<p><strong>ಗದಗ:</strong> ಲಕ್ಕುಂಡಿ ಗ್ರಾಮದಲ್ಲಿ ಕಳೆದ ವಾರ ಎರಡು ಡೆಂಗಿ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಎಚ್ಚೆತ್ತುಕೊಂಡಿದ್ದು, ಓಣಿಗಳಲ್ಲಿ ಔಷಧ ಸಿಂಪಡಣೆ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.</p>.<p>ಸೊಳ್ಳೆಗಳಿಂದ ಬರುವ ಡೆಂಗಿ ನಿಯಂತ್ರಣಕ್ಕಾಗಿ ವೈದ್ಯರ ಸಲಹೆಯಂತೆ ನೀರು ನಿಂತ ಸ್ಥಳ ಮತ್ತು ಗಟಾರಗಳಲ್ಲಿ ಔಷಧ ಸಿಂಪಡಣೆ ಮಾಡಿಸಲಾಗಿದೆ. ನೀರು ಪೂರೈಕೆ ಮಾಡುವ ಓವರ್ ಹೆಡ್ ಟ್ಯಾಂಕ್ ಸ್ವಚ್ಛತೆ, ವಾರ್ಡ್ಗಳಲ್ಲಿರುವ ನೀರು ಸಂಗ್ರಹಿಸುವ ಸಿಸ್ಟನ್ ಸ್ವಚ್ಛಗೊಳಿಸಲಾಗಿದೆ.</p>.<p>‘ನೀರು ಸಂಗ್ರಹ ಮಾಡುವ ಬ್ಯಾರಲ್, ಪಾತ್ರೆಗಳನ್ನು ಸ್ವಚ್ಛವಾಗಿಟ್ಟುಕೊಂಡು ರೋಗ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಸ್.ಪೂಜಾರ ವಿನಂತಿಸಿಕೊಂಡಿದ್ದಾರೆ.</p>.<p>ಈ ಕುರಿತು ಗ್ರಾಮದಲ್ಲಿ ಡಂಗೂರು ಕೂಡ ಸಾರಿಸಿದ್ದಾರೆ.</p>.<p>ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಗ್ರಾಮದ ಪ್ರತಿ ವಾರ್ಡ್ಗಳಿಗೆ ಆಶಾ ಕಾರ್ಯಕರ್ತರನ್ನು ಕಳಿಸಿ ನೀರು ಸಂಗ್ರಹವಾಗಿರುವ ಪಾತ್ರೆ, ಟ್ಯಾಂಕ್ಗಳನ್ನು ಪರಿಶೀಲಿಸುವಂತೆ ಸೂಚಿಸಿದ್ದಾರೆ. ಬಹಳ ದಿನಗಳಿಂದ ನೀರು ಸಂಗ್ರಹವಾಗಿರುವ ಸ್ಥಳಗಳಲ್ಲಿ ಮೀನಿನ ಮರಿಗಳನ್ನು ಬಿಟ್ಟಿದ್ದಾರೆ. ಮನೆ ಮನೆಗೆ ತೆರಳಿ ಜ್ವರದ ಪ್ರಕರಣವನ್ನು ಪತ್ತೆ ಹಚ್ಚಿ ಆಸ್ಪತ್ರೆಗೆ ದಾಖಲಿಸುವುದು ಮತ್ತು ಔಷಧಗಳನ್ನು ನೀಡುತ್ತಿದ್ದಾರೆ.</p>.<p>ಅಪಾಯಕಾರಿ ಡೆಂಗಿ ಜ್ವರ ಬಂದರೆ ದೇಹದಲ್ಲಿನ ರಕ್ತದ ಕಣಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ. ಯಾವುದೇ ರೀತಿಯ ಜ್ವರ ಇದ್ದರೂ ನಿಧಾನ ಮಾಡದೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಹೋಗಿ ಚಿಕಿತ್ಸೆ ಪಡೆಯಬೇಕು. ರಕ್ತಪರೀಕ್ಷೆಯಲ್ಲಿ ಡೆಂಗಿ ದೃಢಪಟ್ಟರೆ ಆಸ್ಪತ್ರೆಗೆ ದಾಖಲು ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಲಕ್ಕುಂಡಿ ಗ್ರಾಮದಲ್ಲಿ ಕಳೆದ ವಾರ ಎರಡು ಡೆಂಗಿ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಎಚ್ಚೆತ್ತುಕೊಂಡಿದ್ದು, ಓಣಿಗಳಲ್ಲಿ ಔಷಧ ಸಿಂಪಡಣೆ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.</p>.<p>ಸೊಳ್ಳೆಗಳಿಂದ ಬರುವ ಡೆಂಗಿ ನಿಯಂತ್ರಣಕ್ಕಾಗಿ ವೈದ್ಯರ ಸಲಹೆಯಂತೆ ನೀರು ನಿಂತ ಸ್ಥಳ ಮತ್ತು ಗಟಾರಗಳಲ್ಲಿ ಔಷಧ ಸಿಂಪಡಣೆ ಮಾಡಿಸಲಾಗಿದೆ. ನೀರು ಪೂರೈಕೆ ಮಾಡುವ ಓವರ್ ಹೆಡ್ ಟ್ಯಾಂಕ್ ಸ್ವಚ್ಛತೆ, ವಾರ್ಡ್ಗಳಲ್ಲಿರುವ ನೀರು ಸಂಗ್ರಹಿಸುವ ಸಿಸ್ಟನ್ ಸ್ವಚ್ಛಗೊಳಿಸಲಾಗಿದೆ.</p>.<p>‘ನೀರು ಸಂಗ್ರಹ ಮಾಡುವ ಬ್ಯಾರಲ್, ಪಾತ್ರೆಗಳನ್ನು ಸ್ವಚ್ಛವಾಗಿಟ್ಟುಕೊಂಡು ರೋಗ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಸ್.ಪೂಜಾರ ವಿನಂತಿಸಿಕೊಂಡಿದ್ದಾರೆ.</p>.<p>ಈ ಕುರಿತು ಗ್ರಾಮದಲ್ಲಿ ಡಂಗೂರು ಕೂಡ ಸಾರಿಸಿದ್ದಾರೆ.</p>.<p>ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಗ್ರಾಮದ ಪ್ರತಿ ವಾರ್ಡ್ಗಳಿಗೆ ಆಶಾ ಕಾರ್ಯಕರ್ತರನ್ನು ಕಳಿಸಿ ನೀರು ಸಂಗ್ರಹವಾಗಿರುವ ಪಾತ್ರೆ, ಟ್ಯಾಂಕ್ಗಳನ್ನು ಪರಿಶೀಲಿಸುವಂತೆ ಸೂಚಿಸಿದ್ದಾರೆ. ಬಹಳ ದಿನಗಳಿಂದ ನೀರು ಸಂಗ್ರಹವಾಗಿರುವ ಸ್ಥಳಗಳಲ್ಲಿ ಮೀನಿನ ಮರಿಗಳನ್ನು ಬಿಟ್ಟಿದ್ದಾರೆ. ಮನೆ ಮನೆಗೆ ತೆರಳಿ ಜ್ವರದ ಪ್ರಕರಣವನ್ನು ಪತ್ತೆ ಹಚ್ಚಿ ಆಸ್ಪತ್ರೆಗೆ ದಾಖಲಿಸುವುದು ಮತ್ತು ಔಷಧಗಳನ್ನು ನೀಡುತ್ತಿದ್ದಾರೆ.</p>.<p>ಅಪಾಯಕಾರಿ ಡೆಂಗಿ ಜ್ವರ ಬಂದರೆ ದೇಹದಲ್ಲಿನ ರಕ್ತದ ಕಣಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ. ಯಾವುದೇ ರೀತಿಯ ಜ್ವರ ಇದ್ದರೂ ನಿಧಾನ ಮಾಡದೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಹೋಗಿ ಚಿಕಿತ್ಸೆ ಪಡೆಯಬೇಕು. ರಕ್ತಪರೀಕ್ಷೆಯಲ್ಲಿ ಡೆಂಗಿ ದೃಢಪಟ್ಟರೆ ಆಸ್ಪತ್ರೆಗೆ ದಾಖಲು ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>