<p><strong>ಗಜೇಂದ್ರಗಡ:</strong> ಸಮೀಪದ ಜಿಗೇರಿ ಗ್ರಾಮದ ಜಮೀನಿನಲ್ಲಿ ಫೆ.12 ರಂದು ಮೂವರು ಯುವಕರ ಮೇಲೆ ಚಿರತೆ ದಾಳಿ ಮಾಡಿದ್ದ ಹಿನ್ನೆಲೆಯಲ್ಲಿ ಸೋಮವಾರ ಉಪಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ ಮೀನಾ (ಐಎಫ್ಎಸ್) ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಚಿರತೆ ದಾಳಿ ನಡೆಸಿದ ಸ್ಥಳ ಹಾಗೂ ಚಿರತೆ ಸೆರೆ ಹಿಡಿಯಲು ಜಿಗೇರಿ ಗ್ರಾಮದಲ್ಲಿ ಎರಡು ಹಾಗೂ ನಾಗೇಂದ್ರಗಡ ಗ್ರಾಮದಲ್ಲಿ ಅಳವಡಿಸಿರುವ ಒಂದು ಬೋನು ಪರಿಶೀಲಿಸಿದರು. ಬಳಿಕ ಇಲಾಖೆಯ ಸ್ಥಳೀಯ ಅಧಿಕಾರಿಗಳಿಂದ ಕಾರ್ಯಾಚರಣೆಯ ಮಾಹಿತಿ ಪಡೆದರು.</p>.<p>ಬಳಿಕ ಮಾತನಾಡಿದ ಅವರು, ‘ಚಿರತೆ ಸೆರೆ ಹಿಡಿಯಲು ಈಗಾಗಲೇ ಗಸ್ತು ನಡೆಸುತ್ತಿರುವ ತಂಡಕ್ಕೆ ಅಗತ್ಯ ಬಿದ್ದರೆ ಹೆಚ್ಚುವರಿ ಸಿಬ್ಬಂದಿ ನೀಡಲಾಗುವುದು. ಚಿರತೆ ದಾಳಿ ಮುಂದುವರಿದರೆ ಮೈಸೂರಿನಿಂದ ಚಿರತೆ ಹಿಡಿಯುವ ವಿಶೇಷ ತಂಡ ಕರೆಸಲು ಈಗಾಗಲೇ ಸಿದ್ದತೆ ಮಾಡಿಕೊಳ್ಳಲಾಗಿದೆ’ ಎಂದರು.</p>.<p>ಇದೇ ವೇಳೆ ತೋಟದಲ್ಲಿನ ಮನೆಗಳಿಗೆ ರಾತ್ರಿ ಸಮಯದಲ್ಲಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಹೆಸ್ಕಾಂ ಎಂ.ಡಿ ಅವರಿಗೆ ಕರೆ ಮಾಡಿ ತಿಳಿಸಿದರು.</p>.<p>ಗದಗ ವಲಯ ಅರಣ್ಯಾಧಿಕಾರಿ ಮಂಜುನಾಥ ಮೇಗಳಮನಿ, ಗಜೇಂದ್ರಗಡ ಉಪ ವಲಯ ಅರಣ್ಯಾಧಿಕಾರಿ ಪ್ರವೀಣಕುಮಾರ ಸಾಸ್ವಿಹಳ್ಳಿ, ಜಿಗೇರಿ ಗ್ರಾಮದ ಅರ್ಜುನ ರಾಠೋಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಜೇಂದ್ರಗಡ:</strong> ಸಮೀಪದ ಜಿಗೇರಿ ಗ್ರಾಮದ ಜಮೀನಿನಲ್ಲಿ ಫೆ.12 ರಂದು ಮೂವರು ಯುವಕರ ಮೇಲೆ ಚಿರತೆ ದಾಳಿ ಮಾಡಿದ್ದ ಹಿನ್ನೆಲೆಯಲ್ಲಿ ಸೋಮವಾರ ಉಪಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ ಮೀನಾ (ಐಎಫ್ಎಸ್) ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಚಿರತೆ ದಾಳಿ ನಡೆಸಿದ ಸ್ಥಳ ಹಾಗೂ ಚಿರತೆ ಸೆರೆ ಹಿಡಿಯಲು ಜಿಗೇರಿ ಗ್ರಾಮದಲ್ಲಿ ಎರಡು ಹಾಗೂ ನಾಗೇಂದ್ರಗಡ ಗ್ರಾಮದಲ್ಲಿ ಅಳವಡಿಸಿರುವ ಒಂದು ಬೋನು ಪರಿಶೀಲಿಸಿದರು. ಬಳಿಕ ಇಲಾಖೆಯ ಸ್ಥಳೀಯ ಅಧಿಕಾರಿಗಳಿಂದ ಕಾರ್ಯಾಚರಣೆಯ ಮಾಹಿತಿ ಪಡೆದರು.</p>.<p>ಬಳಿಕ ಮಾತನಾಡಿದ ಅವರು, ‘ಚಿರತೆ ಸೆರೆ ಹಿಡಿಯಲು ಈಗಾಗಲೇ ಗಸ್ತು ನಡೆಸುತ್ತಿರುವ ತಂಡಕ್ಕೆ ಅಗತ್ಯ ಬಿದ್ದರೆ ಹೆಚ್ಚುವರಿ ಸಿಬ್ಬಂದಿ ನೀಡಲಾಗುವುದು. ಚಿರತೆ ದಾಳಿ ಮುಂದುವರಿದರೆ ಮೈಸೂರಿನಿಂದ ಚಿರತೆ ಹಿಡಿಯುವ ವಿಶೇಷ ತಂಡ ಕರೆಸಲು ಈಗಾಗಲೇ ಸಿದ್ದತೆ ಮಾಡಿಕೊಳ್ಳಲಾಗಿದೆ’ ಎಂದರು.</p>.<p>ಇದೇ ವೇಳೆ ತೋಟದಲ್ಲಿನ ಮನೆಗಳಿಗೆ ರಾತ್ರಿ ಸಮಯದಲ್ಲಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಹೆಸ್ಕಾಂ ಎಂ.ಡಿ ಅವರಿಗೆ ಕರೆ ಮಾಡಿ ತಿಳಿಸಿದರು.</p>.<p>ಗದಗ ವಲಯ ಅರಣ್ಯಾಧಿಕಾರಿ ಮಂಜುನಾಥ ಮೇಗಳಮನಿ, ಗಜೇಂದ್ರಗಡ ಉಪ ವಲಯ ಅರಣ್ಯಾಧಿಕಾರಿ ಪ್ರವೀಣಕುಮಾರ ಸಾಸ್ವಿಹಳ್ಳಿ, ಜಿಗೇರಿ ಗ್ರಾಮದ ಅರ್ಜುನ ರಾಠೋಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>