ಸುಧೀರ್ ಖಾಟಗೆ ಮಾತನಾಡಿ, ‘ಸೆ.24ರಂದು ಬೆಳಿಗ್ಗೆ 10.30ಕ್ಕೆ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಉಚಿನ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ ನಡೆಯಲಿದೆ. ಸೆ.25ರಂದು ಬೆಳಿಗ್ಗೆ 9ಕ್ಕೆ ಸತ್ಯನಾರಾಯಣ ಪೂಜೆ ಮತ್ತು ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ಸೆ.26ರಂದು ಸಂಜೆ 5ಕ್ಕೆ ಗಣಪತಿಗೆ 21 ದಿನ ಪೂಜಿಸಿದ ಹಣ್ಣು ಹಂಪಲ, ಅಂತರಕಾಯಿ, ಬಂಗಾರ, ಬೆಳ್ಳಿ ಆಭರಣಗಳು ಸವಾಲು ಕಾರ್ಯಕ್ರಮ ನಡೆಯಲಿದೆ. ಸೆ.27ರಂದು ಬೆಳಿಗ್ಗೆ 9ಕ್ಕೆ ಸಾಂಸ್ಕೃತಿಕ ಮೇಳದೊಂದಿದೆ ಭೀಷ್ಮ ಕೆರೆಯಲ್ಲಿ ಗಣಪತಿ ವಿಸರ್ಜನೆ ಮಾಡಲಾಗುವುದು’ ಎಂದು ತಿಳಿಸಿದರು.