<p><strong>ನವಲಗುಂದ:</strong> ಹಿಂದು ಮುಸ್ಲಿಂ ಭಾವೈಕ್ಯ ಸಂಗಮವಾದ ತಾಲೂಕಿನ ಯಮನೂರು ಗ್ರಾಮದ ಜಾಂಗದೇವ ಊರ್ಫ್ ರಾಜಾಭಾಗ ಸವಾರರ ಜಾತ್ರಾ ಮಹೋತ್ಸವ ಶುಕ್ರವಾರ ಗಂಧಾಭಿಷೇಕದೊಂದಿಗೆ ಲಕ್ಷಾಂತರ ಭಕ್ತರ ನಡುವೆ ವೈಭವದೊಂದಿಗೆ ಆರಂಭಗೊಂಡಿತು.</p>.<p>ಶುಕ್ರವಾರ ಗಂಧಾಭಿಷೇಕ ಹಾಗೂ 30 ರಂದು ಉರುಸ್ ಇರುವ ನಿಮಿತ್ತ ರಾಜ್ಯವಲ್ಲದೇ ಇತರೆ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಚಾಂಗದೇವರ ದರ್ಶಕ್ಕೆ ಆಗಮಿಸಿದ್ದರು. ಚಾಂಗದೇವರು ನಮಗೆ ಒಳ್ಳೆಯದನ್ನು ಮಾಡಲಿ. ಕಷ್ಟ ಕಾರ್ಪಣ್ಯಗಳನ್ನು ದೂರ ಮಾಡಲಿ. ಈ ವರ್ಷ ಮಳೆ ಬೆಳೆ ಚೆನ್ನಾಗಿ ಬರಲಿ ಎಂದು ಭಕ್ತರು ಪ್ರಾರ್ಥಿಸಿದರು.</p>.<p>ಗಂಧಾಭಿಷೇಕಕ್ಕೆ ಸಂಬಂಧಿಸಿದಂತೆ ಬರ್ಗೆ ಮನೆತನ ಸಂತರು ಚಾಂಗದೇವನಿಗೆ ದೀಪ ಹಚ್ಚಲು ಬೆಣ್ಣಿ ಹಳ್ಳಕ್ಕೆ ನೀರು ತರಲು ಹೊರಡುವ ಸಮಯದಲ್ಲಿ ರಸ್ತೆಯ ಮೇಲೆ ಭಕ್ತರು ಬೆನ್ನು ಮೇಲಾಗಿ ಮಲಗಿದರು. ಸಂತರ ಪಾದ ಸ್ಪರ್ಶದಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಭಕ್ತರದರು.</p>.<p>ಬೆಣ್ಣಿಹಳ್ಳದಿಂದ ತಂದ ನೀರಿನಿಂದ ಗರ್ಭಗುಡಿಯಲ್ಲಿ ಸಂತರು ದೀಪ ಹಚ್ಚುತ್ತಿದಂತೆ ಭಕ್ತರು ರೋಮಾಂಚನಗೊಂಡರು. ಹಿಂದೂ-ಮುಸ್ಲಿಂ ಭಾವೈಕ್ಕೆಕ್ಕೆ ಸಾಕ್ಷಿಯಾದ ಚಾಂಗದೇವರ ದೇವಸ್ಥಾನಲ್ಲಿ ಪೂಜೆ ಹಾಗೂ ಫಾತಿಹಾ(ಓದಿಕೆ) ಏಕಕಾಲಕ್ಕೆ ನಡೆಯಿತು.</p>.<p>ಹೈದರಾಬಾದ್ ಕರ್ನಾಟಕ ಭಾಗದ ಭಕ್ತರು ಜಾತ್ರೆಯಲ್ಲಿ ಹೆಚ್ಚಾಗಿದ್ದರು. ಆಂಧ್ರದ ಗಡಿಭಾಗದ ಜಿಲ್ಲೆ ಹಾಗೂ ಮಹಾರಾಷ್ಟ್ರದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ:</strong> ಹಿಂದು ಮುಸ್ಲಿಂ ಭಾವೈಕ್ಯ ಸಂಗಮವಾದ ತಾಲೂಕಿನ ಯಮನೂರು ಗ್ರಾಮದ ಜಾಂಗದೇವ ಊರ್ಫ್ ರಾಜಾಭಾಗ ಸವಾರರ ಜಾತ್ರಾ ಮಹೋತ್ಸವ ಶುಕ್ರವಾರ ಗಂಧಾಭಿಷೇಕದೊಂದಿಗೆ ಲಕ್ಷಾಂತರ ಭಕ್ತರ ನಡುವೆ ವೈಭವದೊಂದಿಗೆ ಆರಂಭಗೊಂಡಿತು.</p>.<p>ಶುಕ್ರವಾರ ಗಂಧಾಭಿಷೇಕ ಹಾಗೂ 30 ರಂದು ಉರುಸ್ ಇರುವ ನಿಮಿತ್ತ ರಾಜ್ಯವಲ್ಲದೇ ಇತರೆ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಚಾಂಗದೇವರ ದರ್ಶಕ್ಕೆ ಆಗಮಿಸಿದ್ದರು. ಚಾಂಗದೇವರು ನಮಗೆ ಒಳ್ಳೆಯದನ್ನು ಮಾಡಲಿ. ಕಷ್ಟ ಕಾರ್ಪಣ್ಯಗಳನ್ನು ದೂರ ಮಾಡಲಿ. ಈ ವರ್ಷ ಮಳೆ ಬೆಳೆ ಚೆನ್ನಾಗಿ ಬರಲಿ ಎಂದು ಭಕ್ತರು ಪ್ರಾರ್ಥಿಸಿದರು.</p>.<p>ಗಂಧಾಭಿಷೇಕಕ್ಕೆ ಸಂಬಂಧಿಸಿದಂತೆ ಬರ್ಗೆ ಮನೆತನ ಸಂತರು ಚಾಂಗದೇವನಿಗೆ ದೀಪ ಹಚ್ಚಲು ಬೆಣ್ಣಿ ಹಳ್ಳಕ್ಕೆ ನೀರು ತರಲು ಹೊರಡುವ ಸಮಯದಲ್ಲಿ ರಸ್ತೆಯ ಮೇಲೆ ಭಕ್ತರು ಬೆನ್ನು ಮೇಲಾಗಿ ಮಲಗಿದರು. ಸಂತರ ಪಾದ ಸ್ಪರ್ಶದಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಭಕ್ತರದರು.</p>.<p>ಬೆಣ್ಣಿಹಳ್ಳದಿಂದ ತಂದ ನೀರಿನಿಂದ ಗರ್ಭಗುಡಿಯಲ್ಲಿ ಸಂತರು ದೀಪ ಹಚ್ಚುತ್ತಿದಂತೆ ಭಕ್ತರು ರೋಮಾಂಚನಗೊಂಡರು. ಹಿಂದೂ-ಮುಸ್ಲಿಂ ಭಾವೈಕ್ಕೆಕ್ಕೆ ಸಾಕ್ಷಿಯಾದ ಚಾಂಗದೇವರ ದೇವಸ್ಥಾನಲ್ಲಿ ಪೂಜೆ ಹಾಗೂ ಫಾತಿಹಾ(ಓದಿಕೆ) ಏಕಕಾಲಕ್ಕೆ ನಡೆಯಿತು.</p>.<p>ಹೈದರಾಬಾದ್ ಕರ್ನಾಟಕ ಭಾಗದ ಭಕ್ತರು ಜಾತ್ರೆಯಲ್ಲಿ ಹೆಚ್ಚಾಗಿದ್ದರು. ಆಂಧ್ರದ ಗಡಿಭಾಗದ ಜಿಲ್ಲೆ ಹಾಗೂ ಮಹಾರಾಷ್ಟ್ರದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>