<p>ಗದಗ: ‘ವಿದ್ಯಾರ್ಥಿಗಳು ಶಾಲೆಗೆ ಹೋಗಿ ವಿದ್ಯೆ ಕಲಿಯುವುದು ಎಷ್ಟು ಮುಖ್ಯವೋ ಅದರ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅಷ್ಟೇ ಮುಖ್ಯವಾಗಿದೆ’ ಎಂದು ಜೇಸಿ ಪ್ರೌಢಶಾಲೆಯ ಚೇರಮನ್ ಆರ್.ಕೆ.ಹಬೀಬ ಹೇಳಿದರು.</p>.<p>ನಗರದ ಜೇಸಿ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ಕಲಾ, ವಿಜ್ಞಾನ, ಕ್ರೀಡಾ ಹಾಗೂ ಯೋಗಾ ಸಂಘಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿ ಜೀವನದಲ್ಲಿಯೇ ಸಂಗೀತ, ನೃತ್ಯ, ಕ್ರೀಡೆ, ಚಿತ್ರಕಲೆ ಮುಂತಾದ ಸಹಪಠ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಸತತ ಪ್ರಯತ್ನದಿಂದ ಸಾಧನೆಯ ಮಾರ್ಗ ಸುಲಭವಾಗುತ್ತದೆ’ ಎಂದರು.</p>.<p>‘ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಹುದುಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಕಲಾವಿಭಾಗದ ಚಟುವಟಿಕೆಗಳು ಉತ್ತಮ ಅವಕಾಶ ಒದಗಿಸಬಲ್ಲ ವೇದಿಕೆಯಾಗಿದೆ. ಅಷ್ಟೇ ಅಲ್ಲದೆ ನಮ್ಮ ಪುರಾತನ ಸಂಪ್ರದಾಯಿಕ ಜಾನಪದ ಹಾಡುಗಳನ್ನು ಕಲಿಯಬೇಕು, ಅವುಗಳನ್ನು ಉಳಿಸಿ ಬೆಳೆಸಬೇಕು’ ಎಂದರು.</p>.<p>ಪ್ರಾಚಾರ್ಯೆ ಜಯಶ್ರೀ ಮಡಿವಾಳರ ಮಾತನಾಡಿದರು.</p>.<p>ಅನ್ನಪೂರ್ಣಾ ಬ್ಯಾಹಟ್ಟಿ, ಸುಧಾ ವಾದೋನೆ, ರೆಹಾನಾ ನದಾಫ್, ಕವಿತಾ ಕೆ, ದಾನಮ್ಮಾ ತೆಗ್ಗಿನಕೇರಿ, ಮಹೇಶ್ ಸಂದಿಗೋಡ, ಕೆ. ಎಚ್. ಪೂಜಾರ, ಗೀತಾ ಪವಾರ, ಮಂಜುಳಾ ಬುಳ್ಳಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ‘ವಿದ್ಯಾರ್ಥಿಗಳು ಶಾಲೆಗೆ ಹೋಗಿ ವಿದ್ಯೆ ಕಲಿಯುವುದು ಎಷ್ಟು ಮುಖ್ಯವೋ ಅದರ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅಷ್ಟೇ ಮುಖ್ಯವಾಗಿದೆ’ ಎಂದು ಜೇಸಿ ಪ್ರೌಢಶಾಲೆಯ ಚೇರಮನ್ ಆರ್.ಕೆ.ಹಬೀಬ ಹೇಳಿದರು.</p>.<p>ನಗರದ ಜೇಸಿ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ಕಲಾ, ವಿಜ್ಞಾನ, ಕ್ರೀಡಾ ಹಾಗೂ ಯೋಗಾ ಸಂಘಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿ ಜೀವನದಲ್ಲಿಯೇ ಸಂಗೀತ, ನೃತ್ಯ, ಕ್ರೀಡೆ, ಚಿತ್ರಕಲೆ ಮುಂತಾದ ಸಹಪಠ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಸತತ ಪ್ರಯತ್ನದಿಂದ ಸಾಧನೆಯ ಮಾರ್ಗ ಸುಲಭವಾಗುತ್ತದೆ’ ಎಂದರು.</p>.<p>‘ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಹುದುಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಕಲಾವಿಭಾಗದ ಚಟುವಟಿಕೆಗಳು ಉತ್ತಮ ಅವಕಾಶ ಒದಗಿಸಬಲ್ಲ ವೇದಿಕೆಯಾಗಿದೆ. ಅಷ್ಟೇ ಅಲ್ಲದೆ ನಮ್ಮ ಪುರಾತನ ಸಂಪ್ರದಾಯಿಕ ಜಾನಪದ ಹಾಡುಗಳನ್ನು ಕಲಿಯಬೇಕು, ಅವುಗಳನ್ನು ಉಳಿಸಿ ಬೆಳೆಸಬೇಕು’ ಎಂದರು.</p>.<p>ಪ್ರಾಚಾರ್ಯೆ ಜಯಶ್ರೀ ಮಡಿವಾಳರ ಮಾತನಾಡಿದರು.</p>.<p>ಅನ್ನಪೂರ್ಣಾ ಬ್ಯಾಹಟ್ಟಿ, ಸುಧಾ ವಾದೋನೆ, ರೆಹಾನಾ ನದಾಫ್, ಕವಿತಾ ಕೆ, ದಾನಮ್ಮಾ ತೆಗ್ಗಿನಕೇರಿ, ಮಹೇಶ್ ಸಂದಿಗೋಡ, ಕೆ. ಎಚ್. ಪೂಜಾರ, ಗೀತಾ ಪವಾರ, ಮಂಜುಳಾ ಬುಳ್ಳಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>