<p><strong>ನರೇಗಲ್</strong>: ಸರ್ವ ಶ್ರೇಷ್ಠ ಭಾರತಕ್ಕಾಗಿ ಮೊತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಜನತೆ ಮುಂದಾಗಬೇಕು. ಈ ಕುರಿತು ಕಾರ್ಯಕ್ರತರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶ್ರಮಿಸಬೇಕು ಎಂದು ರೋಣ ಮಂಡಲ ಬಿಜೆಪಿ ಅಧ್ಯಕ್ಷ ಮುತ್ತಣ್ಣ ತೋಟಪ್ಪ ಕಡಗದ ಹೇಳಿದರು.</p>.<p>ಸಮೀಪದ ಅಬ್ಬಿಗೇರಿ ಗ್ರಾಮದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಶುಕ್ರವಾರ ನಡೆದ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>2024ರ ಲೋಕಸಭಾ ಚುನಾವಣೆ ಈ ದೇಶದ ಭವಿಷ್ಯ ನಿರ್ಧರಿಸುತ್ತದೆ. ನಮ್ಮ ಗುರಿ ಮಾತ್ರ ನರೇಂದ್ರ ಮೋದಿ ಅವರನ್ನು ಗೆಲ್ಲಿಸುವುದು ಆಗಿರಲಿ. ಪ್ರತಿಯೊಬ್ಬ ಕಾರ್ಯಕರ್ತನು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಅದಕ್ಕಾಗಿ ಎಂ.ಪಿ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ತಪ್ಪದೆ ಮತನೀಡುವಂತೆ ಮನೆಮನೆಗೆ ಹೋಗಿ ಕೋರಬೇಕು ಎಂದು ಹೇಳಿದರು.</p>.<p>ಈ ಗ್ರಾಮ ಚಲೋ ಅಭಿಯಾನದ ಮೂಲಕ ಬಿಜೆಪಿ ಕಾರ್ಯಕರ್ತರು ಎಲ್ಲ ಗ್ರಾಮಗಳ ಮನೆ ಮನೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡುವ ಕೆಲಸವನ್ನು ಮಾಡಬೇಕು ಜತೆಗೆ 2047 ರ ಹೊತ್ತಿಗೆ ವಿಕಸಿತ ಭಾರತ ಸಂಕಲ್ಪದ ಬದ್ಧತೆಯನ್ನು ಜನರಿಗೆ ವಿವರಿಸಬೇಕು ಹೇಳಿದರು</p>.<p>ಈ ವೇಳೆ ಸುರೇಶ ನಾಯ್ಕರ, ಭೀಮಪ್ಪ ಹನಮನಾಳ, ಪ್ರಕಾಶ ನಾಯ್ಕರ, ಸಂಗಪ್ಪ ಹಳ್ಳಿ, ಶಿವುಕುಮಾರ ಪಾಟೀಲ, ದೇವಪ್ಪ ಜಂತ್ಲಿ, ರವಿ ಯತ್ನಟ್ಟಿ, ತಿಪ್ಪಣ್ಣ ತಲ್ಲೂರ, ಮುತ್ತಣ್ಣ ಹೊಸಮನಿ, ಅಪ್ಪಣ್ಣ ಬಂಡಿ, ಗಿರೀಶ ಚಿಗರಿ, ಶಂಕರ ಇಟಗಿ, ಯಲ್ಲಪ್ಪ ಹಿರೇಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರೇಗಲ್</strong>: ಸರ್ವ ಶ್ರೇಷ್ಠ ಭಾರತಕ್ಕಾಗಿ ಮೊತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಜನತೆ ಮುಂದಾಗಬೇಕು. ಈ ಕುರಿತು ಕಾರ್ಯಕ್ರತರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶ್ರಮಿಸಬೇಕು ಎಂದು ರೋಣ ಮಂಡಲ ಬಿಜೆಪಿ ಅಧ್ಯಕ್ಷ ಮುತ್ತಣ್ಣ ತೋಟಪ್ಪ ಕಡಗದ ಹೇಳಿದರು.</p>.<p>ಸಮೀಪದ ಅಬ್ಬಿಗೇರಿ ಗ್ರಾಮದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಶುಕ್ರವಾರ ನಡೆದ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>2024ರ ಲೋಕಸಭಾ ಚುನಾವಣೆ ಈ ದೇಶದ ಭವಿಷ್ಯ ನಿರ್ಧರಿಸುತ್ತದೆ. ನಮ್ಮ ಗುರಿ ಮಾತ್ರ ನರೇಂದ್ರ ಮೋದಿ ಅವರನ್ನು ಗೆಲ್ಲಿಸುವುದು ಆಗಿರಲಿ. ಪ್ರತಿಯೊಬ್ಬ ಕಾರ್ಯಕರ್ತನು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಅದಕ್ಕಾಗಿ ಎಂ.ಪಿ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ತಪ್ಪದೆ ಮತನೀಡುವಂತೆ ಮನೆಮನೆಗೆ ಹೋಗಿ ಕೋರಬೇಕು ಎಂದು ಹೇಳಿದರು.</p>.<p>ಈ ಗ್ರಾಮ ಚಲೋ ಅಭಿಯಾನದ ಮೂಲಕ ಬಿಜೆಪಿ ಕಾರ್ಯಕರ್ತರು ಎಲ್ಲ ಗ್ರಾಮಗಳ ಮನೆ ಮನೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡುವ ಕೆಲಸವನ್ನು ಮಾಡಬೇಕು ಜತೆಗೆ 2047 ರ ಹೊತ್ತಿಗೆ ವಿಕಸಿತ ಭಾರತ ಸಂಕಲ್ಪದ ಬದ್ಧತೆಯನ್ನು ಜನರಿಗೆ ವಿವರಿಸಬೇಕು ಹೇಳಿದರು</p>.<p>ಈ ವೇಳೆ ಸುರೇಶ ನಾಯ್ಕರ, ಭೀಮಪ್ಪ ಹನಮನಾಳ, ಪ್ರಕಾಶ ನಾಯ್ಕರ, ಸಂಗಪ್ಪ ಹಳ್ಳಿ, ಶಿವುಕುಮಾರ ಪಾಟೀಲ, ದೇವಪ್ಪ ಜಂತ್ಲಿ, ರವಿ ಯತ್ನಟ್ಟಿ, ತಿಪ್ಪಣ್ಣ ತಲ್ಲೂರ, ಮುತ್ತಣ್ಣ ಹೊಸಮನಿ, ಅಪ್ಪಣ್ಣ ಬಂಡಿ, ಗಿರೀಶ ಚಿಗರಿ, ಶಂಕರ ಇಟಗಿ, ಯಲ್ಲಪ್ಪ ಹಿರೇಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>