ಶನಿವಾರ, 28 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಲ್ಲೆಯ ನಾಲ್ವರಿಗೆ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ

Published : 28 ಸೆಪ್ಟೆಂಬರ್ 2024, 16:26 IST
Last Updated : 28 ಸೆಪ್ಟೆಂಬರ್ 2024, 16:26 IST
ಫಾಲೋ ಮಾಡಿ
Comments

ಗದಗ: ಜಿಲ್ಲೆಯ ವಿವಿಧ ಅಧಿಕಾರಿಗಳಿಗೆ ‘ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024’  ಪ್ರಶಸ್ತಿಯನ್ನು ಕಂದಾಯ ಸಚಿವ ಕೃಷ್ಣಭೈರೇಗೌಡ ಶುಕ್ರವಾರ ಪ್ರದಾನ ಮಾಡಿದರು.

ಭೂದಾಖಲೆಗಳ ಉಪ ನಿರ್ದೇಶಕ ರುದ್ರಗೌಡ ಜಿ.ಜೆ., ಮುಂಡರಗಿ ತಾಲ್ಲೂಕಿನ ಭೂದಾಖಲೆಗಳ ಸಹಾಯಕ ನಿರ್ದೇಶಕ ಕೆ.ಎನ್. ರಮೇಶ, ಗದಗ ತಾಲ್ಲೂಕು ಪರವಾನಗಿ ಭೂಮಾಪಕ ಈರಣ್ಣ ಚನ್ನಪ್ಪ ತೊಂಡಿಹಾಳ ಹಾಗೂ ರೋಣ ತಾಲ್ಲೂಕಿನ ಸರ್ಕಾರಿ ಭೂಮಾಪಕ ಸಂಗಮೇಶ ಕುರಿ ಅವರು ಸಚಿವರಿಂದ ಪ್ರಶಸ್ತಿ ಸ್ವೀಕರಿಸಿದರು.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ. ಮಹೇಶ್, ಭೂದಾಖಲೆಗಳ ಬೆಳಗಾವಿ ಭಾಗದ ಜಂಟಿ ನಿರ್ದೇಶಕ ಎನ್.ಎಂ.ಪೀರ್‌ಜಾದೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT