<p>ಗಜೇಂದ್ರಗಡ: ಪಟ್ಟಣದ ಪುರಸಭೆ ಕಾರ್ಯಾಲಯಕ್ಕೆ ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ಗುರುವಾರ ದಿಢೀರ್ ಭೇಟಿ ನೀಡಿ ಜನನ-ಮರಣ ಹಾಗೂ ವಿಲೇವಾರಿಯಾಗದ ಕಡತಗಳ ಪರಿಶೀಲನೆ ನಡೆಸಿ, ಪುರಸಭೆ ಆವರಣದಲ್ಲಿ ನಿಂತಿದ್ದ ವಾಹನಗಳ ಪರಿಶೀಲಿಸಿ, ಮಳಿಗೆಗಳ ಬಗ್ಗೆ ಮಾಹಿತಿ ಪಡೆದರು.</p>.<p>ಪಟ್ಟಣದ ಪುರಸಭೆ ಆವರಣದಲ್ಲಿ ನಿಂತಿದ್ದ ವಾಹನಗಳ ಪರಿಶೀಲನೆ ವೇಳೆ ಪುರಸಭೆಯ ವಾನಹಗಳು ಸುಸ್ಥಿತಿಯಲ್ಲಿರುವುದರ ಜೊತೆಗೆ ಚಾಲಕರು ಕಡ್ಡಾಯವಾಗಿ ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು. ಕೆಟ್ಟು ನಿಂತಿದ್ದ ವಾಹನಗಳನ್ನು ಗುಜರಿಗೆ ಹಾಕುವ ಮುನ್ನ ಆರ್ಟಿಒ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸಕಾಲದಲ್ಲಿ ಅವಧಿ ಮೀರಿದರೂ ಸಹ ಕಡತಗಳನ್ನು ಪರಿಶೀಲಿಸಿ, ತ್ವರಿತಗತಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ತಾಕೀತು ಮಾಡಿದರು.</p>.<p>‘ಸಾರ್ವಜನಿಕರು ಸಮಸ್ಯೆಗಳ ಪರಿಹಾರಕ್ಕೆ ಅಲೆಯದಂತೆ ಕರ್ತವ್ಯ ನಿರ್ವಹಿಸಿ. ಪಟ್ಟಣದಲ್ಲಿ ನಿರ್ಮಾಣವಾಗುವ ಬಡಾವಣೆಯಲ್ಲಿ ನಿವೇಶನಗಳ ಮಾರಾಟ ಮಾಡಲು ಕಡ್ಡಾಯವಾಗಿ ವಿದ್ಯುತ್ ಕಂಬ, ಚರಂಡಿ, ನೀರಿನ ಸಂಪರ್ಕ ಸೇರಿದಂತೆ ಮೂಲಸೌಲಭ್ಯಗಳು ಹೊಂದಿರಬೇಕು. ಹೀಗಾಗಿ ಪಟ್ಟಣದಲ್ಲಿನ ಒಟ್ಟು ಬಡಾವಣೆಗಳ ಮಾಹಿತಿ, ಅಭಿವೃದ್ಧಿ ಹೊಂದದ ಬಡಾವಣೆಗಳ ಸಮಗ್ರ ಮಾಹಿತಿ ನೀಡುವುದರ ಜೊತೆಗೆ ಯಾವ ವರ್ಷದಲ್ಲಿ ಎಷ್ಟು ನಿವೇಶನಗಳ ಮಾರಾಟವಾಗಿವೆ. ಅಧಿಕಾರಿಗಳು ಯಾರಿದ್ದರು ಎಂಬ ಕುರಿತ ಲಿಖಿತ ಮಾಹಿತಿ ಕಚೇರಿಗೆ ರವಾನಿಸಬೇಕು. ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದು ತಿಳಿದು ಬಂದರೆ ಕಾನೂನಿನ ಕ್ರಮ ಎದುರಿಸಲು ಪುರಸಭೆ ಅಧಿಕಾರಿಗಳು ಸಿದ್ಧವಾಗಿರಬೇಕಾಗುತ್ತದೆʼ ಎಂದು ಎಚ್ಚರಿಕೆ ನೀಡಿದರು.</p>.<p>ಪಟ್ಟಣದ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದ ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ಘಟಕಕ್ಕೆ ಬರುವ ವಾಹನಗಳ ಮಾಹಿತಿ ನೋಂದಣಿ ಪುಸಕ್ತದ ಬಗ್ಗೆ ವಿಚಾರಿಸಿದರು.</p>.<p>‘ಘಟಕದಲ್ಲಿ ತ್ಯಾಜ್ಯ ವಿಲೇವಾರಿ ಜೊತೆಗೆ ಪುರಸಭೆಗೆ ಆದಾಯ ಬರುವ ನಿಟ್ಟಿನಲ್ಲಿ ಕೆಲಸವನ್ನು ನಿರ್ವಹಿಸಬೇಕು. ಮುಕ್ತಿ ವಾಹನದ ಬಾಡಿಗೆ ಎಷ್ಟು?, ಮೇ ಹಾಗೂ ಜೂನ್ ತಿಂಗಳಲ್ಲಿ ಎಷ್ಟು ಬಾರಿ ಹೋಗಿದೆ ಎಂಬುದರ ಮಾಹಿತಿ ಕೇಳಿದಾಗ ಪುರಸಭೆ ಅಧಿಕಾರಿಗಳು ನಿರುತ್ತರವಾದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಲೋಕಾಯುಕ್ತ ಡಿವೈಎಸ್ಪಿ ʼಮುಕ್ತಿ ವಾಹನಕ್ಕೆ ಪುರಸಭೆ ಅಧಿಕಾರಿಗಳ ದೂರವಾಣಿ ಸಂಖ್ಯೆ ಹಾಗೂ ಮುಕ್ತಿ ವಾಹನದ ಬಗ್ಗೆ ಪ್ರಚಾರ ಮಾಡಿʼ ಎಂದರು.</p>.<p>ಇದಕ್ಕೂ ಮುನ್ನ ಪಟ್ಟಣದ ತಾಲ್ಲೂಕು ಪಂಚಾಯ್ತಿ ಕಾರ್ಯಾಲಯಕ್ಕೆ ಭೇಟಿ ನೀಡಿ ವಿವಿಧ ಕಡತಗಳ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಜೇಂದ್ರಗಡ: ಪಟ್ಟಣದ ಪುರಸಭೆ ಕಾರ್ಯಾಲಯಕ್ಕೆ ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ಗುರುವಾರ ದಿಢೀರ್ ಭೇಟಿ ನೀಡಿ ಜನನ-ಮರಣ ಹಾಗೂ ವಿಲೇವಾರಿಯಾಗದ ಕಡತಗಳ ಪರಿಶೀಲನೆ ನಡೆಸಿ, ಪುರಸಭೆ ಆವರಣದಲ್ಲಿ ನಿಂತಿದ್ದ ವಾಹನಗಳ ಪರಿಶೀಲಿಸಿ, ಮಳಿಗೆಗಳ ಬಗ್ಗೆ ಮಾಹಿತಿ ಪಡೆದರು.</p>.<p>ಪಟ್ಟಣದ ಪುರಸಭೆ ಆವರಣದಲ್ಲಿ ನಿಂತಿದ್ದ ವಾಹನಗಳ ಪರಿಶೀಲನೆ ವೇಳೆ ಪುರಸಭೆಯ ವಾನಹಗಳು ಸುಸ್ಥಿತಿಯಲ್ಲಿರುವುದರ ಜೊತೆಗೆ ಚಾಲಕರು ಕಡ್ಡಾಯವಾಗಿ ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು. ಕೆಟ್ಟು ನಿಂತಿದ್ದ ವಾಹನಗಳನ್ನು ಗುಜರಿಗೆ ಹಾಕುವ ಮುನ್ನ ಆರ್ಟಿಒ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸಕಾಲದಲ್ಲಿ ಅವಧಿ ಮೀರಿದರೂ ಸಹ ಕಡತಗಳನ್ನು ಪರಿಶೀಲಿಸಿ, ತ್ವರಿತಗತಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ತಾಕೀತು ಮಾಡಿದರು.</p>.<p>‘ಸಾರ್ವಜನಿಕರು ಸಮಸ್ಯೆಗಳ ಪರಿಹಾರಕ್ಕೆ ಅಲೆಯದಂತೆ ಕರ್ತವ್ಯ ನಿರ್ವಹಿಸಿ. ಪಟ್ಟಣದಲ್ಲಿ ನಿರ್ಮಾಣವಾಗುವ ಬಡಾವಣೆಯಲ್ಲಿ ನಿವೇಶನಗಳ ಮಾರಾಟ ಮಾಡಲು ಕಡ್ಡಾಯವಾಗಿ ವಿದ್ಯುತ್ ಕಂಬ, ಚರಂಡಿ, ನೀರಿನ ಸಂಪರ್ಕ ಸೇರಿದಂತೆ ಮೂಲಸೌಲಭ್ಯಗಳು ಹೊಂದಿರಬೇಕು. ಹೀಗಾಗಿ ಪಟ್ಟಣದಲ್ಲಿನ ಒಟ್ಟು ಬಡಾವಣೆಗಳ ಮಾಹಿತಿ, ಅಭಿವೃದ್ಧಿ ಹೊಂದದ ಬಡಾವಣೆಗಳ ಸಮಗ್ರ ಮಾಹಿತಿ ನೀಡುವುದರ ಜೊತೆಗೆ ಯಾವ ವರ್ಷದಲ್ಲಿ ಎಷ್ಟು ನಿವೇಶನಗಳ ಮಾರಾಟವಾಗಿವೆ. ಅಧಿಕಾರಿಗಳು ಯಾರಿದ್ದರು ಎಂಬ ಕುರಿತ ಲಿಖಿತ ಮಾಹಿತಿ ಕಚೇರಿಗೆ ರವಾನಿಸಬೇಕು. ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದು ತಿಳಿದು ಬಂದರೆ ಕಾನೂನಿನ ಕ್ರಮ ಎದುರಿಸಲು ಪುರಸಭೆ ಅಧಿಕಾರಿಗಳು ಸಿದ್ಧವಾಗಿರಬೇಕಾಗುತ್ತದೆʼ ಎಂದು ಎಚ್ಚರಿಕೆ ನೀಡಿದರು.</p>.<p>ಪಟ್ಟಣದ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದ ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ಘಟಕಕ್ಕೆ ಬರುವ ವಾಹನಗಳ ಮಾಹಿತಿ ನೋಂದಣಿ ಪುಸಕ್ತದ ಬಗ್ಗೆ ವಿಚಾರಿಸಿದರು.</p>.<p>‘ಘಟಕದಲ್ಲಿ ತ್ಯಾಜ್ಯ ವಿಲೇವಾರಿ ಜೊತೆಗೆ ಪುರಸಭೆಗೆ ಆದಾಯ ಬರುವ ನಿಟ್ಟಿನಲ್ಲಿ ಕೆಲಸವನ್ನು ನಿರ್ವಹಿಸಬೇಕು. ಮುಕ್ತಿ ವಾಹನದ ಬಾಡಿಗೆ ಎಷ್ಟು?, ಮೇ ಹಾಗೂ ಜೂನ್ ತಿಂಗಳಲ್ಲಿ ಎಷ್ಟು ಬಾರಿ ಹೋಗಿದೆ ಎಂಬುದರ ಮಾಹಿತಿ ಕೇಳಿದಾಗ ಪುರಸಭೆ ಅಧಿಕಾರಿಗಳು ನಿರುತ್ತರವಾದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಲೋಕಾಯುಕ್ತ ಡಿವೈಎಸ್ಪಿ ʼಮುಕ್ತಿ ವಾಹನಕ್ಕೆ ಪುರಸಭೆ ಅಧಿಕಾರಿಗಳ ದೂರವಾಣಿ ಸಂಖ್ಯೆ ಹಾಗೂ ಮುಕ್ತಿ ವಾಹನದ ಬಗ್ಗೆ ಪ್ರಚಾರ ಮಾಡಿʼ ಎಂದರು.</p>.<p>ಇದಕ್ಕೂ ಮುನ್ನ ಪಟ್ಟಣದ ತಾಲ್ಲೂಕು ಪಂಚಾಯ್ತಿ ಕಾರ್ಯಾಲಯಕ್ಕೆ ಭೇಟಿ ನೀಡಿ ವಿವಿಧ ಕಡತಗಳ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>