<p><strong>ಗದಗ:</strong> ಪ್ರತಿ ವರ್ಷ ಜುಲೈ 12ರಂದು ಪೇಪರ್ ಬ್ಯಾಗ್ ದಿನ ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಇನ್ನರ್ ವ್ಹೀಲ್ ಸಂಸ್ಥೆಯವರು ಗದಗ ಮಾರುಕಟ್ಟೆಯಲ್ಲಿ ಪೇಪರ್ ಬ್ಯಾಗ್ ಹಂಚಿ ಜನರಿಗೆ ‘ಪ್ಲಾಸ್ಟಿಕ್ ಚೀಲ ತ್ಯಜಿಸಿ, ಕಾಗದದ ಚೀಲ ಬಳಸಿ, ಪರಿಸರ ಉಳಿಸಿ’ ಎಂದು ಜಾಗೃತಿ ಮೂಡಿಸಿದರು.</p>.<p>ಸಂಸ್ಥೆಯ ಅಧ್ಯಕ್ಷೆ ನಾಗರತ್ನ ಮಾರನಬಸರಿ ಮಾತನಾಡಿ, ‘ಪ್ಲಾಸ್ಟಿಕ್ ತ್ಯಜಿಸುವಂತೆ ಯುವಜನರಲ್ಲಿ ಜಾಗೃತಿ ಮೂಡಿಸಲು ಪೇಪರ್ ಬ್ಯಾಗ್ ಡೇ ಆಚರಿಸಲಾಗುತ್ತಿದೆ’ ಎಂದರು.</p>.<p>‘ಅತಿಯಾದ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಯಿಂದ ಪರಿಸರಕ್ಕೆ ತೀವ್ರವಾದ ಹಾನಿಯಾಗುತ್ತಿದೆ. ಪ್ಲಾಸ್ಟಿಕ್ ಮಾಲಿನ್ಯದಿಂದ ಪ್ರಾಣಿಗಳ ಜೀವನ, ಮಾನವ ಆರೋಗ್ಯ ಮತ್ತು ನಮ್ಮ ಪರಿಸರ ವ್ಯವಸ್ಥೆ ಮೇಲೆ ಗಂಭೀರವಾದ ದುಷ್ಪರಿಣಾಮ ಬೀರಿದೆ. ಪ್ಲಾಸ್ಟಿಕ್ ಚೀಲಗಳು ಮತ್ತು ಇತರ ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಈ ತೊಂದರಗೆ ಪ್ರಮುಖ ಕಾರಣವಾಗಿದೆ’ ಎಂದು ತಿಳಿಸಿದರು.</p>.<p>ಡಾ. ಹನುಮಂತಗೌಡ ಕಲ್ಮನಿ ಮಾತನಾಡಿ, ‘ಪೇಪರ್ ಬ್ಯಾಗ್ಗಳನ್ನು ಉಪಯೋಗಿಸಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ತ್ಯಜಿಸುವುದು ಪರಿಸರ ಸ್ನೇಹಿ ಕಾರ್ಯವಾಗಿದೆ’ ಎಂದು ಹೇಳಿದರು.</p>.<p>ಕ್ಲಬ್ನ ಕಾರ್ಯದರ್ಶಿ ವೀಣಾ ತಿರ್ಲಾಪುರ, ಪುಷ್ಪಾ ಭಂಡಾರಿ, ಖಜಾಂಚಿ ಪೂಜಾ ಭೂಮಾ, ಸುಮಾ ಪಾಟೀಲ, ಶೀವಲೀಲಾ ಅಕ್ಕಿ, ಪುಷ್ಪಾ ಕೊರವಣ್ಣನವರ್, ಕಮಲಾ ಜಂಬಗಿ ಮತ್ತು ರೇಣುಕಾ ಅಮಾತ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಪ್ರತಿ ವರ್ಷ ಜುಲೈ 12ರಂದು ಪೇಪರ್ ಬ್ಯಾಗ್ ದಿನ ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಇನ್ನರ್ ವ್ಹೀಲ್ ಸಂಸ್ಥೆಯವರು ಗದಗ ಮಾರುಕಟ್ಟೆಯಲ್ಲಿ ಪೇಪರ್ ಬ್ಯಾಗ್ ಹಂಚಿ ಜನರಿಗೆ ‘ಪ್ಲಾಸ್ಟಿಕ್ ಚೀಲ ತ್ಯಜಿಸಿ, ಕಾಗದದ ಚೀಲ ಬಳಸಿ, ಪರಿಸರ ಉಳಿಸಿ’ ಎಂದು ಜಾಗೃತಿ ಮೂಡಿಸಿದರು.</p>.<p>ಸಂಸ್ಥೆಯ ಅಧ್ಯಕ್ಷೆ ನಾಗರತ್ನ ಮಾರನಬಸರಿ ಮಾತನಾಡಿ, ‘ಪ್ಲಾಸ್ಟಿಕ್ ತ್ಯಜಿಸುವಂತೆ ಯುವಜನರಲ್ಲಿ ಜಾಗೃತಿ ಮೂಡಿಸಲು ಪೇಪರ್ ಬ್ಯಾಗ್ ಡೇ ಆಚರಿಸಲಾಗುತ್ತಿದೆ’ ಎಂದರು.</p>.<p>‘ಅತಿಯಾದ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಯಿಂದ ಪರಿಸರಕ್ಕೆ ತೀವ್ರವಾದ ಹಾನಿಯಾಗುತ್ತಿದೆ. ಪ್ಲಾಸ್ಟಿಕ್ ಮಾಲಿನ್ಯದಿಂದ ಪ್ರಾಣಿಗಳ ಜೀವನ, ಮಾನವ ಆರೋಗ್ಯ ಮತ್ತು ನಮ್ಮ ಪರಿಸರ ವ್ಯವಸ್ಥೆ ಮೇಲೆ ಗಂಭೀರವಾದ ದುಷ್ಪರಿಣಾಮ ಬೀರಿದೆ. ಪ್ಲಾಸ್ಟಿಕ್ ಚೀಲಗಳು ಮತ್ತು ಇತರ ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಈ ತೊಂದರಗೆ ಪ್ರಮುಖ ಕಾರಣವಾಗಿದೆ’ ಎಂದು ತಿಳಿಸಿದರು.</p>.<p>ಡಾ. ಹನುಮಂತಗೌಡ ಕಲ್ಮನಿ ಮಾತನಾಡಿ, ‘ಪೇಪರ್ ಬ್ಯಾಗ್ಗಳನ್ನು ಉಪಯೋಗಿಸಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ತ್ಯಜಿಸುವುದು ಪರಿಸರ ಸ್ನೇಹಿ ಕಾರ್ಯವಾಗಿದೆ’ ಎಂದು ಹೇಳಿದರು.</p>.<p>ಕ್ಲಬ್ನ ಕಾರ್ಯದರ್ಶಿ ವೀಣಾ ತಿರ್ಲಾಪುರ, ಪುಷ್ಪಾ ಭಂಡಾರಿ, ಖಜಾಂಚಿ ಪೂಜಾ ಭೂಮಾ, ಸುಮಾ ಪಾಟೀಲ, ಶೀವಲೀಲಾ ಅಕ್ಕಿ, ಪುಷ್ಪಾ ಕೊರವಣ್ಣನವರ್, ಕಮಲಾ ಜಂಬಗಿ ಮತ್ತು ರೇಣುಕಾ ಅಮಾತ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>