೇರಿಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಚುನಾಣಾಧಿಕಾರಿ ಷಾ ಅಲಂ ಹುಸೇನ್ ಅವರು ಅವಿರೋಧ ಆಯ್ಕೆ ಘೋಷಿಸಿದರು. </p><p>ಶಿವಕುಮಾರಗೌಡ ಅವರು ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕಲಕೇರಿಯ ಪ್ರಾಥಮಿಕ ಕೃಷಿ ಪತ್ತಿನ ಬ್ಯಾಂಕ್ ಸದಸ್ಯ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. </p><p>ನಿಂಗನಗೌಡ ಅವರು ಮೊದಲ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ಧಾರೆ. ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಪತ್ತಿನ ಸಹಕಾರ ಸಂಘದ ಸದಸ್ಯ. ಅವರು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. </p><p>ನೂತನ ಅಧ್ಯಕ್ಷ ಶಿವಕುಮಾರಗೌಡ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಈ ಹಿಂದೆ ಮೂರು ಬಾರಿ ಅಧ್ಯಕ್ಷ ಸ್ಥಾನ ನಿರ್ವಹಿಸಿದ ಅನುಭವ ಇದೆ. ಸಹಕಾರ ಸಂಘಗಳ ಮೂಲಕ ಕೃಷಿಯನ್ನು ಲಾಭದಾಯಕವಾಗಿಸಲು ಒತ್ತು ನೀಡುತ್ತೇನೆ. ರೈತರು ಮತ್ತು ಬ್ಯಾಂಕ್ ಏಳಿಗೆಗೆ ಶ್ರಮಿಸುತ್ತೇವೆ’ ಎಂದು ತಿಳಿಸಿದರು.</p><p>ಉಪಾಧ್ಯಕ್ಷ ನಿಂಗನಗೌಡ ಮಾತನಾಡಿ, ‘ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ಒದಗಿಸಲು ಗಮನ ಹರಿಸುತ್ತೇವೆ. ಠೇವಣಿ ಸಂಗ್ರಹ ಮತ್ತು ಬ್ಯಾಂಕ್ ಅಭಿವೃದ್ಧಿಗೆ ಆದ್ಯತೆ ನೀಡುತ್ತೇವೆ’ ಎಂದು ತಿಳಿಸಿದರು. </p><p>ಈ ಬ್ಯಾಂಕ್ ಅವಿಭಜಿತ ಧಾರವಾಡ ಜಿಲ್ಲೆ(ಗದಗ, ಹಾವೇರಿ) ವ್ಯಾಪ್ತಿ ಹೊಂದಿದೆ. ಬ್ಯಾಂಕ್ ಆಡಳಿತ ಮಂಡಳಿಯಲ್ಲಿ ಸಹಕಾರ ಸಂಘಗಳ ಉಪನಿಬಂಧಕ ಸಹಿತ 21 ಸದಸ್ಯರು ಇದ್ಧಾರೆ. </p><p>ಬ್ಯಾಂಕ್ ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರು ಸಹಾಯಕ ಚುನಾವಣಾಧಿಕಾರಿ ತಹಶೀಲ್ದಾರ್ ದೊಡ್ಡಪ್ಪ ಹೂಗಾರ, ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಮುನಿಯಪ್ಪ, ಪ್ರಧಾನ ವ್ಯವಸ್ಥಾಪಕ ಶಿವಾನಂದ ಹೂಗಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>