<p><strong>ಗದಗ:</strong> ‘ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿನ ಮೀಸಲಾತಿ ವಿರೋಧಿಸಿ ಹೇಳಿಕೆ ನೀಡಿರುವ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಅಕ್ಷಯ್ ಡಿ.ಎಂ.ಗೌಡ ತನ್ನ ಹೇಳಿಕೆಯನ್ನು ಹಿಂಪಡೆದು, ರಾಜ್ಯದ ದಲಿತರ ಕ್ಷಮೆ ಕೇಳಬೇಕು. ಇಲ್ಲವಾದರೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದು ದಲಿತ ಮುಖಂಡ ಮುತ್ತು ಬಿಳೆಯಲಿ ಎಚ್ಚರಿಸಿದ್ದಾರೆ.</p>.<p>‘ರಾಜ್ಯ ಸರ್ಕಾರ ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ನಿಯಮಗಳನ್ನು ಅಳವಡಿಸಿ ನೇಮಕ ಪ್ರಕ್ರಿಯೆ ನಡೆಸಲು ಸುತ್ತೋಲೆ ಹೊರಡಿಸಿತ್ತು. ಅದರಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿ ತಿದ್ದುಪಡಿ ಮಾಡಬೇಕೆಂದು ದಲಿತ ಸಂಘರ್ಷ ಸಮಿತಿಗಳು ರಾಜ್ಯದಾದ್ಯಂತ ಹೋರಾಟ ಮಾಡಿದ್ದವು. ಸರ್ಕಾರ ಹೋರಾಟಕ್ಕೆ ಮಣಿದು ತಿದ್ದುಪಡಿಗೆ ಮುಂದಾಗಿದೆ. ಆದರೆ, ಒಬ್ಬ ಜಾತಿವಾದಿ ಹೊರಗುತ್ತಿಗೆಯಲ್ಲಿ ಮೀಸಲಾತಿ ಕೊಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ’ ಎಂದು ಕಿಡಿಕಾರಿದ್ದಾರೆ. </p>.<p>‘ಒಂದೆಡೆ ಸರ್ಕಾರಿ ಉದ್ಯೋಗಗಳು ಸಿಗದೆ ದಲಿತರು ನಿರುದ್ಯೋಗಿಗಳಾಗಿದ್ದಾರೆ. ಮತ್ತೊಂದೆಡೆ ಖಾಸಗಿ ಕ್ಷೇತ್ರದಲ್ಲಿ ಅಸ್ಪೃಶ್ಯತೆಯಿಂದಾಗಿ ದಲಿತ ಯುವಕರು ಉದ್ಯೋಗ ಸಿಗದೆ ಕಂಗಾಲಾಗಿದ್ದಾರೆ. ಇದನ್ನು ಮನಗಂಡ ಸರ್ಕಾರ ಹೊರಗುತ್ತಿಗೆಯಲ್ಲಿ ಮೀಸಲಾತಿ ಕೊಟ್ಟು ಉದ್ಯೋಗ ಸಿಗುವಂತೆ ಮಾಡಿದೆ’ ಎಂದು ತಿಳಿಸಿದ್ದಾರೆ.</p>.<p>‘ಮೊದಲೆಲ್ಲ ಹೊರಗುತ್ತಿಗೆಯಲ್ಲಿ ಕೆಲಸ ಮಾಡುವವರು ಮೇಲ್ಜಾತಿಯ ಜನರೇ ಹೆಚ್ಚು ಮತ್ತು ಹೊರಗುತ್ತಿಗೆ ಏಜೆನ್ಸಿ ಕಂಪನಿಗಳು ಮೇಲ್ಜಾತಿಯವರದ್ದೇ ಆಗಿದ್ದರಿಂದ ದಲಿತರಿಗೆ ಯಾವುದೇ ಉದ್ಯೋಗ ಅವಕಾಶಗಳು ಸಿಗುತ್ತಿರಲಿಲ್ಲ. ಈ ಗೌಡನ ಮನಸ್ಥಿತಿ ನೋಡಿದರೆ ದಲಿತರು ಸರ್ಕಾರಿ ಉದ್ಯೋಗವೂ ಸಿಗಬಾರದು; ಹೊರಗುತ್ತಿಗೆ ಉದ್ಯೋಗವೂ ಸಿಗಬಾರದು ಎಂಬ ಆಲೋಚನೆ ಇದ್ದಂತಿದೆ’ ಎಂದು ಪ್ರಕಟಣೆಯಲ್ಲಿ ಹರಿಹಾಯ್ದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿನ ಮೀಸಲಾತಿ ವಿರೋಧಿಸಿ ಹೇಳಿಕೆ ನೀಡಿರುವ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಅಕ್ಷಯ್ ಡಿ.ಎಂ.ಗೌಡ ತನ್ನ ಹೇಳಿಕೆಯನ್ನು ಹಿಂಪಡೆದು, ರಾಜ್ಯದ ದಲಿತರ ಕ್ಷಮೆ ಕೇಳಬೇಕು. ಇಲ್ಲವಾದರೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದು ದಲಿತ ಮುಖಂಡ ಮುತ್ತು ಬಿಳೆಯಲಿ ಎಚ್ಚರಿಸಿದ್ದಾರೆ.</p>.<p>‘ರಾಜ್ಯ ಸರ್ಕಾರ ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ನಿಯಮಗಳನ್ನು ಅಳವಡಿಸಿ ನೇಮಕ ಪ್ರಕ್ರಿಯೆ ನಡೆಸಲು ಸುತ್ತೋಲೆ ಹೊರಡಿಸಿತ್ತು. ಅದರಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿ ತಿದ್ದುಪಡಿ ಮಾಡಬೇಕೆಂದು ದಲಿತ ಸಂಘರ್ಷ ಸಮಿತಿಗಳು ರಾಜ್ಯದಾದ್ಯಂತ ಹೋರಾಟ ಮಾಡಿದ್ದವು. ಸರ್ಕಾರ ಹೋರಾಟಕ್ಕೆ ಮಣಿದು ತಿದ್ದುಪಡಿಗೆ ಮುಂದಾಗಿದೆ. ಆದರೆ, ಒಬ್ಬ ಜಾತಿವಾದಿ ಹೊರಗುತ್ತಿಗೆಯಲ್ಲಿ ಮೀಸಲಾತಿ ಕೊಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ’ ಎಂದು ಕಿಡಿಕಾರಿದ್ದಾರೆ. </p>.<p>‘ಒಂದೆಡೆ ಸರ್ಕಾರಿ ಉದ್ಯೋಗಗಳು ಸಿಗದೆ ದಲಿತರು ನಿರುದ್ಯೋಗಿಗಳಾಗಿದ್ದಾರೆ. ಮತ್ತೊಂದೆಡೆ ಖಾಸಗಿ ಕ್ಷೇತ್ರದಲ್ಲಿ ಅಸ್ಪೃಶ್ಯತೆಯಿಂದಾಗಿ ದಲಿತ ಯುವಕರು ಉದ್ಯೋಗ ಸಿಗದೆ ಕಂಗಾಲಾಗಿದ್ದಾರೆ. ಇದನ್ನು ಮನಗಂಡ ಸರ್ಕಾರ ಹೊರಗುತ್ತಿಗೆಯಲ್ಲಿ ಮೀಸಲಾತಿ ಕೊಟ್ಟು ಉದ್ಯೋಗ ಸಿಗುವಂತೆ ಮಾಡಿದೆ’ ಎಂದು ತಿಳಿಸಿದ್ದಾರೆ.</p>.<p>‘ಮೊದಲೆಲ್ಲ ಹೊರಗುತ್ತಿಗೆಯಲ್ಲಿ ಕೆಲಸ ಮಾಡುವವರು ಮೇಲ್ಜಾತಿಯ ಜನರೇ ಹೆಚ್ಚು ಮತ್ತು ಹೊರಗುತ್ತಿಗೆ ಏಜೆನ್ಸಿ ಕಂಪನಿಗಳು ಮೇಲ್ಜಾತಿಯವರದ್ದೇ ಆಗಿದ್ದರಿಂದ ದಲಿತರಿಗೆ ಯಾವುದೇ ಉದ್ಯೋಗ ಅವಕಾಶಗಳು ಸಿಗುತ್ತಿರಲಿಲ್ಲ. ಈ ಗೌಡನ ಮನಸ್ಥಿತಿ ನೋಡಿದರೆ ದಲಿತರು ಸರ್ಕಾರಿ ಉದ್ಯೋಗವೂ ಸಿಗಬಾರದು; ಹೊರಗುತ್ತಿಗೆ ಉದ್ಯೋಗವೂ ಸಿಗಬಾರದು ಎಂಬ ಆಲೋಚನೆ ಇದ್ದಂತಿದೆ’ ಎಂದು ಪ್ರಕಟಣೆಯಲ್ಲಿ ಹರಿಹಾಯ್ದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>