ಲಕ್ಷ್ಮೇಶ್ವರದ ನಿಲ್ದಾಣದಲ್ಲಿ ಬಸ್ಗಾಗಿ ಕಾಯಿತ್ತಿರುವ ಪ್ರಯಾಣಿಕರು
ಪ್ರತಿದಿನ ಬೆಳಿಗ್ಗೆ ಲಕ್ಷ್ಮೇಶ್ವರದಿಂದ ಸವಣೂರು ಕಡೆ ಹೋಗಲು ಬಸ್ ವ್ಯವಸ್ಥೆ ಇಲ್ಲ. ಹೀಗಾಗಿ ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ. ಆದಷ್ಟು ಬೇಗ ಸಮಸ್ಯೆ ಬಗೆ ಹರಿಸಬೇಕು.
ಕುಮಾರ ಬಾಳೇಶ್ವರಮಠ ಶಿಕ್ಷಕ ಲಕ್ಷ್ಮೇಶ್ವರ
ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದಿರುವುದು ಜನರಿಗೆ ಅನುಕೂಲವಾಗಿದೆ. ಆದರೆ ಅದಕ್ಕೆ ತಕ್ಕಂತೆ ಹೆಚ್ಚಿನ ಬಸ್ ಮತ್ತು ಸಿಬ್ಬಂದಿ ವ್ಯವಸ್ಥೆ ಮಾಡಬೇಕಾಗಿತ್ತು. ಕೇವಲ ಪ್ರಚಾರಕ್ಕಾಗಿ ಯೋಜನೆ ಎನ್ನುವಂತಾಗಿದೆ.
ಸೋಮಣ್ಣ ಡಾಣಗಲ್ಲ ಸಾಮಾಜಿಕ ಕಾರ್ಯಕರ್ತ ಶಿಗ್ಲಿ
ಕೆಲವು ದಿನಗಳಿಂದ ನಮ್ಮ ತಾಲ್ಲೂಕಿನಲ್ಲಿ ಸರಿಯಾಗಿ ಬಸ್ ಸಂಚರಿಸುತ್ತಿಲ್ಲ. ಹೀಗಾಗಿ ಗ್ರಾಮೀಣ ಭಾಗದ ಜನರಿಗೆ ಮತ್ತು ಶಾಲೆ– ಕಾಲೇಜು ಮಕ್ಕಳಿಗೆ ಬಹಳಷ್ಟು ತೊಂದರೆ ಉಂಟಾಗಿದೆ.
ವಿರೂಪಾಕ್ಷಪ್ಪ ಮುದಕಣ್ಣವರ ಹುಲ್ಲೂರು ಗ್ರಾಮದ ನಿವಾಸಿ
ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಸರಿಯಾಗಿ ಬಸ್ಗಳ ಓಡುತ್ತಿಲ್ಲ. ಅಧಿಕಾರಿಗಳು ಮತ್ತು ಸಿಬ್ಬಂದಿ ನಡುವೆ ಹೊಂದಾಣಿಕೆಯ ಕೊರತೆ ಇರಬಹುದು. ಹೀಗಾಗಿ ಬಸ್ ಸಂಚಾರದಲ್ಲಿ ಸಮಸ್ಯೆ ಇದೆ.
ಚಂದ್ರು ತಳವಾರ ಗೋವನಾಳ ಗ್ರಾಮದ ನಿವಾಸಿ
ಗ್ರಾಮೀಣ ಪ್ರದೇಶಗಳಿಗೆ ಸರಿಯಾಗಿ ಸೇವೆ ಕೊಡಬೇಕಾದರೆ ಘಟಕದಲ್ಲಿ ಸಾಕಷ್ಟು ಬಸ್ಗಳು ಇಲ್ಲ. ಅಲ್ಲದೇ ತಾಲ್ಲೂಕಿನಲ್ಲಿ ಬಹುತೇಕ ಮುಖ್ಯ ರಸ್ತೆಗಳು ಗುಂಡಿ ಬಿದ್ದು ಹಾಳಾಗಿವೆ. ಈ ರಸ್ತೆಯಲ್ಲಿ ಬಸ್ ಸಂಚರಿಸಿದರೆ ಪದೇ ಪದೇ ಹಾಳಾಗುತ್ತಿವೆ. ಅಗತ್ಯ ಸಿಬ್ಬಂದಿ ಇಲ್ಲ. ಇದು ಸಮಸ್ಯೆಗೆ ಕಾರಣವಾಗಿದೆ