<p><strong>ನರಗುಂದ:</strong> ‘ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಮೀಸಲಿಟ್ಟ ಹಣದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರ ರಾಜೀನಾಮೆ ಪಡೆದರೆ ಸಾಲದು, ಈ ಹಗರಣ ಅಧಿಕಾರಿಗಳ ಮಟ್ಟದಲ್ಲಿ ಮಾತ್ರ ಆಗಿಲ್ಲ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು, ಸಂಪುಟ ಸಮೇತ ಸರ್ಕಾರ ವಿಸರ್ಜನೆ ಮಾಡಬೇಕು’ ಎಂದು ಶಾಸಕ ಸಿ.ಸಿ.ಪಾಟೀಲ ಆಗ್ರಹಿಸಿದರು.</p>.<p>ಪಟ್ಟಣದಲ್ಲಿನ ತಮ್ಮ ಗೃಹ ಕಚೇರಿ ಆವರಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ರಾಜ್ಯ ಕಾಂಗ್ರೆಸ್ ಸರ್ಕಾರವು ಬಹುಕೋಟಿ ಹಗರಣಗಳಲ್ಲಿ ಭಾಗಿಯಾಗಿದೆ ಮತ್ತು ಎಸ್ಟಿ ನಿಗಮ ಇಲಾಖೆಯ ₹187 ಕೋಟಿ ಹಣ ಹೊರರಾಜ್ಯ ತೆಲಂಗಾಣದ ಚುನಾವಣಾ ಸಂದರ್ಭದಲ್ಲಿ ಬಳಕೆಯಾಗಿದೆ. ವಾಲ್ಮೀಕಿ ನಿಗಮದಿಂದ ಎಷ್ಟೆಷ್ಟು ಹಣ ಯಾವಾಗ ಎಲ್ಲಿಂದ, ಎಲ್ಲಿಗೆ ವರ್ಗಾವಣೆ ಆಗಿದೆ ಎನ್ನುವ ಬಗ್ಗೆ ದಿನಾಂಕ ಸಮೇತ ಮುಖ್ಯಮಂತ್ರಿ ಸ್ಪಷ್ಟೀಕರಣ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸಿದ್ದರಾಮಯ್ಯ ಮಾತೆತ್ತಿದರೆ ತಾನು ಅಹಿಂದ ನಾಯಕ ಎನ್ನುತ್ತಾರೆ. ಆದರೆ ಈಗ ಅವರೇ ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣ ನುಂಗಿ ಹಾಕಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ತವರು ಜಿಲ್ಲೆಯಲ್ಲಿ ಮುಡಾ ಹಗರಣ ನಡೆಸಿದ್ದಾರೆ. ಇವೆಲ್ಲ ನೋಡಿದಾಗ ರಾಜೀನಾಮೆ ನೀಡುವುದು ಸೂಕ್ತ. ಇಲ್ಲವಾದಲ್ಲಿ ಚುನಾವಣೆಗೆ ಬರಲು ಸಿದ್ಧವಾಗಬೇಕು’ ಎಂದರು.</p>.<p>‘ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇ.ಡಿ ತನಿಖೆ ಅವಶ್ಯವಿರಲಿಲ್ಲ ಎಂದಿದ್ದಾರೆ. ಇ.ಡಿ ತನಿಖೆ ಆಗದೇ ಇದ್ದರೆ, ರಾಜ್ಯ ಕಾಂಗ್ರೆಸ್ ಸರ್ಕಾರವು ಈ ಹಗರಣವನ್ನೇ ಮುಚ್ಚಿ ಹಾಕುತ್ತಿತ್ತು’ ಎಂದು ವಾಗ್ದಾಳಿ ನಡೆಸಿದರು.</p>.<p>ಅಜ್ಜನಗೌಡ ಪಾಟೀಲ, ಉಮೇಶಗೌಡ ಪಾಟೀಲ, ವಸಂತ ಜೋಗಣ್ಣವರ, ಪ್ರಕಾಶಗೌಡ ತಿರಕನಗೌಡ್ರ, ಮಲ್ಲಪ್ಪ ಮೇಟಿ, ಗುರಣ್ಣ ಆದೆಪ್ಪನವರ, ಬಸಪ್ಪ ಮಳಗಿ, ಮಂಜುನಾಥ ಮೆಣಸಗಿ, ವಿಠ್ಠಲ ಹವಾಲ್ದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ:</strong> ‘ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಮೀಸಲಿಟ್ಟ ಹಣದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರ ರಾಜೀನಾಮೆ ಪಡೆದರೆ ಸಾಲದು, ಈ ಹಗರಣ ಅಧಿಕಾರಿಗಳ ಮಟ್ಟದಲ್ಲಿ ಮಾತ್ರ ಆಗಿಲ್ಲ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು, ಸಂಪುಟ ಸಮೇತ ಸರ್ಕಾರ ವಿಸರ್ಜನೆ ಮಾಡಬೇಕು’ ಎಂದು ಶಾಸಕ ಸಿ.ಸಿ.ಪಾಟೀಲ ಆಗ್ರಹಿಸಿದರು.</p>.<p>ಪಟ್ಟಣದಲ್ಲಿನ ತಮ್ಮ ಗೃಹ ಕಚೇರಿ ಆವರಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ರಾಜ್ಯ ಕಾಂಗ್ರೆಸ್ ಸರ್ಕಾರವು ಬಹುಕೋಟಿ ಹಗರಣಗಳಲ್ಲಿ ಭಾಗಿಯಾಗಿದೆ ಮತ್ತು ಎಸ್ಟಿ ನಿಗಮ ಇಲಾಖೆಯ ₹187 ಕೋಟಿ ಹಣ ಹೊರರಾಜ್ಯ ತೆಲಂಗಾಣದ ಚುನಾವಣಾ ಸಂದರ್ಭದಲ್ಲಿ ಬಳಕೆಯಾಗಿದೆ. ವಾಲ್ಮೀಕಿ ನಿಗಮದಿಂದ ಎಷ್ಟೆಷ್ಟು ಹಣ ಯಾವಾಗ ಎಲ್ಲಿಂದ, ಎಲ್ಲಿಗೆ ವರ್ಗಾವಣೆ ಆಗಿದೆ ಎನ್ನುವ ಬಗ್ಗೆ ದಿನಾಂಕ ಸಮೇತ ಮುಖ್ಯಮಂತ್ರಿ ಸ್ಪಷ್ಟೀಕರಣ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸಿದ್ದರಾಮಯ್ಯ ಮಾತೆತ್ತಿದರೆ ತಾನು ಅಹಿಂದ ನಾಯಕ ಎನ್ನುತ್ತಾರೆ. ಆದರೆ ಈಗ ಅವರೇ ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣ ನುಂಗಿ ಹಾಕಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ತವರು ಜಿಲ್ಲೆಯಲ್ಲಿ ಮುಡಾ ಹಗರಣ ನಡೆಸಿದ್ದಾರೆ. ಇವೆಲ್ಲ ನೋಡಿದಾಗ ರಾಜೀನಾಮೆ ನೀಡುವುದು ಸೂಕ್ತ. ಇಲ್ಲವಾದಲ್ಲಿ ಚುನಾವಣೆಗೆ ಬರಲು ಸಿದ್ಧವಾಗಬೇಕು’ ಎಂದರು.</p>.<p>‘ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇ.ಡಿ ತನಿಖೆ ಅವಶ್ಯವಿರಲಿಲ್ಲ ಎಂದಿದ್ದಾರೆ. ಇ.ಡಿ ತನಿಖೆ ಆಗದೇ ಇದ್ದರೆ, ರಾಜ್ಯ ಕಾಂಗ್ರೆಸ್ ಸರ್ಕಾರವು ಈ ಹಗರಣವನ್ನೇ ಮುಚ್ಚಿ ಹಾಕುತ್ತಿತ್ತು’ ಎಂದು ವಾಗ್ದಾಳಿ ನಡೆಸಿದರು.</p>.<p>ಅಜ್ಜನಗೌಡ ಪಾಟೀಲ, ಉಮೇಶಗೌಡ ಪಾಟೀಲ, ವಸಂತ ಜೋಗಣ್ಣವರ, ಪ್ರಕಾಶಗೌಡ ತಿರಕನಗೌಡ್ರ, ಮಲ್ಲಪ್ಪ ಮೇಟಿ, ಗುರಣ್ಣ ಆದೆಪ್ಪನವರ, ಬಸಪ್ಪ ಮಳಗಿ, ಮಂಜುನಾಥ ಮೆಣಸಗಿ, ವಿಠ್ಠಲ ಹವಾಲ್ದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>