ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದುರಸ್ತಿಗೆ ಕಾದಿರುವ ಮುಂಡರಗಿ ರಸ್ತೆಗಳು

Published : 22 ಆಗಸ್ಟ್ 2024, 4:42 IST
Last Updated : 22 ಆಗಸ್ಟ್ 2024, 4:42 IST
ಫಾಲೋ ಮಾಡಿ
Comments
ಸದಾ ಕೆಸರಿನಿಂದ ಆವೃತ್ತವಾಗಿರುವ ಮುಂಡರಗಿ ತಾಲ್ಲೂಕಿನ ಜಾಲವಾಡಿಗೆ ರಸ್ತೆ
ಸದಾ ಕೆಸರಿನಿಂದ ಆವೃತ್ತವಾಗಿರುವ ಮುಂಡರಗಿ ತಾಲ್ಲೂಕಿನ ಜಾಲವಾಡಿಗೆ ರಸ್ತೆ
ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮುಂಡರಗಿ ತಾಲ್ಲೂಕಿನ ಬೆಣ್ಣಿಹಳ್ಳಿ–ಬೀಡನಾಳ ರಸ್ತೆ
ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮುಂಡರಗಿ ತಾಲ್ಲೂಕಿನ ಬೆಣ್ಣಿಹಳ್ಳಿ–ಬೀಡನಾಳ ರಸ್ತೆ
ರಸ್ತೆ ಅವಸ್ಥೆ
ರಸ್ತೆ ಅವಸ್ಥೆ
ಅಭಿವೃದ್ಧಿ ಕಾರ್ಯಗಳಿಗೆ ನಿರೀಕ್ಷಿತ ಪ್ರಮಾಣದ ಅನುದಾನ ದೊರೆಯುತ್ತಿಲ್ಲ. ಎಸ್‌ಎಸ್‌ಡಿಪಿ ಯೋಜನೆ ಅಡಿ ತಾಲ್ಲೂಕಿನ ಜಾಲವಾಡಿಗಿ ರಸ್ತೆ ಅಭಿವೃದ್ಧಿಗೆ ₹1 ಕೋಟಿ ಮೀಸಲಿಡಲಾಗಿದೆ. ಕಲಕೇರಿ-ಬೀಡನಾಳ ರಸ್ತೆ ಸೇರಿದಂತೆ ತಾಲ್ಲೂಕಿನ ಎಲ್ಲ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು
ಡಾ.ಚಂದ್ರು ಲಮಾಣಿ ಶಾಸಕ
ಸೇತುವೆ ನಿರ್ಮಾಣಕ್ಕೆ ಆಗ್ರಹ
ಮುಂಡರಗಿ ತಾಲ್ಲೂಕಿನ ನಾಗರಹಳ್ಳಿ-ಬೆಣ್ಣಿಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯದಲ್ಲಿ ಹಳ್ಳವೊಂದು ಹರಿಯುತ್ತಿದೆ. ಮಳೆಗಾಲದಲ್ಲಿ ಹಳ್ಳ ತುಂಬಿ ಹರಿಯುತ್ತದೆ. ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಹಳ್ಳ ತುಂಬಿ ಹರಿಯುವಾಗ ವಿದ್ಯಾರ್ಥಿಗಳು ತರಗತಿಯಿಂದ ವಂಚಿತರಾಗಬೇಕಾಗುತ್ತದೆ. ಕಿರು ಸೇತುವೆ ನಿರ್ಮಿಸಬೇಕು ಎಂದು ಎರಡೂ ಗ್ರಾಮಗಳ ಜನರು ಹಲವು ವರ್ಷಗಳಿಂದ ಒತ್ತಾಯಿಸುತ್ತ ಬಂದಿದ್ದರೂ ಬೇಡಿಕೆ ಈಡೇರಿಲ್ಲ. ಎರಡು ವರ್ಷಗಳ ಹಿಂದೆ ಹಳ್ಳ ದಾಟುವಾಗ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಈ ಸಂದರ್ಭದಲ್ಲಿ ಎರಡೂ ಗ್ರಾಮಗಳ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಮುಂಡರಗಿಗೆ ಸಂಪರ್ಕ ಕಲ್ಪಿಸುವ ಅರಬಾವಿ-ಚಳ್ಳಕೇರಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು. ಅಂದಿನ ಶಾಸಕ ರಾಮಣ್ಣ ಲಮಾಣಿ ಹಾಗೂ ಜಿಲ್ಲಾಧಿಕಾರಿಗಳು ತಕ್ಷಣ ಸೇತುವೆ ನಿರ್ಮಿಸಿಕೊಡುವ ಭರವಸೆ ನೀಡಿದ್ದರು. ಆದರೆ ಈವರೆಗೂ ಸೇತುವೆ ನಿರ್ಮಾಣವಾಗದಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT