<p><strong>ಗದಗ:</strong> ‘ಮಾನವ ಕಳ್ಳಸಾಗಣೆ ಸಾಮಾಜಿಕ ಪಿಡುಗಾಗಿದ್ದು, ಅದನ್ನು ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಸವರಾಜ ತಿಳಿಸಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ನಡೆದ ಮಾನವ ಕಳ್ಳಸಾಗಣೆ ತಡೆ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>‘ಮಾನವ ಕಳ್ಳಸಾಗಣೆಗೆ ಬಡತನ, ಹೆಚ್ಚುತ್ತಿರುವ ವಲಸೆ, ಕುಟುಂಬದ ಸಮಸ್ಯೆ ಮೂಲ ಕಾರಣಗಳಾಗಿವೆ. ಲೈಂಗಿಕ ಶೋಷಣೆ, ಮಕ್ಕಳ ಭಿಕ್ಷಾಟನೆ, ಜೀತ ಪದ್ಧತಿ, ಬಾಲಕಾರ್ಮಿಕ, ಅಂಗಾಂಗ ಕಸಿ, ಬಾಲ್ಯ ವಿವಾಹ ಮುಂತಾದ ಕಾರಣಗಳಿಗಾಗಿ ಮಾನವ ಕಳ್ಳ ಸಾಗಣೆ ಮಾಡಲಾಗುತ್ತದೆ’ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿ, ‘ಮಾನವ ಕಳ್ಳ ಸಾಗಣೆಗೆ ಬಗ್ಗೆ ಕಾಲೇಜು ಯುವತಿಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಹೆಣ್ಣುಮಕ್ಕಳು ಯಾವುದೇ ಕಾರಣಕ್ಕೂ ಯಾರಿಂದಲೂ ಪ್ರಲೋಭನೆಗೆ ಒಳಗಾಗಬಾರದು. ಸಾಮಾಜಿಕ ಮಾಧ್ಯಮಗಳ ಆಕರ್ಷಣೆ ಮತ್ತು ಆಸ್ತಿ ಅಮಿಷಗಳಿಗೆ ಒಳಗಾಗಿ ಮೋಸಹೋಗಬಾರದು’ ಎಂದರು.</p>.<p>ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ, ‘ಮಾನವ ಕಳ್ಳ ಸಾಗಣೆ ತಡೆಗಟ್ಟಲು ಎಲ್ಲ ಇಲಾಖೆಗಳ ಅಧಿಕಾರಿಗಳು ಶ್ರಮಿಸುವುದರ ಜತೆಗೆ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಿಕೊಂಡು ಪ್ರತಿ ಎರಡು ತಿಂಗಳಿಗೊಮ್ಮೆ ಸಭೆ ನಡೆಸಿ ಚರ್ಚಿಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಜಾಗೃರಾಗಬೇಕು’ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಾನೂನು ಸಲಹೆಗಾರ ಎಸ್.ಜಿ.ಪಲ್ಲೇದ ಮಾತನಾಡಿದರು. ಮಾನವ ಕಳ್ಳ ಸಾಗಣೆಗೆ ಒಳಗಾಗಿ ಬಿಡುಗಡೆ ಹೊಂದಿದ ಸಿದ್ಧಪ್ಪ ತಮ್ಮ ಅನಿಸಿಕೆ ಹೇಳಿಕೊಂಡರು.</p>.<p>ಮಾನವ ಕಳ್ಳಸಾಗಣೆ ತಡೆ ಕುರಿತು ಮಕ್ಕಳ ರಕ್ಷಣಾ ಘಟಕದ ಮಲ್ಲಪ್ಪ ಹೊಸಳ್ಳಿ ಪ್ರತಿಜ್ಞಾವಿಧಿ ಬೋಧಿಸಿದರು. ಮಹಿಳಾ ಅಭಿವೃದ್ಧಿ ಅಧಿಕಾರಿ ಕಮಲಾ ‘ಬೇಟಿ ಬಚಾವೋ ಬೇಟಿ ಪಢಾವೋ’ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು. ಮಕ್ಕಳ ರಕ್ಷಣಾ ಘಟಕದ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಭರತ್ ಎಸ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ವಕೀಲರ ಸಂಘದ ಅಧ್ಯಕ್ಷ ಎಂ.ಐ. ಹಿರೇಮನಿ ಪಾಟೀಲ, ಡಿಡಿಪಿಯು ಜಿ.ಕುರ್ತಕೋಟಿ, ಡಿಡಿಪಿಐ ಎಂ.ಎ.ರಡ್ಡೇರ ಇದ್ದರು.</p>.<p>ಎಡಿಸಿ ಅನ್ನಪೂರ್ಣ ಎಂ. ಸ್ವಾಗತಿಸಿದರು. ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ರಫೀಕಾ ಹಳ್ಳೂರ ವಂದಿಸಿದರು.</p>.<p> <strong>‘ಸಂಘಟಿತ ಅಪರಾಧ: ಇರಲಿ ಎಚ್ಚರ’</strong> </p><p>‘ಮಾನವ ಕಳ್ಳಸಾಗಣೆಯು ಹಿಂದಿನಿಂದಲೂ ಇದೆ. ಇದೊಂದು ಸಂಘಟಿತವಾಗಿ ಮಾಡುವ ಅಪರಾಧವಾಗಿದ್ದು ಮಾರುಕಟ್ಟೆಯಲ್ಲಿ ಜಾನುವಾರು ಮಾರಾಟದಂತೆ ಮನುಷ್ಯರನ್ನು ಬಹಿರಂಗವಾಗಿ ಮಾರಲಾಗುತ್ತದೆ’ ಎಂದು ಸಂಪನ್ಮೂಲ ವ್ಯಕ್ತಿ ಮಂಜುನಾಥ ತಿಳಿಸಿದರು. ಆಧುನಿಕ ಕಾಲದಲ್ಲಿ ಮಾನವ ಕಳ್ಳ ಸಾಗಣೆ ಮಾಡಿ ಮಸಾಜ್ ಪಾರ್ಲರ್ ಬಾರ್ ಪಬ್ ಗಣಿಗಾರಿಕೆ ಕೃಷಿ ಚಟುವಟಿಕೆಗಳಾದ ಕಾಫಿ ರಬ್ಬರ್ ಎಸ್ಟೇಟ್ ಕೆಲಸಗಳಲ್ಲಿ ಬಳಕೆ ಮಾಡುತ್ತಾರೆ. ಕಾನೂನು ಬಾಹಿರವಾಗಿ ಇಚ್ಛೆಗೆ ವಿರುದ್ಧವಾಗಿ ಗೋಪ್ಯ ಸ್ಥಳಕ್ಕೆ ಸ್ಥಳಾಂತರಿಸಿ ಲೈಂಗಿಕವಾಗಿ ಅಶ್ಲೀಲವಾಗಿ ಬಳಸಿಕೊಳ್ಳುತ್ತಾರೆ. ಮಾನವ ಕಳ್ಳಸಾಗಣೆಗೆ ಹೆಚ್ಚಾಗಿ ಹದಿಹರೆಯದವರು ವಿಧವೆಯರು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವ ಅನಕ್ಷರಸ್ಥರು ನಿರುದ್ಯೋಗಿಗಳು ಸೇರಿದಂತೆ ಇಂದಿನ ಮಕ್ಕಳು ಸಾಮಾಜಿಕ ಜಾಲತಾಣದಲ್ಲಿ ಅಪರಿಚಿತರನ್ನು ನಂಬಿ ಬಲಿಪಶುಗಳಾಗುತ್ತಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ಮಾನವ ಕಳ್ಳಸಾಗಣೆ ಸಾಮಾಜಿಕ ಪಿಡುಗಾಗಿದ್ದು, ಅದನ್ನು ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಸವರಾಜ ತಿಳಿಸಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ನಡೆದ ಮಾನವ ಕಳ್ಳಸಾಗಣೆ ತಡೆ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>‘ಮಾನವ ಕಳ್ಳಸಾಗಣೆಗೆ ಬಡತನ, ಹೆಚ್ಚುತ್ತಿರುವ ವಲಸೆ, ಕುಟುಂಬದ ಸಮಸ್ಯೆ ಮೂಲ ಕಾರಣಗಳಾಗಿವೆ. ಲೈಂಗಿಕ ಶೋಷಣೆ, ಮಕ್ಕಳ ಭಿಕ್ಷಾಟನೆ, ಜೀತ ಪದ್ಧತಿ, ಬಾಲಕಾರ್ಮಿಕ, ಅಂಗಾಂಗ ಕಸಿ, ಬಾಲ್ಯ ವಿವಾಹ ಮುಂತಾದ ಕಾರಣಗಳಿಗಾಗಿ ಮಾನವ ಕಳ್ಳ ಸಾಗಣೆ ಮಾಡಲಾಗುತ್ತದೆ’ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿ, ‘ಮಾನವ ಕಳ್ಳ ಸಾಗಣೆಗೆ ಬಗ್ಗೆ ಕಾಲೇಜು ಯುವತಿಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಹೆಣ್ಣುಮಕ್ಕಳು ಯಾವುದೇ ಕಾರಣಕ್ಕೂ ಯಾರಿಂದಲೂ ಪ್ರಲೋಭನೆಗೆ ಒಳಗಾಗಬಾರದು. ಸಾಮಾಜಿಕ ಮಾಧ್ಯಮಗಳ ಆಕರ್ಷಣೆ ಮತ್ತು ಆಸ್ತಿ ಅಮಿಷಗಳಿಗೆ ಒಳಗಾಗಿ ಮೋಸಹೋಗಬಾರದು’ ಎಂದರು.</p>.<p>ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ, ‘ಮಾನವ ಕಳ್ಳ ಸಾಗಣೆ ತಡೆಗಟ್ಟಲು ಎಲ್ಲ ಇಲಾಖೆಗಳ ಅಧಿಕಾರಿಗಳು ಶ್ರಮಿಸುವುದರ ಜತೆಗೆ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಿಕೊಂಡು ಪ್ರತಿ ಎರಡು ತಿಂಗಳಿಗೊಮ್ಮೆ ಸಭೆ ನಡೆಸಿ ಚರ್ಚಿಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಜಾಗೃರಾಗಬೇಕು’ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಾನೂನು ಸಲಹೆಗಾರ ಎಸ್.ಜಿ.ಪಲ್ಲೇದ ಮಾತನಾಡಿದರು. ಮಾನವ ಕಳ್ಳ ಸಾಗಣೆಗೆ ಒಳಗಾಗಿ ಬಿಡುಗಡೆ ಹೊಂದಿದ ಸಿದ್ಧಪ್ಪ ತಮ್ಮ ಅನಿಸಿಕೆ ಹೇಳಿಕೊಂಡರು.</p>.<p>ಮಾನವ ಕಳ್ಳಸಾಗಣೆ ತಡೆ ಕುರಿತು ಮಕ್ಕಳ ರಕ್ಷಣಾ ಘಟಕದ ಮಲ್ಲಪ್ಪ ಹೊಸಳ್ಳಿ ಪ್ರತಿಜ್ಞಾವಿಧಿ ಬೋಧಿಸಿದರು. ಮಹಿಳಾ ಅಭಿವೃದ್ಧಿ ಅಧಿಕಾರಿ ಕಮಲಾ ‘ಬೇಟಿ ಬಚಾವೋ ಬೇಟಿ ಪಢಾವೋ’ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು. ಮಕ್ಕಳ ರಕ್ಷಣಾ ಘಟಕದ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಭರತ್ ಎಸ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ವಕೀಲರ ಸಂಘದ ಅಧ್ಯಕ್ಷ ಎಂ.ಐ. ಹಿರೇಮನಿ ಪಾಟೀಲ, ಡಿಡಿಪಿಯು ಜಿ.ಕುರ್ತಕೋಟಿ, ಡಿಡಿಪಿಐ ಎಂ.ಎ.ರಡ್ಡೇರ ಇದ್ದರು.</p>.<p>ಎಡಿಸಿ ಅನ್ನಪೂರ್ಣ ಎಂ. ಸ್ವಾಗತಿಸಿದರು. ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ರಫೀಕಾ ಹಳ್ಳೂರ ವಂದಿಸಿದರು.</p>.<p> <strong>‘ಸಂಘಟಿತ ಅಪರಾಧ: ಇರಲಿ ಎಚ್ಚರ’</strong> </p><p>‘ಮಾನವ ಕಳ್ಳಸಾಗಣೆಯು ಹಿಂದಿನಿಂದಲೂ ಇದೆ. ಇದೊಂದು ಸಂಘಟಿತವಾಗಿ ಮಾಡುವ ಅಪರಾಧವಾಗಿದ್ದು ಮಾರುಕಟ್ಟೆಯಲ್ಲಿ ಜಾನುವಾರು ಮಾರಾಟದಂತೆ ಮನುಷ್ಯರನ್ನು ಬಹಿರಂಗವಾಗಿ ಮಾರಲಾಗುತ್ತದೆ’ ಎಂದು ಸಂಪನ್ಮೂಲ ವ್ಯಕ್ತಿ ಮಂಜುನಾಥ ತಿಳಿಸಿದರು. ಆಧುನಿಕ ಕಾಲದಲ್ಲಿ ಮಾನವ ಕಳ್ಳ ಸಾಗಣೆ ಮಾಡಿ ಮಸಾಜ್ ಪಾರ್ಲರ್ ಬಾರ್ ಪಬ್ ಗಣಿಗಾರಿಕೆ ಕೃಷಿ ಚಟುವಟಿಕೆಗಳಾದ ಕಾಫಿ ರಬ್ಬರ್ ಎಸ್ಟೇಟ್ ಕೆಲಸಗಳಲ್ಲಿ ಬಳಕೆ ಮಾಡುತ್ತಾರೆ. ಕಾನೂನು ಬಾಹಿರವಾಗಿ ಇಚ್ಛೆಗೆ ವಿರುದ್ಧವಾಗಿ ಗೋಪ್ಯ ಸ್ಥಳಕ್ಕೆ ಸ್ಥಳಾಂತರಿಸಿ ಲೈಂಗಿಕವಾಗಿ ಅಶ್ಲೀಲವಾಗಿ ಬಳಸಿಕೊಳ್ಳುತ್ತಾರೆ. ಮಾನವ ಕಳ್ಳಸಾಗಣೆಗೆ ಹೆಚ್ಚಾಗಿ ಹದಿಹರೆಯದವರು ವಿಧವೆಯರು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವ ಅನಕ್ಷರಸ್ಥರು ನಿರುದ್ಯೋಗಿಗಳು ಸೇರಿದಂತೆ ಇಂದಿನ ಮಕ್ಕಳು ಸಾಮಾಜಿಕ ಜಾಲತಾಣದಲ್ಲಿ ಅಪರಿಚಿತರನ್ನು ನಂಬಿ ಬಲಿಪಶುಗಳಾಗುತ್ತಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>