ಪ್ರಾಂಶುಪಾಲ ಕೆ.ಎಚ್.ಓದುಗೌಡ ಮಾತನಾಡಿ, ‘ಡಾ. ಅರವಿಂದ ಕರಿನಾಗಣ್ಣವರ ಅವರು ಇವರೆಗೆ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ದುಶ್ಚಟಗಳಿಂದ ಮುಕ್ತರಾಗಿಸಿದ್ದಾರೆ. ಅವರ ಈ ಕೆಲಸಕ್ಕೆ ಭಾರತೀಯ ವೈದ್ಯಕೀಯ ಸಂಘವು ‘ಡಾ. ಕೇತನ ದೇಸಾಯಿ ಯುವ ನಾಯಕ ಪ್ರಶಸ್ತಿ’ ನೀಡಿ ಗೌರವಿಸಿದೆ’’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.