<p><strong>ಗಜೇಂದ್ರಗಡ</strong>: ‘ನರೇಗಾ ಯೋಜನೆ ಅಡಿಯಲ್ಲಿ ಬೇಡಿಕೆಯಾಧಾರಿತ ಕೂಲಿಕಾರರಿಗೆ ಕೆಲಸ ನೀಡಿ. ಕೂಲಿಕಾರರಿಗೆ ಅಳತೆಗೆ ತಕ್ಕಂತೆ ಕಟ್ಟೆ (ಪಡ) ಕಡಿಯುವಂತೆ ಸೂಚಿಸುವುದರ ಜೊತೆಗೆ ಅಳತೆಗೆ ತಕ್ಕಂತೆ ಕೂಲಿ ಪಾವತಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್. ಹೇಳಿದರು.</p>.<p>ಸಮೀಪದ ಚಿಲಝರಿಯಲ್ಲಿ ಗುರುವಾರ ನರೇಗಾ ಯೋಜನೆಯಡಿ ಸಾಮೂಹಿಕ ಬದು ನಿರ್ಮಾಣ ಕಾಮಗಾರಿ ವೀಕ್ಷಿಸಿ ನಂತರ ಅವರು ಮಾತನಾಡಿದರು.</p>.<p>‘ಗ್ರಾಮೀಣ ಪ್ರದೇಶದ ಜನರಿಗೆ ನರೇಗಾ ಯೋಜನೆ ವರದಾನವಾಗಿದ್ದು, ಕೆಲಸಕ್ಕೆ ಬರುವ ಕೂಲಿಕಾರರಿಗೆ ಸರಿಯಾಗಿ ಎನ್.ಎಂ.ಎಂ.ಎಸ್ ಮೂಲಕ ಹಾಜರಾತಿ ಹಾಕಿ, ಪ್ರಾಮಾಣಿಕವಾಗಿ ಕೆಲಸ ಮಾಡಿದ ಕೂಲಿಕಾರರಿಗೆ ಸರಿಯಾಗಿ ಕೂಲಿ ಪಾವತಿಸಬೇಕು’ ಎಂದರು.</p>.<p>ತಾಲ್ಲೂಕಿನ ವಿವಿಧ ಕಾಮಗಾರಿಗಳ ವೀಕ್ಷಣೆ:</p>.<p>ಶಾಂತಗೇರಿ ಗ್ರಾಮ ಸಾಮೂಹಿಕ ಬದುವು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೂಲಿಕಾರರ ಸಂಖ್ಯೆ, ಹಾಜರಾತಿ, ಎನ್.ಎಂ.ಆರ್ ಹಾಜರಾತಿ, ಕೂಲಿಕಾರರು ಗೈರು ಕುರಿತು ಪರಿಶೀಲಿಸಿದರು. ಬಳಿಕ ಕಾಮಗಾರಿ ವೀಕ್ಷಿಸಿದರು.</p>.<p>ಮುಶೀಗೇರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನೆಲ್ಲೂರು ಸಸ್ಯ ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಸಸಿಗಳನ್ನು ಬೆಳೆಸಿ, ನಿರ್ವಹಣೆ ಮಾಡುತ್ತಿರುವ ಕುರಿತು ಮಾಹಿತಿ ಪಡೆದುಕೊಂಡರು. ನರೇಗಾ ಯೋಜನೆಯಡಿ ರಸ್ತೆ ಬದಿ ನೆಡುತೋಪಿಗೆ 9000 ಸಸಿಗಳು, ಶಾಲಾ-ಕಾಲೇಜು, ಸಂಘ-ಸಂಸ್ಥೆಗಳಿಗೆ 7500, ರೈತರಿಗಾಗಿ 25000 ಸಸಿಗಳು ವಿತರಿಸಲು ಸಿದ್ದವಾಗಿವೆ ಎಂದು ಆರ್.ಎಫ್.ಒ ಮಾಹಿತಿ ನೀಡಿದರು.</p>.<p>ಸಮೀಪದ ಸೂಡಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಗಜೇಂದ್ರಗಡದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ದಾಸ್ತಾನು, ಹೆರಿಗೆ, ಒಳರೋಗಿಗಳ ಕೊಠಡಿ, ಔಷಧಿ ಕೊಠಡಿ ಸೇರಿದಂತೆ ಆಸ್ಪತ್ರೆಗಳ ದಾಖಲೆಗಳನ್ನು ಪರಿಶೀಲಿಸಿದರು. ನಂತರ ರೋಗಿಗಳ ಕುಂದು ಕೊರತೆಗಳನ್ನು ಆಲಿಸಿದರು.</p>.<p>ರೋಗಿಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮವಹಿಸಿ ಚಿಕಿತ್ಸೆ ಒದಗಿಸಬೇಕು. ಪ್ರತಿ ಗುರುವಾರ ವೈದ್ಯರು ಇಡೀ ದಿನ ಆಸ್ಪತ್ರೆಯಲ್ಲಿ ಇದ್ದು ರೋಗಿಗಳಿಗೆ ಚಿಕಿತ್ಸೆ ನೀಡಬೇಕು ಎಂದು ವೈದ್ಯರಿಗೆ ತಿಳಿಸಿದರು.</p>.<p>ತಾಲ್ಲೂಕು ಪಂಚಾಯ್ತಿ ಇಒ ಬಸವರಾಜ ಬಡಿಗೇರ, ಜಿಲ್ಲಾ ಸಹಾಯಕ ಸಮನ್ವಯ ಸಂಯೋಜಕ ಕಿರಣಕುಮಾರ, ಸಾಮಾಜಿಕ ಅರಣ್ಯ ಇಲಾಖೆಯ ಆರ್.ಎಫ್.ಒ ರಾಮಣ್ಣ ಪೂಜಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಜೇಂದ್ರಗಡ</strong>: ‘ನರೇಗಾ ಯೋಜನೆ ಅಡಿಯಲ್ಲಿ ಬೇಡಿಕೆಯಾಧಾರಿತ ಕೂಲಿಕಾರರಿಗೆ ಕೆಲಸ ನೀಡಿ. ಕೂಲಿಕಾರರಿಗೆ ಅಳತೆಗೆ ತಕ್ಕಂತೆ ಕಟ್ಟೆ (ಪಡ) ಕಡಿಯುವಂತೆ ಸೂಚಿಸುವುದರ ಜೊತೆಗೆ ಅಳತೆಗೆ ತಕ್ಕಂತೆ ಕೂಲಿ ಪಾವತಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್. ಹೇಳಿದರು.</p>.<p>ಸಮೀಪದ ಚಿಲಝರಿಯಲ್ಲಿ ಗುರುವಾರ ನರೇಗಾ ಯೋಜನೆಯಡಿ ಸಾಮೂಹಿಕ ಬದು ನಿರ್ಮಾಣ ಕಾಮಗಾರಿ ವೀಕ್ಷಿಸಿ ನಂತರ ಅವರು ಮಾತನಾಡಿದರು.</p>.<p>‘ಗ್ರಾಮೀಣ ಪ್ರದೇಶದ ಜನರಿಗೆ ನರೇಗಾ ಯೋಜನೆ ವರದಾನವಾಗಿದ್ದು, ಕೆಲಸಕ್ಕೆ ಬರುವ ಕೂಲಿಕಾರರಿಗೆ ಸರಿಯಾಗಿ ಎನ್.ಎಂ.ಎಂ.ಎಸ್ ಮೂಲಕ ಹಾಜರಾತಿ ಹಾಕಿ, ಪ್ರಾಮಾಣಿಕವಾಗಿ ಕೆಲಸ ಮಾಡಿದ ಕೂಲಿಕಾರರಿಗೆ ಸರಿಯಾಗಿ ಕೂಲಿ ಪಾವತಿಸಬೇಕು’ ಎಂದರು.</p>.<p>ತಾಲ್ಲೂಕಿನ ವಿವಿಧ ಕಾಮಗಾರಿಗಳ ವೀಕ್ಷಣೆ:</p>.<p>ಶಾಂತಗೇರಿ ಗ್ರಾಮ ಸಾಮೂಹಿಕ ಬದುವು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೂಲಿಕಾರರ ಸಂಖ್ಯೆ, ಹಾಜರಾತಿ, ಎನ್.ಎಂ.ಆರ್ ಹಾಜರಾತಿ, ಕೂಲಿಕಾರರು ಗೈರು ಕುರಿತು ಪರಿಶೀಲಿಸಿದರು. ಬಳಿಕ ಕಾಮಗಾರಿ ವೀಕ್ಷಿಸಿದರು.</p>.<p>ಮುಶೀಗೇರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನೆಲ್ಲೂರು ಸಸ್ಯ ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಸಸಿಗಳನ್ನು ಬೆಳೆಸಿ, ನಿರ್ವಹಣೆ ಮಾಡುತ್ತಿರುವ ಕುರಿತು ಮಾಹಿತಿ ಪಡೆದುಕೊಂಡರು. ನರೇಗಾ ಯೋಜನೆಯಡಿ ರಸ್ತೆ ಬದಿ ನೆಡುತೋಪಿಗೆ 9000 ಸಸಿಗಳು, ಶಾಲಾ-ಕಾಲೇಜು, ಸಂಘ-ಸಂಸ್ಥೆಗಳಿಗೆ 7500, ರೈತರಿಗಾಗಿ 25000 ಸಸಿಗಳು ವಿತರಿಸಲು ಸಿದ್ದವಾಗಿವೆ ಎಂದು ಆರ್.ಎಫ್.ಒ ಮಾಹಿತಿ ನೀಡಿದರು.</p>.<p>ಸಮೀಪದ ಸೂಡಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಗಜೇಂದ್ರಗಡದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ದಾಸ್ತಾನು, ಹೆರಿಗೆ, ಒಳರೋಗಿಗಳ ಕೊಠಡಿ, ಔಷಧಿ ಕೊಠಡಿ ಸೇರಿದಂತೆ ಆಸ್ಪತ್ರೆಗಳ ದಾಖಲೆಗಳನ್ನು ಪರಿಶೀಲಿಸಿದರು. ನಂತರ ರೋಗಿಗಳ ಕುಂದು ಕೊರತೆಗಳನ್ನು ಆಲಿಸಿದರು.</p>.<p>ರೋಗಿಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮವಹಿಸಿ ಚಿಕಿತ್ಸೆ ಒದಗಿಸಬೇಕು. ಪ್ರತಿ ಗುರುವಾರ ವೈದ್ಯರು ಇಡೀ ದಿನ ಆಸ್ಪತ್ರೆಯಲ್ಲಿ ಇದ್ದು ರೋಗಿಗಳಿಗೆ ಚಿಕಿತ್ಸೆ ನೀಡಬೇಕು ಎಂದು ವೈದ್ಯರಿಗೆ ತಿಳಿಸಿದರು.</p>.<p>ತಾಲ್ಲೂಕು ಪಂಚಾಯ್ತಿ ಇಒ ಬಸವರಾಜ ಬಡಿಗೇರ, ಜಿಲ್ಲಾ ಸಹಾಯಕ ಸಮನ್ವಯ ಸಂಯೋಜಕ ಕಿರಣಕುಮಾರ, ಸಾಮಾಜಿಕ ಅರಣ್ಯ ಇಲಾಖೆಯ ಆರ್.ಎಫ್.ಒ ರಾಮಣ್ಣ ಪೂಜಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>