<p><strong>ಗದಗ</strong>: ‘ಡೆಂಗಿ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುವ ರೋಗ. ಈ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಡಳಿತ ಭವನದಲ್ಲಿ ನಡೆದ ಆರೋಗ್ಯ ಇಲಾಖೆ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಸಾರ್ವಜನಿಕರು ಡೆಂಗಿ ಜ್ವರದ ಕುರಿತು ಭಯ ಹಾಗೂ ಆತಂಕಕ್ಕೆ ಒಳಗಾಗದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಡೆಂಗಿ ನಿಯಂತ್ರಣಕ್ಕಾಗಿ ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದು ಮುಖ್ಯವಾಗಿದೆ. ಈ ಕುರಿತು ಎಲ್ಲ ಇಲಾಖೆ ಅಧಿಕಾರಿಗಳು ಜನಜಾಗೃತಿ ಮೂಡಿಸಿ, ಡೆಂಗಿ ನಿಯಂತ್ರಣಕ್ಕೆ ಕ್ರಮವಹಿಸಬೇಕು’ ಎಂದರು.</p>.<p>‘ಈಡಿಸ್ ಸೊಳ್ಳೆಗಳು ಮನೆಯಲ್ಲಿರುವ ನೀರು ಶೇಖರಣೆಯ ತೊಟ್ಟಿಗಳು, ಬ್ಯಾರಲ್ಗಳು, ಡ್ರಂಗಳು, ಹೂವಿನ ಕುಂಡ ಮುಂತಾದವುಗಳಲ್ಲದೇ ಮನೆ ಸುತ್ತಮುತ್ತ ಬಯಲಲ್ಲಿ ಬಿಸಾಡಿದ ಪಿಂಗಾಣಿ ವಸ್ತುಗಳು, ಪ್ಲಾಸ್ಟಿಕ್ ಕಪ್ಪುಗಳು, ಟಯರ್ಗಳು, ಎಳೆನೀರಿನ ಚಿಪ್ಪು ಮತ್ತು ಇತರೆ ವಸ್ತುಗಳಲ್ಲಿ ನೀರು ಸಂಗ್ರಹವಾದಾಗ ಉತ್ಪತ್ತಿಯಾಗುತ್ತವೆ. ಇವುಗಳ ಸಂಪೂರ್ಣ ನಿಯಂತ್ರಣ ಅರಿವು ಜನರಲ್ಲಿ ಮೂಡಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘ಎರಡನೇ ಬಾರಿ ಡೆಂಗಿ ಬಾಧೆಗೆ ಒಳಗಾದವರು ಸ್ವಲ್ಪವೂ ನಿರ್ಲಕ್ಷ್ಯ ಮಾಡಬಾರದು. ಯಾಕೆಂದರೆ ಅದು ತೀವ್ರ ಸ್ವರೂಪಕ್ಕೆ ಹೋಗುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ತಕ್ಷಣ ಚಿಕಿತ್ಸೆ ಪಡೆದು ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು ಎಂಬುದನ್ನು ಸಹ ಜನಸಾಮಾನ್ಯರಿಗೆ ತಿಳಿಸಲು ಮರೆಯಬಾರದು’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್. ಮಾತನಾಡಿ, ‘ಸೊಳ್ಳೆಗಳ ಉತ್ಪತ್ತಿ ಸಂಪೂರ್ಣ ನಿಯಂತ್ರಿಸಬೇಕು. ಸೊಳ್ಳೆಗಳ ಸಂಭಾವ್ಯ ಸಂತಾನೋತ್ಪತ್ತಿ ಸ್ಥಳಗಳನ್ನು ನಾಶಪಡಿಸಲು ಎಲ್ಲರೂ ಮುಂದಾಗಬೇಕು. ನಿಂತ ನೀರು ಸೊಳ್ಳೆಗಳ ಉತ್ಪತ್ತಿಗೆ ಕಾರಣ. ನಿಂತ ನೀರನ್ನು ತೊಡೆದು ಹಾಕಲು ಬ್ಯಾರಲ್ಗಳು, ಹೂದಾನಿಗಳು, ಬೇಸಿನ್ಗಳು ಅಥವಾ ಕಪ್ಗಳು ಮತ್ತು ಬಳಕೆಯಾಗದ ಟಯರ್ಗಳು ಸೇರಿದಂತೆ ನಿಂತಿರುವ ನೀರಿನ ಎಲ್ಲ ಮೂಲಗಳನ್ನು ತೆರವುಗೊಳಿಸಿ ಸೊಳ್ಳೆ ನಿವಾರಕಗಳನ್ನು ಬಳಸಿ ಸಾರ್ವಜನಿಕರು ಡೆಂಗಿ ನಿಯಂತ್ರಿಸಬೇಕು’ ಎಂದು ಸೂಚಿಸಿದರು. </p>.<p>ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ ಮಾತನಾಡಿದರು.</p>.<p>ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ.ಕರೆಗೌಡ್ರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ನಗರಸಭೆ ಪೌರಾಯುಕ್ತ ಪ್ರಶಾಂತ ವರಗಪ್ಪನವರ ಸೇರಿದಂತೆ ಆರೋಗ್ಯ ಇಲಾಖೆಯ ಕಾರ್ಯಕ್ರಮಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಜರಿದ್ದರು.</p>.<p>ಡೆಂಗಿ ಶಾಕ್ ಸಿಂಡ್ರೋಮ್ ಲಕ್ಷಣ ಅರಿಯಿರಿ: ಡಿಎಚ್ಒ ‘ತೀವ್ರ ಜ್ವರ ತಲೆ ನೋವು ಕಣ್ಣುಗಳ ಹಿಂಭಾಗದಲ್ಲಿ ನೋವು ಮಾಂಸಖಂಡ ಮತ್ತು ಕೀಲುಗಳಲ್ಲಿ ನೋವು ಉಂಟಾಗುವುದು ಡೆಂಗಿ ಜ್ವರದ ಲಕ್ಷಣಗಳಾಗಿವೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಎಸ್. ನೀಲಗುಂದ ತಿಳಿಸಿದರು. ‘ಜ್ವರದ ಲಕ್ಷಣಗಳೊಂದಿಗೆ ಬಾಯಿ ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಚರ್ಮದ ಮೇಲೆ ರಕ್ತಸ್ರಾವದ ಗುರುತುಗಳು ಕಪ್ಪುಮಲ ವಿಸರ್ಜನೆ ವಿಪರೀತ ಬಾಯಾರಿಕೆ ಅಥವಾ ಜ್ಞಾನ ತಪ್ಪುವುದು ಇವುಗಳು ಡೆಂಗಿ ಶಾಕ್ ಸಿಂಡ್ರೋಮ್ನ ಲಕ್ಷಣಗಳಾಗಿವೆ’ ಎಂದು ತಿಳಿಸಿದರು. ಸಾರ್ವಜನಿಕರು ಯಾವುದೇ ಜ್ವರವಿದ್ದರೂ ಮೊದಲು ರಕ್ತ ಪರೀಕ್ಷೆ ಮಾಡಿಸಬೇಕು. ಸೊಳ್ಳೆಗಳ ನಾಶಕ್ಕೆ ಕೀಟನಾಶಕ ಸಿಂಪಡಿಸಲು ಬರುವ ಆರೋಗ್ಯ ಸಿಬ್ಬಂದಿಗೆ ನೆರವಾಗಬೇಕು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು. ‘ಸಂಜೆ ಹೊತ್ತಿನಲ್ಲಿ ಆದಷ್ಟು ಮೈ ತುಂಬ ಬಟ್ಟೆ ಹೊದೆಯಿರಿ ಮತ್ತು ಮನೆಯ ಕಿಟಕಿ ಬಾಗಿಲುಗಳನ್ನು ಮುಚ್ಚಿಡಬೇಕು. ಮನೆಯ ಎಲ್ಲ ಕಿಟಕಿ ಬಾಗಿಲುಗಳಿಗೆ ಕೀಟ ತಡೆಗಟ್ಟುವ ಜಾಲರಿಗಳನ್ನು ಅಳವಡಿಸಿಕೊಳ್ಳಬೇಕು. ಮಲಗುವಾಗ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ಡೆಂಗಿ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುವ ರೋಗ. ಈ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಡಳಿತ ಭವನದಲ್ಲಿ ನಡೆದ ಆರೋಗ್ಯ ಇಲಾಖೆ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಸಾರ್ವಜನಿಕರು ಡೆಂಗಿ ಜ್ವರದ ಕುರಿತು ಭಯ ಹಾಗೂ ಆತಂಕಕ್ಕೆ ಒಳಗಾಗದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಡೆಂಗಿ ನಿಯಂತ್ರಣಕ್ಕಾಗಿ ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದು ಮುಖ್ಯವಾಗಿದೆ. ಈ ಕುರಿತು ಎಲ್ಲ ಇಲಾಖೆ ಅಧಿಕಾರಿಗಳು ಜನಜಾಗೃತಿ ಮೂಡಿಸಿ, ಡೆಂಗಿ ನಿಯಂತ್ರಣಕ್ಕೆ ಕ್ರಮವಹಿಸಬೇಕು’ ಎಂದರು.</p>.<p>‘ಈಡಿಸ್ ಸೊಳ್ಳೆಗಳು ಮನೆಯಲ್ಲಿರುವ ನೀರು ಶೇಖರಣೆಯ ತೊಟ್ಟಿಗಳು, ಬ್ಯಾರಲ್ಗಳು, ಡ್ರಂಗಳು, ಹೂವಿನ ಕುಂಡ ಮುಂತಾದವುಗಳಲ್ಲದೇ ಮನೆ ಸುತ್ತಮುತ್ತ ಬಯಲಲ್ಲಿ ಬಿಸಾಡಿದ ಪಿಂಗಾಣಿ ವಸ್ತುಗಳು, ಪ್ಲಾಸ್ಟಿಕ್ ಕಪ್ಪುಗಳು, ಟಯರ್ಗಳು, ಎಳೆನೀರಿನ ಚಿಪ್ಪು ಮತ್ತು ಇತರೆ ವಸ್ತುಗಳಲ್ಲಿ ನೀರು ಸಂಗ್ರಹವಾದಾಗ ಉತ್ಪತ್ತಿಯಾಗುತ್ತವೆ. ಇವುಗಳ ಸಂಪೂರ್ಣ ನಿಯಂತ್ರಣ ಅರಿವು ಜನರಲ್ಲಿ ಮೂಡಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘ಎರಡನೇ ಬಾರಿ ಡೆಂಗಿ ಬಾಧೆಗೆ ಒಳಗಾದವರು ಸ್ವಲ್ಪವೂ ನಿರ್ಲಕ್ಷ್ಯ ಮಾಡಬಾರದು. ಯಾಕೆಂದರೆ ಅದು ತೀವ್ರ ಸ್ವರೂಪಕ್ಕೆ ಹೋಗುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ತಕ್ಷಣ ಚಿಕಿತ್ಸೆ ಪಡೆದು ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು ಎಂಬುದನ್ನು ಸಹ ಜನಸಾಮಾನ್ಯರಿಗೆ ತಿಳಿಸಲು ಮರೆಯಬಾರದು’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್. ಮಾತನಾಡಿ, ‘ಸೊಳ್ಳೆಗಳ ಉತ್ಪತ್ತಿ ಸಂಪೂರ್ಣ ನಿಯಂತ್ರಿಸಬೇಕು. ಸೊಳ್ಳೆಗಳ ಸಂಭಾವ್ಯ ಸಂತಾನೋತ್ಪತ್ತಿ ಸ್ಥಳಗಳನ್ನು ನಾಶಪಡಿಸಲು ಎಲ್ಲರೂ ಮುಂದಾಗಬೇಕು. ನಿಂತ ನೀರು ಸೊಳ್ಳೆಗಳ ಉತ್ಪತ್ತಿಗೆ ಕಾರಣ. ನಿಂತ ನೀರನ್ನು ತೊಡೆದು ಹಾಕಲು ಬ್ಯಾರಲ್ಗಳು, ಹೂದಾನಿಗಳು, ಬೇಸಿನ್ಗಳು ಅಥವಾ ಕಪ್ಗಳು ಮತ್ತು ಬಳಕೆಯಾಗದ ಟಯರ್ಗಳು ಸೇರಿದಂತೆ ನಿಂತಿರುವ ನೀರಿನ ಎಲ್ಲ ಮೂಲಗಳನ್ನು ತೆರವುಗೊಳಿಸಿ ಸೊಳ್ಳೆ ನಿವಾರಕಗಳನ್ನು ಬಳಸಿ ಸಾರ್ವಜನಿಕರು ಡೆಂಗಿ ನಿಯಂತ್ರಿಸಬೇಕು’ ಎಂದು ಸೂಚಿಸಿದರು. </p>.<p>ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ ಮಾತನಾಡಿದರು.</p>.<p>ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ.ಕರೆಗೌಡ್ರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ನಗರಸಭೆ ಪೌರಾಯುಕ್ತ ಪ್ರಶಾಂತ ವರಗಪ್ಪನವರ ಸೇರಿದಂತೆ ಆರೋಗ್ಯ ಇಲಾಖೆಯ ಕಾರ್ಯಕ್ರಮಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಜರಿದ್ದರು.</p>.<p>ಡೆಂಗಿ ಶಾಕ್ ಸಿಂಡ್ರೋಮ್ ಲಕ್ಷಣ ಅರಿಯಿರಿ: ಡಿಎಚ್ಒ ‘ತೀವ್ರ ಜ್ವರ ತಲೆ ನೋವು ಕಣ್ಣುಗಳ ಹಿಂಭಾಗದಲ್ಲಿ ನೋವು ಮಾಂಸಖಂಡ ಮತ್ತು ಕೀಲುಗಳಲ್ಲಿ ನೋವು ಉಂಟಾಗುವುದು ಡೆಂಗಿ ಜ್ವರದ ಲಕ್ಷಣಗಳಾಗಿವೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಎಸ್. ನೀಲಗುಂದ ತಿಳಿಸಿದರು. ‘ಜ್ವರದ ಲಕ್ಷಣಗಳೊಂದಿಗೆ ಬಾಯಿ ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಚರ್ಮದ ಮೇಲೆ ರಕ್ತಸ್ರಾವದ ಗುರುತುಗಳು ಕಪ್ಪುಮಲ ವಿಸರ್ಜನೆ ವಿಪರೀತ ಬಾಯಾರಿಕೆ ಅಥವಾ ಜ್ಞಾನ ತಪ್ಪುವುದು ಇವುಗಳು ಡೆಂಗಿ ಶಾಕ್ ಸಿಂಡ್ರೋಮ್ನ ಲಕ್ಷಣಗಳಾಗಿವೆ’ ಎಂದು ತಿಳಿಸಿದರು. ಸಾರ್ವಜನಿಕರು ಯಾವುದೇ ಜ್ವರವಿದ್ದರೂ ಮೊದಲು ರಕ್ತ ಪರೀಕ್ಷೆ ಮಾಡಿಸಬೇಕು. ಸೊಳ್ಳೆಗಳ ನಾಶಕ್ಕೆ ಕೀಟನಾಶಕ ಸಿಂಪಡಿಸಲು ಬರುವ ಆರೋಗ್ಯ ಸಿಬ್ಬಂದಿಗೆ ನೆರವಾಗಬೇಕು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು. ‘ಸಂಜೆ ಹೊತ್ತಿನಲ್ಲಿ ಆದಷ್ಟು ಮೈ ತುಂಬ ಬಟ್ಟೆ ಹೊದೆಯಿರಿ ಮತ್ತು ಮನೆಯ ಕಿಟಕಿ ಬಾಗಿಲುಗಳನ್ನು ಮುಚ್ಚಿಡಬೇಕು. ಮನೆಯ ಎಲ್ಲ ಕಿಟಕಿ ಬಾಗಿಲುಗಳಿಗೆ ಕೀಟ ತಡೆಗಟ್ಟುವ ಜಾಲರಿಗಳನ್ನು ಅಳವಡಿಸಿಕೊಳ್ಳಬೇಕು. ಮಲಗುವಾಗ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>